ಮಂಡ್ಯ

ಚುನಾವಣೆಗೆ ಕೇಲವೇ ದಿನ ಬಾಕಿ : ಮತದಾರರಿಗೆ ಆಮಿಷ ತಡೆಯಲು ಚುನಾವಣಾ ಅಧಿಕಾರಿ ಸಜ್ಜು

ಮಂಡ್ಯ: ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳಿದ್ದು, ಈ ಸಂದರ್ಭದಲ್ಲಿ ಮತದಾರರಿಗೆ ಆಮಿಷ ಒಡ್ಡುವ ಸಾಧ್ಯತೆ ಹೆಚ್ಚಿರುತ್ತದೆ. ಇದನ್ನು ತಡೆಯಲು ಎಫ್.ಎಸ್.ಟಿ ತಂಡ ಸದಾ ಕಾರ್ಯಪ್ರವೃತ್ತರಾಗಿರಬೇಕು ಎಂದು ಕರ್ನಾಟಕ ರಾಜ್ಯ ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಚುನಾವಣಾ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಎಫ್.ಎಸ್.ಟಿ ತಂಡಗಳ ವಾಹನಕ್ಕೆ ಜಿ.ಪಿ.ಎಸ್ ಅಳವಡಿಸಿ ಅವರ ವಾಹನ ಚಲನೆಯ ಸ್ಥಳಗಳ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಿಂದ ನಿಗಾ ವಹಿಸಲಾಗುತ್ತಿದೆ. ಈ ವಾಹನಗಳು ಅರ್ಧ ಗಂಟೆಯಿಂದ ಹೆಚ್ಚು ಕಾಲ ಒಂದೇ ಸ್ಥಳದಲ್ಲಿ ನಿಂತರೆ ತಕ್ಷಣ ಕರೆ ಮಾಡಿ ಕಾರಣ ಕೇಳಿ ಮಾಹಿತಿ ಪಡೆದುಕೊಳ್ಳಿ, ಜೊತೆಗೆ ತಪಾಸಣೆ ಹೆ

ಹೊರ ಜಿಲ್ಲೆಯಿಂದ ಅಕ್ರಮವಾಗಿ ಸಾಗಾಣಿಕೆಯಾಗುವ ಹಣ ಮತ್ತು ವಸ್ತುಗಳ ಮೇಲೆ ಚೆಕ್ಬಪೋಸ್ಟ್ ಗಳಲ್ಲಿ ತೀವ್ರ ನಿಗಾ ವಹಿಸಬೇಕು. ಜಿಲ್ಲೆಯ ಒಳಭಾಗದಲ್ಲಿ ಸಾಗಾಣಿಕೆಯಾಗುವ ಹಣ ಮತ್ತು ವಸ್ತುಗಳ ಮೇಲೆ ಸ್ಥಳೀಯ ಪೊಲೀಸ್, ಎಫ್.ಎಸ್.ಟಿ, ತಂಡಗಳು ನಿಗಾ ವಹಿಸಬೇಕು ಸೂಚನೆ ನೀಡಿದರು.

ಅಭ್ಯರ್ಥಿಯ ಚುನಾವಣಾ ವೆಚ್ಚವನ್ನು ಮೇಲ್ವಿಚರಣಾ ತಂಡಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಪ್ರತಿಯೊಂದು ವೆಚ್ಚವನ್ನು ಲೆಕ್ಕಕ್ಕೆ ಸೇರಿಸಿ ವರದಿ ನೀಡಬೇಕು. ಮತದಾನ ಪ್ರಾರಂಭವಾಗುವ 72 ಗಂಟೆಗಳ ಅವಧಿಯಲ್ಲಿ ಚುನಾವಣಾ ಆಯೋಗ ನೀಡಿರುವ ನಿರ್ದೇಶನದಂತೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡು, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರವಹಿಸಿ ಎಂದರು.

ಮಂಡ್ಯ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ರಚಿಸಲಾಗಿರುವ ವಿವಿಧ ತಂಡಗಳು, ಚೆಕ್ ಪೋಸ್ಟ್, ವಶಪಡಿಸಿಕೊಂಡಿರುವ ನಗದು, ಮದ್ಯ ಹಾಗೂ ಇನ್ನಿತರೆ ವಸ್ತುಗಳ ಬಗ್ಗೆ ಜಿಲ್ಲಾಧಿಕಾರಿ ಡಾ: ಕುಮಾರ ಸಭೆಗೆ ಮಾಹಿತಿ ನೀಡಿದರು.

ಸಭೆಯ ನಂತರ ಲೋಕಸಭಾ ಚುನಾವಣೆ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಕಂಟ್ರೋಲ್ ರೂಂ, ಮೀಡಿಯಾ ಮಾನಿಟರಿಂಗ್ ಸೆಲ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಭೆಯಲ್ಲಿ ಚುನಾವಣಾ ವೆಚ್ಚ ವೀಕ್ಷಕರಾದ ರೋಹಿತ್ ಅಸುದಾನಿ, ಕುಮಾರ್ ಪ್ರಿಯತಮ್ ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಚಂದ್ರಶೇಖರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

7 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

10 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

12 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

12 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

12 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

13 hours ago