ಮಂಡ್ಯ

ಬರಡು ನೆಲದಲ್ಲಿ ವಿದ್ಯಾಲಯ ಸ್ಥಾಪಿಸಿದ ಶ್ರೀಗಳು: ಎಚ್‌.ಡಿ ದೇವೇಗೌಡ ಅಭಿಮತ

ನಾಗಮಂಗಲ(ಮಂಡ್ಯ ಜಿಲ್ಲೆ): 50 ವರ್ಷಗಳ ಹಿಂದೆ ಡಾ:ಬಾಲಗಂಗಾಧರನಾಥ್ ಸ್ವಾಮೀಜಿ ಅವರು ಬರಡು ನೆಲದ ಈ ಗ್ರಾಮೀಣ ಭಾಗದಲ್ಲಿ ವಿದ್ಯಾಸಂಸ್ಥೆಗಳನ್ನು ಕಟ್ಟಿ ಬೆಳೆಸುವ ಮೂಲಕ ವಿದ್ಯಾರ್ಥಿಗಳ ಬಾಳಲ್ಲಿ ಬೆಳಕು ತಂದರು ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಹೇಳಿದರು.

ಶುಕ್ರವಾರ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ಉಪರಾಷ್ಟ್ರತಿ ಜಗದೀಪ್‌ ಧನಕರ್‌ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿದ್ದ ವೈದ್ಯಕೀಯ ಮಹಾವಿದ್ಯಾಲಯದ ಸಂವಾದ ಕಾರ್ಯಕ್ರಮ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ಪ್ರವೇಶ ಕಾರ್ಯಕ್ರಮ ಪಾಲ್ಗೊಂಡು ಅವರು ಮಾತನಾಡಿದರು.

ವಿದ್ಯಭ್ಯಾಸಕ್ಕೆ ಯಾವುದೇ ಜಾತಿ, ಬಡತನ ಸಿರಿತನದ ಗೋಡೆ ಇಲ್ಲ. ಎಲ್ಲರಿಗೂ ಸಹ ಶಿಕ್ಷಣ ಸಿಗಬೇಕು ಎಂಬುದು ಬಾಲ ಗಂಗಾಧರನಾಥ ಸ್ವಾಮೀಜಿ ಅವರ ಆಶಯವಾಗಿತ್ತು. ಅವರು ಸ್ಥಾಪಿಸಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ಸಾವಿರಾರು ಮಕ್ಕಳು ವಿದ್ಯಾಭ್ಯಾಸ ಮಾಡಿ ದೇಶ ವಿದೇಶಗಳಲ್ಲಿ ಕೆಲಸ ಮಾಡಿ ಬದುಕು ಕಟ್ಟಿಕೊಂಡಿದ್ದಾರೆ. ಅವರಿಗೆ ʻಭಾರತ ರತ್ನʼ ಸಿಗಬೇಕಿತ್ತು ಎಂದು ಹೇಳಿದರು.

ಪ್ರಸ್ತುತ ರಾಜ್ಯ ಮತ್ತು ಲೋಕಸಭೆಯಲ್ಲಿ ಘನತೆ, ಶಿಸ್ತು ಇಲ್ಲವಾಗಿದೆ. ಕೇಲವ ಕಚ್ಚಾಟದ ಮಾತುಗಳೇ ಹೆಚ್ಚಾಗಿದೆ. ಇವರೆಲ್ಲರನ್ನೂ ನಿಯಂತ್ರಿಸುತ್ತಿರುವ ಜಗದೀಪ್ ಧನಕರ್‌ ಅವರ ತಾಳ್ಮೆ-ಜಾಣ್ಮೆ ಮೆಚ್ಚುವಂಥದ್ದು ಎಂದು ಶ್ಲಾಘಿಸಿದರು.

ಆದಿಚುಂಚನಗಿರಿ ಮಠದ ಪೀಠಧ್ಯಕ್ಷರಾದ ಡಾ. ಶ್ರೀ ನಿರ್ಮಲಾ ನಂದನಾಥ ಸ್ವಾಮೀಜಿ ಮಾತನಾಡಿ, ಈ ಹಿಂದೆ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರು ನಮ್ಮ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಿದ್ದರು. 20 ವರ್ಷಗಳ ನಂತರ ರಾಷ್ಟ್ರದ ಉಪರಾಷ್ಟ್ರಪತಿಗಳು ಸಂವಾದ ನಡೆಸಲು ನಮ್ಮ ಸಂಸ್ಥೆಗೆ ಆಗಮಿಸಿರುವುದು ಅವಿಸ್ಮರಣೀಯಗಳಿಗೆ ಎಂದರು.

ನಮ್ಮ ಸಂಸ್ಥೆಯಲ್ಲಿರುವ ಶೇಕಡಾ 90ರಷ್ಟು ಮಕ್ಕಳು ಗ್ರಾಮೀಣ ಭಾಗದ ವಿದ್ಯಾರ್ಥಿಗಳೆ ಆಗಿದ್ದಾರೆ. ಇಂದಿನ ವೈಜ್ಞಾನಿಕ ಹಾಗೂ ತಂತ್ರಜ್ಞಾನಕ್ಕೆ ತಕ್ಕಂತೆ ಡಿಜಿಮೆಡ್ ಆಪ್ ಬಿಡುಗಡೆಗೊಳಿಸಿದ್ದೇವೆ. ಇಲ್ಲಿನ ವೈದ್ಯಕೀಯ ವಿದ್ಯಾರ್ಥಿಗಳು ತಂತ್ರಜ್ಞಾನ, ಕೃತಕ ಬುದ್ಧಿಮತ್ತೆಯ ಬಗ್ಗೆ ತಿಳಿದುಕೊಂಡು ಟೆಕ್ಬೋ ಡಾಕ್ಟರ್ ಗಳಾಗಿ ಹೊರಹೊಮ್ಮಲ್ಲಿ ಎಂದು ಆಶಿಸಿದರು.

ಗುಜರಾತ್‌ ರಾಜ್‌ಕೋಟ್‌ನ ಹರ್ಷ ವಿದ್ಯಾಮಂದಿರ ಪರಮಾತ್ಮನಂದ ಸರಸ್ವತಿ ಜೀ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ನಿರ್ಮಲಾನಂದನಾಥ ಸ್ವಾಮೀಜಿ ಅವರು ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರಿಗೆ ಪೇಟ ತೊಡಿಸಿ, ಮೈಸೂರು ದಸರಾ ಮೆರವಣಿಗೆಯ ಕಲಾಕೃತಿ ನೀಡಿ ಸನ್ಮಾನಿಸಿದರು. ವೇದಿಕೆಯಲ್ಲಿ ಉಪರಾಷ್ಟ್ರಪತಿ ಪತ್ನಿ ಸುದೇಶ್ ಧನಕರ್ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

9 mins ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

22 mins ago

ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ: ಡಾ.ಕುಮಾರ

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…

39 mins ago

ಮಂಡ್ಯ| ಬೂದನೂರು ಉತ್ಸವಕ್ಕೆ ಭರದ ಸಿದ್ಧತೆ: ಈ ಬಾರಿ ಹೆಲಿ ಟೂರಿಸಂ ಆಕರ್ಷಣೆ

ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…

55 mins ago

ಈ ವರ್ಷ ಬಿಸಿಲ ಝಳವೂ ಹೆಚ್ಚಳ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…

1 hour ago

ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…

1 hour ago