Mysore
25
clear sky

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಮಂಡ್ಯ: ಚುನಾವಣಾ ವೀಕ್ಷಕರಿಂದ ಮತಗಟ್ಟೆ ಪರಿಶೀಲನೆ

ಮಂಡ್ಯ: ಕರ್ನಾಟಕ ವಿಧಾನ ಪರಿಷತ್ತಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ನಡೆಯುವ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ನೇಮಕವಾಗಿರುವ ಚುನಾವಣಾ ವೀಕ್ಷಕರಾದ ಡಾ. ರವಿಶಂಕರ್ ಅವರು ಇಂದು ಮತಗಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಂಡ್ಯ ಜಿಲ್ಲೆಯಲ್ಲಿ ಜೂನ್ 3 ರಂದು ನಡೆಯಲಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ 9 ಮತಗಟ್ಟೆಗಳನ್ನು ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವೀಕ್ಷಕರು ಇಂದು ಮಂಡ್ಯ ತಾಲ್ಲೂಕು ಪಂಚಾಯತ್ ಹಾಗೂ ತಾಲ್ಲೂಕು ಕಚೇರಿಯಲ್ಲಿ ತೆರೆಯಲಾಗುವ ಮತಗಟ್ಟೆಯಲ್ಲಿ ಮಾಡಿಕೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದರು.

ಇದಕ್ಕೂ ಮುನ್ನ ಚುನಾವಣೆಯ ಸಹಾಯಕ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ. ಕುಮಾರ ಅವರಿಂದ ಚುನಾವಣೆಗೆ ಮಾಡಿಕೊಂಡಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಪರಿಶೀಲನೆಯ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಅಪರ ಜಿಲ್ಲಾಧಿಕಾರಿ ಡಾ. ಎಚ್.ಎಲ್ ನಾಗರಾಜು, ಮಂಡ್ಯ ತಹಶೀಲ್ದಾರ್ ಶಿವಕುಮಾರ ಬಿರಾದಾರ್ ಉಪಸ್ಥಿತರಿದ್ದರು.

Tags:
error: Content is protected !!