ಮಂಡ್ಯ

ಬರಡು ನೆಲದಲ್ಲಿ ವಿದ್ಯಾಲಯ ಸ್ಥಾಪಿಸಿದ ಶ್ರೀಗಳು: ಎಚ್‌.ಡಿ ದೇವೇಗೌಡ ಅಭಿಮತ

ನಾಗಮಂಗಲ(ಮಂಡ್ಯ ಜಿಲ್ಲೆ): 50 ವರ್ಷಗಳ ಹಿಂದೆ ಡಾ:ಬಾಲಗಂಗಾಧರನಾಥ್ ಸ್ವಾಮೀಜಿ ಅವರು ಬರಡು ನೆಲದ ಈ ಗ್ರಾಮೀಣ ಭಾಗದಲ್ಲಿ ವಿದ್ಯಾಸಂಸ್ಥೆಗಳನ್ನು ಕಟ್ಟಿ ಬೆಳೆಸುವ ಮೂಲಕ ವಿದ್ಯಾರ್ಥಿಗಳ ಬಾಳಲ್ಲಿ ಬೆಳಕು ತಂದರು ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಹೇಳಿದರು.

ಶುಕ್ರವಾರ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ಉಪರಾಷ್ಟ್ರತಿ ಜಗದೀಪ್‌ ಧನಕರ್‌ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿದ್ದ ವೈದ್ಯಕೀಯ ಮಹಾವಿದ್ಯಾಲಯದ ಸಂವಾದ ಕಾರ್ಯಕ್ರಮ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ಪ್ರವೇಶ ಕಾರ್ಯಕ್ರಮ ಪಾಲ್ಗೊಂಡು ಅವರು ಮಾತನಾಡಿದರು.

ವಿದ್ಯಭ್ಯಾಸಕ್ಕೆ ಯಾವುದೇ ಜಾತಿ, ಬಡತನ ಸಿರಿತನದ ಗೋಡೆ ಇಲ್ಲ. ಎಲ್ಲರಿಗೂ ಸಹ ಶಿಕ್ಷಣ ಸಿಗಬೇಕು ಎಂಬುದು ಬಾಲ ಗಂಗಾಧರನಾಥ ಸ್ವಾಮೀಜಿ ಅವರ ಆಶಯವಾಗಿತ್ತು. ಅವರು ಸ್ಥಾಪಿಸಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ಸಾವಿರಾರು ಮಕ್ಕಳು ವಿದ್ಯಾಭ್ಯಾಸ ಮಾಡಿ ದೇಶ ವಿದೇಶಗಳಲ್ಲಿ ಕೆಲಸ ಮಾಡಿ ಬದುಕು ಕಟ್ಟಿಕೊಂಡಿದ್ದಾರೆ. ಅವರಿಗೆ ʻಭಾರತ ರತ್ನʼ ಸಿಗಬೇಕಿತ್ತು ಎಂದು ಹೇಳಿದರು.

ಪ್ರಸ್ತುತ ರಾಜ್ಯ ಮತ್ತು ಲೋಕಸಭೆಯಲ್ಲಿ ಘನತೆ, ಶಿಸ್ತು ಇಲ್ಲವಾಗಿದೆ. ಕೇಲವ ಕಚ್ಚಾಟದ ಮಾತುಗಳೇ ಹೆಚ್ಚಾಗಿದೆ. ಇವರೆಲ್ಲರನ್ನೂ ನಿಯಂತ್ರಿಸುತ್ತಿರುವ ಜಗದೀಪ್ ಧನಕರ್‌ ಅವರ ತಾಳ್ಮೆ-ಜಾಣ್ಮೆ ಮೆಚ್ಚುವಂಥದ್ದು ಎಂದು ಶ್ಲಾಘಿಸಿದರು.

ಆದಿಚುಂಚನಗಿರಿ ಮಠದ ಪೀಠಧ್ಯಕ್ಷರಾದ ಡಾ. ಶ್ರೀ ನಿರ್ಮಲಾ ನಂದನಾಥ ಸ್ವಾಮೀಜಿ ಮಾತನಾಡಿ, ಈ ಹಿಂದೆ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರು ನಮ್ಮ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಿದ್ದರು. 20 ವರ್ಷಗಳ ನಂತರ ರಾಷ್ಟ್ರದ ಉಪರಾಷ್ಟ್ರಪತಿಗಳು ಸಂವಾದ ನಡೆಸಲು ನಮ್ಮ ಸಂಸ್ಥೆಗೆ ಆಗಮಿಸಿರುವುದು ಅವಿಸ್ಮರಣೀಯಗಳಿಗೆ ಎಂದರು.

ನಮ್ಮ ಸಂಸ್ಥೆಯಲ್ಲಿರುವ ಶೇಕಡಾ 90ರಷ್ಟು ಮಕ್ಕಳು ಗ್ರಾಮೀಣ ಭಾಗದ ವಿದ್ಯಾರ್ಥಿಗಳೆ ಆಗಿದ್ದಾರೆ. ಇಂದಿನ ವೈಜ್ಞಾನಿಕ ಹಾಗೂ ತಂತ್ರಜ್ಞಾನಕ್ಕೆ ತಕ್ಕಂತೆ ಡಿಜಿಮೆಡ್ ಆಪ್ ಬಿಡುಗಡೆಗೊಳಿಸಿದ್ದೇವೆ. ಇಲ್ಲಿನ ವೈದ್ಯಕೀಯ ವಿದ್ಯಾರ್ಥಿಗಳು ತಂತ್ರಜ್ಞಾನ, ಕೃತಕ ಬುದ್ಧಿಮತ್ತೆಯ ಬಗ್ಗೆ ತಿಳಿದುಕೊಂಡು ಟೆಕ್ಬೋ ಡಾಕ್ಟರ್ ಗಳಾಗಿ ಹೊರಹೊಮ್ಮಲ್ಲಿ ಎಂದು ಆಶಿಸಿದರು.

ಗುಜರಾತ್‌ ರಾಜ್‌ಕೋಟ್‌ನ ಹರ್ಷ ವಿದ್ಯಾಮಂದಿರ ಪರಮಾತ್ಮನಂದ ಸರಸ್ವತಿ ಜೀ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ನಿರ್ಮಲಾನಂದನಾಥ ಸ್ವಾಮೀಜಿ ಅವರು ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರಿಗೆ ಪೇಟ ತೊಡಿಸಿ, ಮೈಸೂರು ದಸರಾ ಮೆರವಣಿಗೆಯ ಕಲಾಕೃತಿ ನೀಡಿ ಸನ್ಮಾನಿಸಿದರು. ವೇದಿಕೆಯಲ್ಲಿ ಉಪರಾಷ್ಟ್ರಪತಿ ಪತ್ನಿ ಸುದೇಶ್ ಧನಕರ್ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

4 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

4 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

4 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

4 hours ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

4 hours ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

4 hours ago