ಮಂಡ್ಯ: ಹೈಕೋರ್ಟ್ ನಲ್ಲಿ ನಮ್ಮ ಅರ್ಜಿ ವಿಚಾರಣೆಗೆ ಬರುವ ಹಿಂದಿನ ದಿನ ED ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಕೆ.ಆರ್.ಪೇಟೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, EDಯವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಿಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಕಿಡಿಕಾರಿದರು.
ಈ ವಿಚಾರಕ್ಕೆ ಸಂಬಂಧಪಟ್ಟಂತೆ ನಾಳೆ ನಮ್ಮ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆಗೆ ಬರುತ್ತಿದೆ. ಇದಕ್ಕೆ ಒಂದು ದಿನ ಮೊದಲು ಮಾಧ್ಯಮಗಳಲ್ಲಿ ಪ್ರಚಾರ ಮಾಡಿರುವುದರ ಹಿಂದೆ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಲಯವನ್ನು ಪೂರ್ವಾಗ್ರಹದ ನಿಲುವಿಗೆ ತರುವ ದುರುದ್ದೇಶದ ರಾಜಕೀಯ ನಡೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಡಿಸೆಂಬರ್.24ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಬೇಕಿದ್ದರೆ EDಯವರು ಲೋಕಾಯುಕ್ತಕ್ಕೆ ವರದಿ ನೋಡಲು ಅವಕಾಶವಿತ್ತು. ಅದನ್ನು ಬಿಟ್ಟು ಈ ರೀತಿ ಮಾಡಿರುವುದರ ಹಿಂದಿನ ಉದ್ದೇಶ ರಾಜ್ಯದ ಜನರಿಗೆ ಅರ್ಥವಾಗುತ್ತದೆ ಎಂದರು.
ಮಂತ್ರಿ ಮಂಡಲ ಪುನಾರಚನೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು, ಮಂತ್ರಿಮಂಡಲ ಪುನಾರಚನೆ ಮಾಡ್ತೀವಿ ಅಂತ ನಾನು ಹೇಳಿದ್ನಾ? ನೀವೇ ನಿಮ್ಮ ಪಾಡಿಗೆ ಕಲ್ಪಿಸಿಕೊಂಡು ಸುದ್ದಿ ಮಾಡಿದ್ರಿ. ಈಗ ನನ್ನ ಬಳಿ ಉತ್ತರ ಕೇಳಿದರೆ ಹೇಗೆ? ಈ ಬಗ್ಗೆ ಹೈಕಮಾಂಡ್ ಕೂಡ ಸೂಚನೆ ಕೊಟ್ಟಿಲ್ಲ ಎಂದರು.
ಇನ್ನು ನಾಳೆ ಹಾಸನದಲ್ಲಿ ನಡೆಯುತ್ತಿರುವ ಸಮಾವೇಶದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷದಿಂದ ಸಮಾವೇಶ ನಡೆಯುತ್ತಿದೆ ಎಂದರು. ಈ ವೇಳೆ ಸಚಿವರಾದ ಕೆ.ಎನ್.ರಾಜಣ್ಣ, ಚಲುವರಾಯಸ್ವಾಮಿ ಮತ್ತು ಶಾಸಕರುಗಳು ಉಪಸ್ಥಿತರಿದ್ದರು.
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…