ಮಂಡ್ಯ

ಸರ್ಕಾರಿ ಯೋಜನೆ ಜನರಿಗೆ ತಲುಪಲು ನೌಕರರ ಪಾತ್ರ ಹೆಚ್ಚು : ಜಿಲ್ಲಾಧಿಕಾರಿ

ಮಂಡ್ಯ : ಜಿಲ್ಲೆಯ ಸರ್ಕಾರಿ ನೌಕರರು ಜಿಲ್ಲೆಗೆ ಉತ್ತಮ ಹೆಸರು ತರುವಂತಹ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಅಧಿಕಾರಿಗಳನ್ನು ಅಭಿನಂದಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಜಿಲ್ಲಾ ಶಾಖೆ ವತಿಯಿಂದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸರ್ಕಾರಿ ನೌಕರರ ಕುಂದು ಕೊರತೆಗಳ ಸಭೆ ಹಾಗೂ ಮಂಡ್ಯ ಜಿಲ್ಲೆಯ ಡಿ.ಡಿ.ಓ ಗಳಿಗೆ ಹಾಗೂ ಸಂಬಂಧಪಟ್ಟ ವಿಷಯ ನಿರ್ವಾಹಕರುಗಳಿಗೆ HRMS 2.0 ತಂತ್ರಾಂಶ ಮತ್ತು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಸರ್ಕಾರ ನಡೆಸಿದ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಯಲ್ಲಿ ಜಿಲ್ಲೆಯ ಎಲ್ಲಾ ಶಿಕ್ಷಕರು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದರಿಂದ ರಾಜ್ಯದಲ್ಲಿಯೇ ಅತಿ ಹೆಚ್ಚು ಸಮೀಕ್ಷೆ ಮಾಡಿದ ಜಿಲ್ಲೆ ಮಂಡ್ಯ ಎಂಬ ಹೆಗ್ಗಳಿಕೆ ಜಿಲ್ಲೆಗೆ ಬಂದಿತು ಎಂದರು.

ಸರ್ಕಾರದ ಯಾವುದೇ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ಮುಟ್ಟಿಸುವಲ್ಲಿ ಸರ್ಕಾರಿ ನೌಕರರ ಪಾತ್ರ ಹೆಚ್ಚಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಸಲಹೆ ಸೂಚನೆಗಳನ್ನು ನೀಡಬಹುದು ಆದರೆ ತಳಮಟ್ಟದ ಅಧಿಕಾರಿಗಳು ಸರಿಯಾಗಿ ಕಾರ್ಯ ನಿರ್ವಹಿಸಿದಾಗ ಮಾತ್ರ ಸರ್ಕಾರದ ವಿವಿಧ ಯೋಜನೆಗಳು ಯಶಸ್ಸು ಕಾಣಲು ಸಾಧ್ಯ ಎಂದು ಹೇಳಿದರು.

ಜಿಲ್ಲೆಯಲ್ಲಿ 18 ಸಾವಿರಕ್ಕೂ ಹೆಚ್ಚು ಸರ್ಕಾರಿ ನೌಕರರು ಇದ್ದಾರೆ ಆರೋಗ್ಯ ಸಂಜೀವಿನಿ ಯೋಜನೆ ಅಡಿ ಬಾಕಿ ಇರುವ ಮೊತ್ತವನ್ನು ಶೀಘ್ರವಾಗಿ ವಿಲೇವಾರಿ ಮಾಡುವ ಕ್ರಮ ವಹಿಸಲಾಗುವುದು. ಸಮೀಕ್ಷೆ ನಡೆಸಿದ ಎಲ್ಲಾ ಶಿಕ್ಷಕರಿಗೆ ಸರ್ಕಾರದಿಂದ ನೀಡಲಾಗುವ ಗೌರವ ಧನ ರೂ. 7.63 ಕೋಟಿ ಹಣ ಜಿಲ್ಲಾ ಖಜಾನೆಗೆ ಬಂದಿದೆ. ಸಮೀಕ್ಷೆ ನಡೆಸಿದ ಎಲ್ಲಾ ಶಿಕ್ಷಕರಿಗೂ ತಾಲೂಕುವಾರು ಹಣವನ್ನು ತಹಶೀಲ್ದಾರ್ ನೇತೃತ್ವದಲ್ಲಿ ನೀಡಲು ಸಮಯ ಹೆಚ್ಚಾಗುವುದರಿಂದ ಸ್ವತಂ ನಾನೇ 2500 ಕ್ಕೂ ಹೆಚ್ಚು ಸಹಿಗಳನ್ನು ಮಾಡಿ ಈವರೆಗೆ 7 ಕೋಟಿ ಗೌರವಧನವನ್ನು ಜಿಲ್ಲೆಯಲ್ಲಿ ಸಮೀಕ್ಷೆ ನಡೆಸಿದ ಶಿಕ್ಷಕರ ಖಾತೆಗೆ ವರ್ಗಾಯಿಸಲಾಗಿದೆ ಎಂದರು.

