ಮಂಡ್ಯ

ಬರಡು ನೆಲದಲ್ಲಿ ವಿದ್ಯಾಲಯ ಸ್ಥಾಪಿಸಿದ ಶ್ರೀಗಳು: ಎಚ್‌.ಡಿ ದೇವೇಗೌಡ ಅಭಿಮತ

ನಾಗಮಂಗಲ(ಮಂಡ್ಯ ಜಿಲ್ಲೆ): 50 ವರ್ಷಗಳ ಹಿಂದೆ ಡಾ:ಬಾಲಗಂಗಾಧರನಾಥ್ ಸ್ವಾಮೀಜಿ ಅವರು ಬರಡು ನೆಲದ ಈ ಗ್ರಾಮೀಣ ಭಾಗದಲ್ಲಿ ವಿದ್ಯಾಸಂಸ್ಥೆಗಳನ್ನು ಕಟ್ಟಿ ಬೆಳೆಸುವ ಮೂಲಕ ವಿದ್ಯಾರ್ಥಿಗಳ ಬಾಳಲ್ಲಿ ಬೆಳಕು ತಂದರು ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಹೇಳಿದರು.

ಶುಕ್ರವಾರ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ಉಪರಾಷ್ಟ್ರತಿ ಜಗದೀಪ್‌ ಧನಕರ್‌ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿದ್ದ ವೈದ್ಯಕೀಯ ಮಹಾವಿದ್ಯಾಲಯದ ಸಂವಾದ ಕಾರ್ಯಕ್ರಮ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ಪ್ರವೇಶ ಕಾರ್ಯಕ್ರಮ ಪಾಲ್ಗೊಂಡು ಅವರು ಮಾತನಾಡಿದರು.

ವಿದ್ಯಭ್ಯಾಸಕ್ಕೆ ಯಾವುದೇ ಜಾತಿ, ಬಡತನ ಸಿರಿತನದ ಗೋಡೆ ಇಲ್ಲ. ಎಲ್ಲರಿಗೂ ಸಹ ಶಿಕ್ಷಣ ಸಿಗಬೇಕು ಎಂಬುದು ಬಾಲ ಗಂಗಾಧರನಾಥ ಸ್ವಾಮೀಜಿ ಅವರ ಆಶಯವಾಗಿತ್ತು. ಅವರು ಸ್ಥಾಪಿಸಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ಸಾವಿರಾರು ಮಕ್ಕಳು ವಿದ್ಯಾಭ್ಯಾಸ ಮಾಡಿ ದೇಶ ವಿದೇಶಗಳಲ್ಲಿ ಕೆಲಸ ಮಾಡಿ ಬದುಕು ಕಟ್ಟಿಕೊಂಡಿದ್ದಾರೆ. ಅವರಿಗೆ ʻಭಾರತ ರತ್ನʼ ಸಿಗಬೇಕಿತ್ತು ಎಂದು ಹೇಳಿದರು.

ಪ್ರಸ್ತುತ ರಾಜ್ಯ ಮತ್ತು ಲೋಕಸಭೆಯಲ್ಲಿ ಘನತೆ, ಶಿಸ್ತು ಇಲ್ಲವಾಗಿದೆ. ಕೇಲವ ಕಚ್ಚಾಟದ ಮಾತುಗಳೇ ಹೆಚ್ಚಾಗಿದೆ. ಇವರೆಲ್ಲರನ್ನೂ ನಿಯಂತ್ರಿಸುತ್ತಿರುವ ಜಗದೀಪ್ ಧನಕರ್‌ ಅವರ ತಾಳ್ಮೆ-ಜಾಣ್ಮೆ ಮೆಚ್ಚುವಂಥದ್ದು ಎಂದು ಶ್ಲಾಘಿಸಿದರು.

ಆದಿಚುಂಚನಗಿರಿ ಮಠದ ಪೀಠಧ್ಯಕ್ಷರಾದ ಡಾ. ಶ್ರೀ ನಿರ್ಮಲಾ ನಂದನಾಥ ಸ್ವಾಮೀಜಿ ಮಾತನಾಡಿ, ಈ ಹಿಂದೆ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರು ನಮ್ಮ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಿದ್ದರು. 20 ವರ್ಷಗಳ ನಂತರ ರಾಷ್ಟ್ರದ ಉಪರಾಷ್ಟ್ರಪತಿಗಳು ಸಂವಾದ ನಡೆಸಲು ನಮ್ಮ ಸಂಸ್ಥೆಗೆ ಆಗಮಿಸಿರುವುದು ಅವಿಸ್ಮರಣೀಯಗಳಿಗೆ ಎಂದರು.

ನಮ್ಮ ಸಂಸ್ಥೆಯಲ್ಲಿರುವ ಶೇಕಡಾ 90ರಷ್ಟು ಮಕ್ಕಳು ಗ್ರಾಮೀಣ ಭಾಗದ ವಿದ್ಯಾರ್ಥಿಗಳೆ ಆಗಿದ್ದಾರೆ. ಇಂದಿನ ವೈಜ್ಞಾನಿಕ ಹಾಗೂ ತಂತ್ರಜ್ಞಾನಕ್ಕೆ ತಕ್ಕಂತೆ ಡಿಜಿಮೆಡ್ ಆಪ್ ಬಿಡುಗಡೆಗೊಳಿಸಿದ್ದೇವೆ. ಇಲ್ಲಿನ ವೈದ್ಯಕೀಯ ವಿದ್ಯಾರ್ಥಿಗಳು ತಂತ್ರಜ್ಞಾನ, ಕೃತಕ ಬುದ್ಧಿಮತ್ತೆಯ ಬಗ್ಗೆ ತಿಳಿದುಕೊಂಡು ಟೆಕ್ಬೋ ಡಾಕ್ಟರ್ ಗಳಾಗಿ ಹೊರಹೊಮ್ಮಲ್ಲಿ ಎಂದು ಆಶಿಸಿದರು.

ಗುಜರಾತ್‌ ರಾಜ್‌ಕೋಟ್‌ನ ಹರ್ಷ ವಿದ್ಯಾಮಂದಿರ ಪರಮಾತ್ಮನಂದ ಸರಸ್ವತಿ ಜೀ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ನಿರ್ಮಲಾನಂದನಾಥ ಸ್ವಾಮೀಜಿ ಅವರು ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರಿಗೆ ಪೇಟ ತೊಡಿಸಿ, ಮೈಸೂರು ದಸರಾ ಮೆರವಣಿಗೆಯ ಕಲಾಕೃತಿ ನೀಡಿ ಸನ್ಮಾನಿಸಿದರು. ವೇದಿಕೆಯಲ್ಲಿ ಉಪರಾಷ್ಟ್ರಪತಿ ಪತ್ನಿ ಸುದೇಶ್ ಧನಕರ್ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

4 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

8 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

8 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

9 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

9 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

10 hours ago