ಮಂಡ್ಯ

ಮಂಡ್ಯದಲ್ಲಿ ಎಸ್‌.ಎಂ ಕೃಷ್ಣಗೆ ಭಾವನಾತ್ಮಕ ಶ್ರದ್ಧಾಂಜಲಿ ಕಾರ್ಯಕ್ರಮ; ಎನ್.ಚಲುವರಾಯಸ್ವಾಮಿ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ವೇದಿಕೆ ಸಂಚಾಲಕರಾಗಿ ಶಾಸಕ ದಿನೇಶ್ ಗೂಳಿಗೌಡರ ನಿಯೋಜನೆ

ಬೆಂಗಳೂರು: ರಾಜ್ಯದ ಧೀಮಂತ ನಾಯಕರು, ಮುತ್ಸುದ್ಧಿ ರಾಜಕಾರಣಿ, ಮಂಡ್ಯ ಜಿಲ್ಲೆಯ ಸುಪುತ್ರರಾದ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರಿಗೆ ಜಿಲ್ಲೆಯ ಮತ್ತು ರಾಜ್ಯದ ಜನತೆ ಪರವಾಗಿ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲು ದಿವ್ಯಚೇತನ ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆ ಮುಂದಾಗಿದೆ.

ಸರ್ಕಾರಿ ನಿವಾಸ 7 ಮಿನಿಸ್ಟರ್ ಕ್ವಾಟರ್ಸ್ ನಲ್ಲಿ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಮಂಡ್ಯ ಜಿಲ್ಲೆಯ ಜನಪ್ರಧಿನಿಧಿಗಳು, ಮುಖಂಡರು, ಎಸ್.ಎಂ.ಕೃಷ್ಣ ಅವರ ಅಭಿಮಾನಿಗಳ ಜೊತೆಗಿನ  ಶ್ರದ್ಧಾಂಜಲಿ ಪೂರ್ವಭಾವಿ ಸಭೆ ನಡೆಯಿತು.

ಎಸ್.ಎಂ.ಕೃಷ್ಣ ಅವರಿಗೆ ಭಾವ ನಮನ, ಗೀತ ನಮನ, ಚಿತ್ರ ನಮನ, ಪುಷ್ಪ ನಮನ ಹಾಗೂ ದೀಪ ನಮನ ಒಳಗೊಂಡಂತೆ ಐದು ರೂಪದಲ್ಲಿ ನಮನ ಸಲ್ಲಿಸಲು ಸಭೆಯಲ್ಲಿ ಚರ್ಚಿಸಲಾಯಿತು.

ಡಿಸಿಎಂ ಜೊತೆ ಚರ್ಚಿಸಿ ದಿನಾಂಕ ನಿಗದಿ

ಈ ವೇಳೆ ಮಾತನಾಡಿದ ಸಚಿವ ಎನ್.ಚಲುವರಾಯಸ್ವಾಮಿ, ಹಿರಿಯ ರಾಜಕಾರಣಿ, ಧೀಮಂತ ನಾಯಕರು, ಅಭಿವೃದ್ಧಿಯ ಹರಿಕಾರರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸುವ ತೀರ್ಮಾನಿಸಲಾಗಿದೆ. ದಿವ್ಯಚೇತನ ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯ ಈ ಕಾರ್ಯಕ್ರಮಕ್ಕೆ ಸಂಚಾಲಕರನ್ನಾಗಿ ಶಾಸಕರಾದ ದಿನೇಶ್ ಗೂಳಿಗೌಡ ಅವರನ್ನು ನಿಯೋಜಿಸಲಾಗಿದೆ. ಕಾರ್ಯಕ್ರಮದ ದಿನಾಂಕ, ಸಿದ್ಧತೆ ಮತ್ತು ರೂಪುರೇಷೆಗಳನ್ನು ವಿದೇಶ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿಗೆ ವಾಪಸ್ ಆದ ನಂತರ ಅವರೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

 

ಸಭೆಯಲ್ಲಿ ಮಂಡ್ಯ ಶಾಸಕ ರವಿಕುಮಾರ್ ಗಣಿಗ, ವಿಧಾನಪರಿಷತ್ ಸದಸ್ಯರಾದ ಮಧು ಜಿ.ಮಾದೇಗೌಡ, ಮಾಜಿ ಶಾಸಕರುಗಳಾದ ಶಿವರಾಮೇಗೌಡ, ಕೆ.ಬಿ.ಚಂದ್ರಶೇಖರ್, ವಿಧಾನಪರಿಷತ್ ಮಾಜಿ ಸದಸ್ಯ ಮರಿತಿಬ್ಬೇಗೌಡ, ಹಿರಿಯ ಐಪಿಎಸ್ ಅಧಿಕಾರಿ ರವಿಕಾಂತೇಗೌಡ, ಮಂಡ್ಯ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ವೆಂಕಟರಮಣೇಗೌಡ (ಸ್ಟಾರ್ ಚಂದ್ರು), ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಜಯಪ್ರಕಾಶ್ ಗೌಡ, ಸತ್ಯಾನಂದ, ರಾಮು, ಅಮರನಾಥಗೌಡ, ಎನ್.ಎಸ್.ರಮೇಶ್ ಸೇರಿದಂತೆ ಮಂಡ್ಯ ಜಿಲ್ಲೆಯ ಹಲವು ಮುಖಂಡರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದ ಗ್ರೇಟ್‌ ನಿಕೋಬಾರ್‌ ಯೋಜನೆ : ವಿಕಾಸವೋ? ವಿನಾಶವೋ?

ಶುಭಾ ಖಟಾವಕರ ಮ್ಹೆತ್ರಸ್‌ 72,000 ಕೋಟಿ ರೂ.ಗಳಿಂದ 90,000 ಕೋಟಿ ರೂ.ವೆಚ್ಚದ ಯೋಜನೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ…

14 mins ago

ಕಳೆದ ಚುನಾವಣೆ : ಇಬ್ಬರು ಪರಿಣಿತರ ವಿಶ್ಲೇಷಣೆ

ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…

42 mins ago

ತಾಯಂದಿರ ದಿನ ವಿಶೇಷ | ನನ್ನ ಕರುಳ ಕುಡಿ ನನ್ನದೇ ಆಯ್ಕೆ

ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ      ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…

1 hour ago

ಮಡಿಕೇರಿ | ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ; ಸಾರ್ವಜನಿಕೆ ಕೆಲಸ ವಿಳಂಬ

ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…

2 hours ago

ಎಚ್.ಡಿ.ಕೋಟೆ | ಉತ್ತಮ ಮಳೆ ; ಕೃಷಿ ಚಟುವಟಿಕೆ ಚುರುಕುಗೊಳಿಸಿದ ರೈತರು

ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ…

2 hours ago

ಚಾ.ನಗರ ವಿ.ವಿ | ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಿಎಚ್‌.ಡಿಗೆ ಅವಕಾಶ

ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ…

2 hours ago