ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
ವೇದಿಕೆ ಸಂಚಾಲಕರಾಗಿ ಶಾಸಕ ದಿನೇಶ್ ಗೂಳಿಗೌಡರ ನಿಯೋಜನೆ
ಬೆಂಗಳೂರು: ರಾಜ್ಯದ ಧೀಮಂತ ನಾಯಕರು, ಮುತ್ಸುದ್ಧಿ ರಾಜಕಾರಣಿ, ಮಂಡ್ಯ ಜಿಲ್ಲೆಯ ಸುಪುತ್ರರಾದ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರಿಗೆ ಜಿಲ್ಲೆಯ ಮತ್ತು ರಾಜ್ಯದ ಜನತೆ ಪರವಾಗಿ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲು ದಿವ್ಯಚೇತನ ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆ ಮುಂದಾಗಿದೆ.
ಸರ್ಕಾರಿ ನಿವಾಸ 7 ಮಿನಿಸ್ಟರ್ ಕ್ವಾಟರ್ಸ್ ನಲ್ಲಿ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಮಂಡ್ಯ ಜಿಲ್ಲೆಯ ಜನಪ್ರಧಿನಿಧಿಗಳು, ಮುಖಂಡರು, ಎಸ್.ಎಂ.ಕೃಷ್ಣ ಅವರ ಅಭಿಮಾನಿಗಳ ಜೊತೆಗಿನ ಶ್ರದ್ಧಾಂಜಲಿ ಪೂರ್ವಭಾವಿ ಸಭೆ ನಡೆಯಿತು.
ಎಸ್.ಎಂ.ಕೃಷ್ಣ ಅವರಿಗೆ ಭಾವ ನಮನ, ಗೀತ ನಮನ, ಚಿತ್ರ ನಮನ, ಪುಷ್ಪ ನಮನ ಹಾಗೂ ದೀಪ ನಮನ ಒಳಗೊಂಡಂತೆ ಐದು ರೂಪದಲ್ಲಿ ನಮನ ಸಲ್ಲಿಸಲು ಸಭೆಯಲ್ಲಿ ಚರ್ಚಿಸಲಾಯಿತು.
ಡಿಸಿಎಂ ಜೊತೆ ಚರ್ಚಿಸಿ ದಿನಾಂಕ ನಿಗದಿ
ಈ ವೇಳೆ ಮಾತನಾಡಿದ ಸಚಿವ ಎನ್.ಚಲುವರಾಯಸ್ವಾಮಿ, ಹಿರಿಯ ರಾಜಕಾರಣಿ, ಧೀಮಂತ ನಾಯಕರು, ಅಭಿವೃದ್ಧಿಯ ಹರಿಕಾರರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸುವ ತೀರ್ಮಾನಿಸಲಾಗಿದೆ. ದಿವ್ಯಚೇತನ ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯ ಈ ಕಾರ್ಯಕ್ರಮಕ್ಕೆ ಸಂಚಾಲಕರನ್ನಾಗಿ ಶಾಸಕರಾದ ದಿನೇಶ್ ಗೂಳಿಗೌಡ ಅವರನ್ನು ನಿಯೋಜಿಸಲಾಗಿದೆ. ಕಾರ್ಯಕ್ರಮದ ದಿನಾಂಕ, ಸಿದ್ಧತೆ ಮತ್ತು ರೂಪುರೇಷೆಗಳನ್ನು ವಿದೇಶ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿಗೆ ವಾಪಸ್ ಆದ ನಂತರ ಅವರೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಮಂಡ್ಯ ಶಾಸಕ ರವಿಕುಮಾರ್ ಗಣಿಗ, ವಿಧಾನಪರಿಷತ್ ಸದಸ್ಯರಾದ ಮಧು ಜಿ.ಮಾದೇಗೌಡ, ಮಾಜಿ ಶಾಸಕರುಗಳಾದ ಶಿವರಾಮೇಗೌಡ, ಕೆ.ಬಿ.ಚಂದ್ರಶೇಖರ್, ವಿಧಾನಪರಿಷತ್ ಮಾಜಿ ಸದಸ್ಯ ಮರಿತಿಬ್ಬೇಗೌಡ, ಹಿರಿಯ ಐಪಿಎಸ್ ಅಧಿಕಾರಿ ರವಿಕಾಂತೇಗೌಡ, ಮಂಡ್ಯ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ವೆಂಕಟರಮಣೇಗೌಡ (ಸ್ಟಾರ್ ಚಂದ್ರು), ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಜಯಪ್ರಕಾಶ್ ಗೌಡ, ಸತ್ಯಾನಂದ, ರಾಮು, ಅಮರನಾಥಗೌಡ, ಎನ್.ಎಸ್.ರಮೇಶ್ ಸೇರಿದಂತೆ ಮಂಡ್ಯ ಜಿಲ್ಲೆಯ ಹಲವು ಮುಖಂಡರು ಉಪಸ್ಥಿತರಿದ್ದರು.
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…