ಮಂಡ್ಯ

ಜಾಬ್ ಕಾರ್ಡ್‌ಗಳಿಗೆ ಇ-ಕೆವೈಸಿ ಕಡ್ಡಾಯ

ಮದ್ದೂರು : ಮಹಾತ್ಮ ಗಾಂಧಿ ನರೇಗಾ ಯೋಜನೆಯ ಜಾಬ್ ಕಾರ್ಡ್‌ಗಳಿಗೆ ಇ-ಕೆವೈಸಿ ಕಡ್ಡಾಯವಾಗಿದೆ. ಅ.೩೧ರೊಳಗೆ ಎಲ್ಲ ಸಕ್ರಿಯ ಕೂಲಿಕಾರರು ತಮ್ಮ ಆಧಾರ್ ಕಾರ್ಡ್‌ಗಳೊಂದಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ತಾಪಂ ಇಒ ರಾಮಲಿಂಗಯ್ಯ ತಿಳಿಸಿದರು.

ತಾಲ್ಲೂಕಿನ ೪೨ ವಿವಿಧ ಗ್ರಾಪಂ ವ್ಯಾಪ್ಯಿಯಲ್ಲಿರುವ ಮಹಾತ್ಮ ಗಾಂಧಿ ನರೇಗಾ ಯೋಜನೆಯ ನೋಂದಾಯಿತ ಕುಟುಂಬಗಳ ಜಾಬ್‌ಕಾರ್ಡ್‌ಗಳಿಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಸೂಚಿಸಿದರು.

ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಆದೇಶದಂತೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪಾರದರ್ಶಕ ಆಡಳಿತ ಜಾರಿಗೆ ತರುವ ಹಿನ್ನೆಲೆಯಲ್ಲಿ ಪ್ರತಿ ಜಾಬ್‌ಕಾರ್ಡ್‌ನ ಪ್ರತಿಯೊಬ್ಬ ಕೂಲಿಕಾರರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಆದ್ದರಿಂದ ಸಕ್ರಿಯ ಕೂಲಿಕಾರರ ಜಾಬ್ ಕಾರ್ಡ್‌ಗಳಿಗೆ ಕಡ್ಡಾಯವಾಗಿ ಮಾಡಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ:-ಪಾಕ್-ಅಫ್ಗಾನಿಸ್ತಾನ ಸಂಘರ್ಷ : ಕಂದಹಾರ್‌ ಮೇಲೆ ಪಾಕ್‌ ವೈಮಾನಿಕ ದಾಳಿ, ಸಾವಿನ ಶಂಕೆ

ತಾಲ್ಲೂಕಿನ ೪೨ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅ.೩೧ ಇ-ಕೆವೈಸಿ ಮಾಡಿಸುವ ಕೊನೆ ದಿನಾಂಕವಾಗಿದೆ. ಆದ್ದರಿಂದ ಎಲ್ಲ ಸಕ್ರಿಯ ಕೂಲಿಕಾರರು ತಮ್ಮ ಜಾಬ್‌ಕಾರ್ಡ್, ಆಧಾರ್ ಕಾರ್ಡ್ ಗಳೊಂದಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.

ಎ.ಡಿ.ಮಂಜುನಾಥ ಮಾತನಾಡಿ ನರೇಗಾ ಯೋಜನೆಯಡಿ ನೋಂದಾಯಿತ ಕೂಲಿಕಾರರಲ್ಲಿ ಸಕ್ರಿಯ ಕೂಲಿಕಾರರ ಮಾಹಿತಿಯನ್ನು ಎಸ್‌ಎಂಎಂಎಸ್ ಮೊಬೈಲ್ ತಂತ್ರಾಂಶದಲ್ಲಿ ಇ-ಕೆವೈಸಿ ಮಾಡುವ ಬಗ್ಗೆ ಈಗಾಗಲೇ ಎಲ್ಲ ಗ್ರಾಪಂ, ಗ್ರಾಮ ಮಟ್ಟದಲ್ಲಿ ಜನರಿಗೆ ಅರಿವು ಮೂಡಿಸಲಾಗುತ್ತಿದೆ. ನರೇಗಾ ತಂತ್ರಾಂಶದಲ್ಲಿ ಇ-ಕೆವೈಸಿ ಅಪ್ಡೆಟ್ ಮಾಡಿಸಲು ಗ್ರಾಪಂ ಮಟ್ಟದ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಮನೆ ಮನೆಗೆ ಗ್ರಾಪಂ ಸಿಬ್ಬಂದಿ ಇ-ಕೆವೈಸಿ ಮಾಡಿಸಿಕೊಳ್ಳಲು ಬರುತ್ತಿದ್ದು, ಅವರಿಗೆ ಸಹಕಾರ ನೀಡಬೇಕು ಎಂದು ತಿಳಿಸಿದರು.

ಕೆವೈಸಿಯ ಹೆಚ್ಚಿನ ಮಾಹಿತಿಗೆ ಆಯಾ ಗ್ರಾಪಂ ಪಿಡಿಒ, ಕಾರ್ಯದರ್ಶಿ, ಡಿಇಒ, ಬಿಎಫ್‌ಟಿ, ಜಿಕೆಎಂ ಅವರನ್ನು ಸಂಪರ್ಕಿಸಬಹುದು ಎಂದು ರಾಮಲಿಂಗಯ್ಯ ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

1 hour ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

1 hour ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

1 hour ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

1 hour ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

2 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

2 hours ago