ಮಂಡ್ಯ

ಮಂಡ್ಯದಲ್ಲಿ ಎಸ್‌.ಎಂ ಕೃಷ್ಣಗೆ ಭಾವನಾತ್ಮಕ ಶ್ರದ್ಧಾಂಜಲಿ ಕಾರ್ಯಕ್ರಮ; ಎನ್.ಚಲುವರಾಯಸ್ವಾಮಿ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ವೇದಿಕೆ ಸಂಚಾಲಕರಾಗಿ ಶಾಸಕ ದಿನೇಶ್ ಗೂಳಿಗೌಡರ ನಿಯೋಜನೆ

ಬೆಂಗಳೂರು: ರಾಜ್ಯದ ಧೀಮಂತ ನಾಯಕರು, ಮುತ್ಸುದ್ಧಿ ರಾಜಕಾರಣಿ, ಮಂಡ್ಯ ಜಿಲ್ಲೆಯ ಸುಪುತ್ರರಾದ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರಿಗೆ ಜಿಲ್ಲೆಯ ಮತ್ತು ರಾಜ್ಯದ ಜನತೆ ಪರವಾಗಿ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲು ದಿವ್ಯಚೇತನ ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆ ಮುಂದಾಗಿದೆ.

ಸರ್ಕಾರಿ ನಿವಾಸ 7 ಮಿನಿಸ್ಟರ್ ಕ್ವಾಟರ್ಸ್ ನಲ್ಲಿ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಮಂಡ್ಯ ಜಿಲ್ಲೆಯ ಜನಪ್ರಧಿನಿಧಿಗಳು, ಮುಖಂಡರು, ಎಸ್.ಎಂ.ಕೃಷ್ಣ ಅವರ ಅಭಿಮಾನಿಗಳ ಜೊತೆಗಿನ  ಶ್ರದ್ಧಾಂಜಲಿ ಪೂರ್ವಭಾವಿ ಸಭೆ ನಡೆಯಿತು.

ಎಸ್.ಎಂ.ಕೃಷ್ಣ ಅವರಿಗೆ ಭಾವ ನಮನ, ಗೀತ ನಮನ, ಚಿತ್ರ ನಮನ, ಪುಷ್ಪ ನಮನ ಹಾಗೂ ದೀಪ ನಮನ ಒಳಗೊಂಡಂತೆ ಐದು ರೂಪದಲ್ಲಿ ನಮನ ಸಲ್ಲಿಸಲು ಸಭೆಯಲ್ಲಿ ಚರ್ಚಿಸಲಾಯಿತು.

ಡಿಸಿಎಂ ಜೊತೆ ಚರ್ಚಿಸಿ ದಿನಾಂಕ ನಿಗದಿ

ಈ ವೇಳೆ ಮಾತನಾಡಿದ ಸಚಿವ ಎನ್.ಚಲುವರಾಯಸ್ವಾಮಿ, ಹಿರಿಯ ರಾಜಕಾರಣಿ, ಧೀಮಂತ ನಾಯಕರು, ಅಭಿವೃದ್ಧಿಯ ಹರಿಕಾರರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸುವ ತೀರ್ಮಾನಿಸಲಾಗಿದೆ. ದಿವ್ಯಚೇತನ ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯ ಈ ಕಾರ್ಯಕ್ರಮಕ್ಕೆ ಸಂಚಾಲಕರನ್ನಾಗಿ ಶಾಸಕರಾದ ದಿನೇಶ್ ಗೂಳಿಗೌಡ ಅವರನ್ನು ನಿಯೋಜಿಸಲಾಗಿದೆ. ಕಾರ್ಯಕ್ರಮದ ದಿನಾಂಕ, ಸಿದ್ಧತೆ ಮತ್ತು ರೂಪುರೇಷೆಗಳನ್ನು ವಿದೇಶ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿಗೆ ವಾಪಸ್ ಆದ ನಂತರ ಅವರೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

 

ಸಭೆಯಲ್ಲಿ ಮಂಡ್ಯ ಶಾಸಕ ರವಿಕುಮಾರ್ ಗಣಿಗ, ವಿಧಾನಪರಿಷತ್ ಸದಸ್ಯರಾದ ಮಧು ಜಿ.ಮಾದೇಗೌಡ, ಮಾಜಿ ಶಾಸಕರುಗಳಾದ ಶಿವರಾಮೇಗೌಡ, ಕೆ.ಬಿ.ಚಂದ್ರಶೇಖರ್, ವಿಧಾನಪರಿಷತ್ ಮಾಜಿ ಸದಸ್ಯ ಮರಿತಿಬ್ಬೇಗೌಡ, ಹಿರಿಯ ಐಪಿಎಸ್ ಅಧಿಕಾರಿ ರವಿಕಾಂತೇಗೌಡ, ಮಂಡ್ಯ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ವೆಂಕಟರಮಣೇಗೌಡ (ಸ್ಟಾರ್ ಚಂದ್ರು), ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಜಯಪ್ರಕಾಶ್ ಗೌಡ, ಸತ್ಯಾನಂದ, ರಾಮು, ಅಮರನಾಥಗೌಡ, ಎನ್.ಎಸ್.ರಮೇಶ್ ಸೇರಿದಂತೆ ಮಂಡ್ಯ ಜಿಲ್ಲೆಯ ಹಲವು ಮುಖಂಡರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

10 mins ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

1 hour ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

2 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

2 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

2 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

4 hours ago