ಮಂಡ್ಯ: ಹೈಕೋರ್ಟ್ ನಲ್ಲಿ ನಮ್ಮ ಅರ್ಜಿ ವಿಚಾರಣೆಗೆ ಬರುವ ಹಿಂದಿನ ದಿನ ED ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಕೆ.ಆರ್.ಪೇಟೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, EDಯವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಿಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಕಿಡಿಕಾರಿದರು.
ಈ ವಿಚಾರಕ್ಕೆ ಸಂಬಂಧಪಟ್ಟಂತೆ ನಾಳೆ ನಮ್ಮ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆಗೆ ಬರುತ್ತಿದೆ. ಇದಕ್ಕೆ ಒಂದು ದಿನ ಮೊದಲು ಮಾಧ್ಯಮಗಳಲ್ಲಿ ಪ್ರಚಾರ ಮಾಡಿರುವುದರ ಹಿಂದೆ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಲಯವನ್ನು ಪೂರ್ವಾಗ್ರಹದ ನಿಲುವಿಗೆ ತರುವ ದುರುದ್ದೇಶದ ರಾಜಕೀಯ ನಡೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಡಿಸೆಂಬರ್.24ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಬೇಕಿದ್ದರೆ EDಯವರು ಲೋಕಾಯುಕ್ತಕ್ಕೆ ವರದಿ ನೋಡಲು ಅವಕಾಶವಿತ್ತು. ಅದನ್ನು ಬಿಟ್ಟು ಈ ರೀತಿ ಮಾಡಿರುವುದರ ಹಿಂದಿನ ಉದ್ದೇಶ ರಾಜ್ಯದ ಜನರಿಗೆ ಅರ್ಥವಾಗುತ್ತದೆ ಎಂದರು.
ಮಂತ್ರಿ ಮಂಡಲ ಪುನಾರಚನೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು, ಮಂತ್ರಿಮಂಡಲ ಪುನಾರಚನೆ ಮಾಡ್ತೀವಿ ಅಂತ ನಾನು ಹೇಳಿದ್ನಾ? ನೀವೇ ನಿಮ್ಮ ಪಾಡಿಗೆ ಕಲ್ಪಿಸಿಕೊಂಡು ಸುದ್ದಿ ಮಾಡಿದ್ರಿ. ಈಗ ನನ್ನ ಬಳಿ ಉತ್ತರ ಕೇಳಿದರೆ ಹೇಗೆ? ಈ ಬಗ್ಗೆ ಹೈಕಮಾಂಡ್ ಕೂಡ ಸೂಚನೆ ಕೊಟ್ಟಿಲ್ಲ ಎಂದರು.
ಇನ್ನು ನಾಳೆ ಹಾಸನದಲ್ಲಿ ನಡೆಯುತ್ತಿರುವ ಸಮಾವೇಶದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷದಿಂದ ಸಮಾವೇಶ ನಡೆಯುತ್ತಿದೆ ಎಂದರು. ಈ ವೇಳೆ ಸಚಿವರಾದ ಕೆ.ಎನ್.ರಾಜಣ್ಣ, ಚಲುವರಾಯಸ್ವಾಮಿ ಮತ್ತು ಶಾಸಕರುಗಳು ಉಪಸ್ಥಿತರಿದ್ದರು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…