ಮಂಡ್ಯ

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಸೂಪರ್ ಮಾರ್ಕೆಟ್ ಭಸ್ಮ

ಪಾಂಡವಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಪಟ್ಟಣದ ರೈನ್ ಬೋ ಸೂಪರ್ ಮಾರ್ಕೆಟ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿ ಲಕ್ಷಾಂತರ ರೂ. ನಷ್ಟವಾಗಿರುವ ಘಟನೆ ಶುಕ್ರವಾರ ( ಮೇ 24 ) ಮುಂಜಾನೆ ನಡೆದಿದೆ.

ತಾಲ್ಲೂಕಿನ ಬನಘಟ್ಟ ನಿವಾಸಿ ಧನರಾಜ್ ಎಂಬುವವರಿಗೆ ಸೇರಿದ ಸೂಪರ್ ಮಾರ್ಕೆಟ್ ಇದಾಗಿದೆ. ಶುಕ್ರವಾರ ಮುಂಜಾನೆ ಸೂಪರ್ ಮಾರ್ಕೆಟ್‌ನ ಫ್ರಿಡ್ಜ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಕ್ಯಾಶ್ ಕೌಂಟರ್‌ಗೆ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಸಂಪೂರ್ಣವಾಗಿ ಸೂಪರ್ ಮಾರ್ಕೆಟ್‌ಗೆ ಬೆಂಕಿ ಆವರಿಸಿ ಇಡೀ ಸೂಪರ್ ಮಾರ್ಕೆಟ್ ಶೇ. 70ರಷ್ಟು ಸುಟ್ಟು ಕರಕಲಾಗಿದೆ.

ಸೂಪರ್ ಮಾರ್ಕೆಟ್‌ಗೆ ಬೆಂಕಿ ತಗುಲಿರುವುದನ್ನು ಕಂಡ ಸ್ಥಳೀಯರು ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಅಷ್ಟರಲ್ಲಿ ಬಹುತೇಕ ಅಂಗಡಿ ಸುಟ್ಟುಕರಕಲಾಗಿತ್ತು.
ಘಟನೆಯಿಂದ ಕ್ಯಾಶ್ ಕೌಂಟರ್‌ನಲ್ಲಿದ್ದ 2 ಲಕ್ಷ ನಗದು ಹಾಗೂ ದಿನಸಿ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿದ್ದು, ಸುಮಾರು 40 ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ ಎಂದು ಮಾಲೀಕ ಧನರಾಜ್ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಿ.ಟಿ. ಮೋಹನ್ ಕುಮಾರ್

ಮಂಡ್ಯ ಜಿಲ್ಲೆ, ಮಂಡ್ಯ ತಾಲ್ಲೂಕು ಹೊಸಬೂದನೂರು ಗ್ರಾಮದ ನಾನು ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂ.ಎ. (ಎಂಸಿಜೆ) ಮಾಡಿ, 1999ರಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. 1999ರಲ್ಲಿ `ಆಂದೋಲನ' ಪತ್ರಿಕೆಯಲ್ಲಿ ಮೊದಲು ಪೇಜ್ ಡಿಸೈನರ್ ಆಗಿ ಕೆಲಸಕ್ಕೆ ಸೇರಿದ ಅನುಭವ ಪಡೆದು, 2001ರಲ್ಲಿ `ಆಂದೋಲನ' ಪತ್ರಿಕೆಯಲ್ಲೇ ಜಿಲ್ಲಾ ವರದಿಗಾರನಾದೆ. 2001ರಿಂದ 2008ರವರೆಗೆ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದ ನಾನು, 2009ರಿಂದ `ಪ್ರಜಾನುಡಿ' ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿ, 2011ರಲ್ಲಿ `ವಿಜಯ ವಾಣಿ' ಪತ್ರಿಕೆಯ ಮೈಸೂರು ವಿಭಾಗದ ಹಿರಿಯ ಉಪ ಸಂಪಾದಕನಾಗಿ ಕೆಲಸ ನಿರ್ವಹಿಸಿದೆ. ಸುಮಾರು ಮೂರೂವರೆ ವರ್ಷ ಕೆಲಸ ನಿರ್ವಹಿಸಿ, 2015ರಲ್ಲಿ `ರಾಜ್ಯ ಧರ್ಮ' ಪತ್ರಿಕೆಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದೆ. 2019ರಲ್ಲಿ ಮತ್ತೆ `ಆಂದೋಲನ' ಪತ್ರಿಕೆಯ ಮಂಡ್ಯ ಜಿಲ್ಲಾ ಹಿರಿಯ ವರದಿಗಾರನಾಗಿ ನೇಮಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸವಾಗಿದೆ.

Recent Posts

ಜಿಲ್ಲೆಯಲ್ಲಿ ಜಾನುವಾರುಗಳ ಮೇವು-ನೀರಿಗಿಲ್ಲ ಬರ!

ಮುಂದಿನ 34 ವಾರಗಳಿಗೆ ಆಗುವಷ್ಟು ಮೇವು ದಾಸ್ತಾನು; ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆಯೂ ದೂರ ಕೆ.ಬಿ.ರಮೇಶ ನಾಯಕ ಮೈಸೂರು :…

12 mins ago

ಆರ್.ಟಿ.ವಿಠಲಮೂರ್ತಿ ಅವರ ಬೆಂಗಳೂರು ಡೈರಿ ; ಸಂಪುಟ ಪುನರಚನೆಗೆ ಸಜ್ಜಾದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನರಚನೆಗೆ ತಯಾರಿ ಆರಂಭಿಸಿದ್ದಾರೆ. ಬಜೆಟ್ ಅಧಿವೇಶನ ಮುಗಿದ ನಂತರ ದಿಲ್ಲಿಗೆ ತೆರಳಲಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್…

26 mins ago

ಮಾಗುಡಿಲು ಗ್ರಾಮಕ್ಕೆ ಸಂಜೆಯ ನಂತರ ಬಸ್‌ ಇಲ್ಲದೆ ತೊಂದರೆ

ಸರಗೂರು ಕಡೆಯಿಂದ ಗ್ರಾಮಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ ದಾಸೇಗೌಡ ಸರಗೂರು : ತಾಲ್ಲೂಕಿನ ಮಾಗುಡಿಲು ಗ್ರಾಮದಲ್ಲಿ ಪ್ರತಿದಿನ ಕೆಎಸ್ಆರ್‌ಟಿಸಿ…

1 hour ago

ಬಾವಿ ನೀರಿಗಾಗಿ ಅನಸೂಯ ಅವಿಸ್ಮರಣೀಯ ಹೋರಾಟ

ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…

3 hours ago

ಆಂದೋಲನ ಸಂಪಾದಕೀಯ | ರೈಲ್ವೆ ಇಲಾಖೆಗೆ ಕನ್ನಡ, ಕನ್ನಡಿಗರ ಬಗ್ಗೆ ತಾತ್ಸಾರ ಸಲ್ಲದು

ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…

3 hours ago

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…

3 hours ago