ಮದ್ದೂರು : ಮಹಾತ್ಮ ಗಾಂಧಿ ನರೇಗಾ ಯೋಜನೆಯ ಜಾಬ್ ಕಾರ್ಡ್ಗಳಿಗೆ ಇ-ಕೆವೈಸಿ ಕಡ್ಡಾಯವಾಗಿದೆ. ಅ.೩೧ರೊಳಗೆ ಎಲ್ಲ ಸಕ್ರಿಯ ಕೂಲಿಕಾರರು ತಮ್ಮ ಆಧಾರ್ ಕಾರ್ಡ್ಗಳೊಂದಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ತಾಪಂ ಇಒ ರಾಮಲಿಂಗಯ್ಯ ತಿಳಿಸಿದರು.
ತಾಲ್ಲೂಕಿನ ೪೨ ವಿವಿಧ ಗ್ರಾಪಂ ವ್ಯಾಪ್ಯಿಯಲ್ಲಿರುವ ಮಹಾತ್ಮ ಗಾಂಧಿ ನರೇಗಾ ಯೋಜನೆಯ ನೋಂದಾಯಿತ ಕುಟುಂಬಗಳ ಜಾಬ್ಕಾರ್ಡ್ಗಳಿಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಸೂಚಿಸಿದರು.
ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಆದೇಶದಂತೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪಾರದರ್ಶಕ ಆಡಳಿತ ಜಾರಿಗೆ ತರುವ ಹಿನ್ನೆಲೆಯಲ್ಲಿ ಪ್ರತಿ ಜಾಬ್ಕಾರ್ಡ್ನ ಪ್ರತಿಯೊಬ್ಬ ಕೂಲಿಕಾರರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಆದ್ದರಿಂದ ಸಕ್ರಿಯ ಕೂಲಿಕಾರರ ಜಾಬ್ ಕಾರ್ಡ್ಗಳಿಗೆ ಕಡ್ಡಾಯವಾಗಿ ಮಾಡಿಸಬೇಕು ಎಂದು ತಿಳಿಸಿದರು.
ಇದನ್ನೂ ಓದಿ:-ಪಾಕ್-ಅಫ್ಗಾನಿಸ್ತಾನ ಸಂಘರ್ಷ : ಕಂದಹಾರ್ ಮೇಲೆ ಪಾಕ್ ವೈಮಾನಿಕ ದಾಳಿ, ಸಾವಿನ ಶಂಕೆ
ತಾಲ್ಲೂಕಿನ ೪೨ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅ.೩೧ ಇ-ಕೆವೈಸಿ ಮಾಡಿಸುವ ಕೊನೆ ದಿನಾಂಕವಾಗಿದೆ. ಆದ್ದರಿಂದ ಎಲ್ಲ ಸಕ್ರಿಯ ಕೂಲಿಕಾರರು ತಮ್ಮ ಜಾಬ್ಕಾರ್ಡ್, ಆಧಾರ್ ಕಾರ್ಡ್ ಗಳೊಂದಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.
ಎ.ಡಿ.ಮಂಜುನಾಥ ಮಾತನಾಡಿ ನರೇಗಾ ಯೋಜನೆಯಡಿ ನೋಂದಾಯಿತ ಕೂಲಿಕಾರರಲ್ಲಿ ಸಕ್ರಿಯ ಕೂಲಿಕಾರರ ಮಾಹಿತಿಯನ್ನು ಎಸ್ಎಂಎಂಎಸ್ ಮೊಬೈಲ್ ತಂತ್ರಾಂಶದಲ್ಲಿ ಇ-ಕೆವೈಸಿ ಮಾಡುವ ಬಗ್ಗೆ ಈಗಾಗಲೇ ಎಲ್ಲ ಗ್ರಾಪಂ, ಗ್ರಾಮ ಮಟ್ಟದಲ್ಲಿ ಜನರಿಗೆ ಅರಿವು ಮೂಡಿಸಲಾಗುತ್ತಿದೆ. ನರೇಗಾ ತಂತ್ರಾಂಶದಲ್ಲಿ ಇ-ಕೆವೈಸಿ ಅಪ್ಡೆಟ್ ಮಾಡಿಸಲು ಗ್ರಾಪಂ ಮಟ್ಟದ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಮನೆ ಮನೆಗೆ ಗ್ರಾಪಂ ಸಿಬ್ಬಂದಿ ಇ-ಕೆವೈಸಿ ಮಾಡಿಸಿಕೊಳ್ಳಲು ಬರುತ್ತಿದ್ದು, ಅವರಿಗೆ ಸಹಕಾರ ನೀಡಬೇಕು ಎಂದು ತಿಳಿಸಿದರು.
ಕೆವೈಸಿಯ ಹೆಚ್ಚಿನ ಮಾಹಿತಿಗೆ ಆಯಾ ಗ್ರಾಪಂ ಪಿಡಿಒ, ಕಾರ್ಯದರ್ಶಿ, ಡಿಇಒ, ಬಿಎಫ್ಟಿ, ಜಿಕೆಎಂ ಅವರನ್ನು ಸಂಪರ್ಕಿಸಬಹುದು ಎಂದು ರಾಮಲಿಂಗಯ್ಯ ಮಾಹಿತಿ ನೀಡಿದರು.
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…
ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು…
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…