ಮಂಡ್ಯ

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಸೂಪರ್ ಮಾರ್ಕೆಟ್ ಭಸ್ಮ

ಪಾಂಡವಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಪಟ್ಟಣದ ರೈನ್ ಬೋ ಸೂಪರ್ ಮಾರ್ಕೆಟ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿ ಲಕ್ಷಾಂತರ ರೂ. ನಷ್ಟವಾಗಿರುವ ಘಟನೆ ಶುಕ್ರವಾರ ( ಮೇ 24 ) ಮುಂಜಾನೆ ನಡೆದಿದೆ.

ತಾಲ್ಲೂಕಿನ ಬನಘಟ್ಟ ನಿವಾಸಿ ಧನರಾಜ್ ಎಂಬುವವರಿಗೆ ಸೇರಿದ ಸೂಪರ್ ಮಾರ್ಕೆಟ್ ಇದಾಗಿದೆ. ಶುಕ್ರವಾರ ಮುಂಜಾನೆ ಸೂಪರ್ ಮಾರ್ಕೆಟ್‌ನ ಫ್ರಿಡ್ಜ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಕ್ಯಾಶ್ ಕೌಂಟರ್‌ಗೆ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಸಂಪೂರ್ಣವಾಗಿ ಸೂಪರ್ ಮಾರ್ಕೆಟ್‌ಗೆ ಬೆಂಕಿ ಆವರಿಸಿ ಇಡೀ ಸೂಪರ್ ಮಾರ್ಕೆಟ್ ಶೇ. 70ರಷ್ಟು ಸುಟ್ಟು ಕರಕಲಾಗಿದೆ.

ಸೂಪರ್ ಮಾರ್ಕೆಟ್‌ಗೆ ಬೆಂಕಿ ತಗುಲಿರುವುದನ್ನು ಕಂಡ ಸ್ಥಳೀಯರು ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಅಷ್ಟರಲ್ಲಿ ಬಹುತೇಕ ಅಂಗಡಿ ಸುಟ್ಟುಕರಕಲಾಗಿತ್ತು.
ಘಟನೆಯಿಂದ ಕ್ಯಾಶ್ ಕೌಂಟರ್‌ನಲ್ಲಿದ್ದ 2 ಲಕ್ಷ ನಗದು ಹಾಗೂ ದಿನಸಿ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿದ್ದು, ಸುಮಾರು 40 ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ ಎಂದು ಮಾಲೀಕ ಧನರಾಜ್ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಿ.ಟಿ. ಮೋಹನ್ ಕುಮಾರ್

ಮಂಡ್ಯ ಜಿಲ್ಲೆ, ಮಂಡ್ಯ ತಾಲ್ಲೂಕು ಹೊಸಬೂದನೂರು ಗ್ರಾಮದ ನಾನು ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂ.ಎ. (ಎಂಸಿಜೆ) ಮಾಡಿ, 1999ರಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. 1999ರಲ್ಲಿ `ಆಂದೋಲನ' ಪತ್ರಿಕೆಯಲ್ಲಿ ಮೊದಲು ಪೇಜ್ ಡಿಸೈನರ್ ಆಗಿ ಕೆಲಸಕ್ಕೆ ಸೇರಿದ ಅನುಭವ ಪಡೆದು, 2001ರಲ್ಲಿ `ಆಂದೋಲನ' ಪತ್ರಿಕೆಯಲ್ಲೇ ಜಿಲ್ಲಾ ವರದಿಗಾರನಾದೆ. 2001ರಿಂದ 2008ರವರೆಗೆ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದ ನಾನು, 2009ರಿಂದ `ಪ್ರಜಾನುಡಿ' ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿ, 2011ರಲ್ಲಿ `ವಿಜಯ ವಾಣಿ' ಪತ್ರಿಕೆಯ ಮೈಸೂರು ವಿಭಾಗದ ಹಿರಿಯ ಉಪ ಸಂಪಾದಕನಾಗಿ ಕೆಲಸ ನಿರ್ವಹಿಸಿದೆ. ಸುಮಾರು ಮೂರೂವರೆ ವರ್ಷ ಕೆಲಸ ನಿರ್ವಹಿಸಿ, 2015ರಲ್ಲಿ `ರಾಜ್ಯ ಧರ್ಮ' ಪತ್ರಿಕೆಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದೆ. 2019ರಲ್ಲಿ ಮತ್ತೆ `ಆಂದೋಲನ' ಪತ್ರಿಕೆಯ ಮಂಡ್ಯ ಜಿಲ್ಲಾ ಹಿರಿಯ ವರದಿಗಾರನಾಗಿ ನೇಮಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸವಾಗಿದೆ.

Recent Posts

ಸಂಸದ ಯದುವೀರ್‌ ಒಡೆಯರ್‌ ಭೇಟಿಯಾದ ಪ್ರತಾಪ್‌ ಸಿಂಹ

ಮೈಸೂರು: ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಸಂಸದ ಯದುವೀರ್‌ ಒಡೆಯರ್‌ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…

20 mins ago

ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ “ಲ್ಯಾಂಡ್ ಲಾರ್ಡ್” ಸಿನಿಮಾ ನೋಡಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…

1 hour ago

ಜಮ್ಮು-ಕಾಶ್ಮೀರದಲ್ಲಿ ಭಾರೀ ಹಿಮಪಾತ: ಜನಜೀವನ ಅಸ್ತವ್ಯಸ್ತ

ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…

1 hour ago

ಪಾಕಿಸ್ತಾನ ಮದುವೆ ಸಮಾರಂಭದಲ್ಲಿ ಆತ್ಮಾಹುತಿ ದಾಳಿ: ಐವರು ಸಾವು

ಪೇಶಾವರ: ಪಾಕಿಸ್ತಾನದ ವಾಯುವ್ಯ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದ ಶಾಂತಿ ಸಮಿತಿ ಸದಸ್ಯರ ಮನೆಯಲ್ಲಿ ಶುಕ್ರವಾರ ರಾತ್ರಿ ನಡೆದ ವಿವಾಹ ಸಮಾರಂಭದ…

1 hour ago

ಪೌರಾಯುಕ್ತೆಗೆ ಬೆದರಿಕೆ ಹಾಕಿದ ಪ್ರಕರಣ: ರಾಜೀವ್‌ಗೌಡ ಮನೆಗಳಿಗೆ ನೋಟಿಸ್‌ ಅಂಟಿಸಿದ ಪೊಲೀಸರು

ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಪತ್ತೆಗಾಗಿ ಪೊಲೀಸರು…

2 hours ago

ಓದುಗರ ಪತ್ರ: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಿ

ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…

5 hours ago