ಮಂಡ್ಯ: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಎಲೆಕ್ಟ್ರಿಕ್ ಕಾರೊಂದು ಬೆಂಕಿಯಿಂದ ಹೊತ್ತಿ ಉರಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಮಂಡ್ಯ ಜಿಲ್ಲೆಯ ಮದ್ದೂರಿನ ಮದ್ದೂರಮ್ಮ ದೇಗುಲದ ಮೇಲ್ಭಾಗದ ದಶಪಥ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದ್ದು, ಸದ್ಯ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಚಲಿಸುತ್ತಿರುವಾಗ ಇದ್ದಕ್ಕಿದ್ದಂತೆ ಕಾರು ಉರಿದಿದ್ದು, ಉರಿದ ತೀವ್ರತೆಗೆ 1 ಕಿ.ಮೀ ದೂರದವರೆಗೂ ಹೊಗೆಯ ಛಾಯೆ ಗೋಚರಿಸಿದೆ.
ಅಗ್ನಿಶಾಮಕ ಸಿಬ್ಬಂದಿಗಳಿಂದ ಸ್ಥಳಕ್ಕೆ ಬರುವ ಹೊತ್ತಿಗೆ, ಬೆಂಕಿಯ ಕೆನ್ನಾಲೆಗೆ ಕಾರು ಸಂಪೂರ್ಣ ಸುಟ್ಟು ಹೋಗಿತ್ತು.
ಹೆದ್ದಾರಿಯಲ್ಲಿ ಕಾರು ಉರಿದಿದ್ದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಠಿಯಾಗಿತ್ತು. ಈ ಘಟನೆ ಸಂಬಂಧ ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