ತಾಂತ್ರಿಕ ದೋಷ ಉಂಟಾದ ಕಾರಣ ಉಳಿದ ರೂ.63 ಲಕ್ಷವನ್ನು ಪತಿಸಲು ಸಾಧ್ಯವಾಗಿಲ್ಲ ಒಂದು ವಾರದೊಳಗೆ ಸದರಿ ಮೊತ್ತವನ್ನು ಅರ್ಹರಿಗೆ ತಲುಪಿಸುವ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಸರ್ಕಾರಿ ನೌಕರರು ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ಇದನ್ನೂ ಓದಿ:-ಎಸ್‌.ಟಿ,ಎಸ್‌.ಟಿ ದೌರ್ಜನ್ಯ ಕಂಡುಬಂದರೆ ಸೂಕ್ತ ಕ್ರಮ : ಜಿಲ್ಲಾಧಿಕಾರಿ

ಸರ್ಕಾರಿ ನೌಕರರು ಜವಾಬ್ದಾರಿಯನ್ನು ಅರಿತು ತಮ್ಮ ಕಾರ್ಯದಕ್ಷತೆಯನ್ನು ಹೆಚ್ಚಿಸಿ ಕಾರ್ಯನಿರ್ವಹಿಸಿ. ಕೆಲಸದಲ್ಲಿ ಬದ್ಧತೆ ಶಿಸ್ತು ಮತ್ತು ಆಸಕ್ತಿ ಅತಿ ಮುಖ್ಯ. ಮನೆಯಷ್ಟೇ ಕೆಲಸದ ಸ್ಥಳವು ಸಹ ಪವಿತ್ರ. ಸರ್ಕಾರಿ ಕೆಲಸ ಮಾಡಲು ದೇವರು ನಮಗೆಲ್ಲರಿಗೂ ಅವಕಾಶ ನೀಡಿದ್ದಾನೆ. ಮನಸ್ಸಾಕ್ಷಿ ಹಾಗೂ ಆತ್ಮ ಸಾಕ್ಷಿಯಿಂದ ಕರ್ತವ್ಯ ನಿರ್ವಹಿಸೋಣ. ಎಂದು ಕರೆ ನೀಡಿದರು.

ಪ್ರಸ್ತುತ ಜಿಲ್ಲೆಯಲ್ಲಿ ಆರೋಗ್ಯ ಸಂಜೀವಿನಿ ಯೋಜನೆಯಡಿ ಮೂರು ಆಸ್ಪತ್ರೆಗಳು ಮಾತ್ರ ಕಾರ್ಯ ನಿರ್ವಹಿಸುತ್ತಿವೆ. ಈಗಾಗಲೇ ಜಿಲ್ಲೆಯಲ್ಲಿ 12 ಆಸ್ಪತ್ರೆಗಳನ್ನು ಆರೋಗ್ಯ ಸಂಜೀವಿನಿ ಯೋಜನೆಯಡಿ ತರಲು ಕ್ರಮ ವಹಿಸಲಾಗಿದೆ. ಸರ್ಕಾರಿ ನೌಕರರಿಗೆ ಸಂಬಳವನ್ನು ಸೂಕ್ತ ಕಾಲಮಿತಿಯೊಳಗೆ ನೀಡಲು ಡಿ ಡಿ ಓ ಗಳ ಮೇಲೆ ಜವಾಬ್ದಾರಿ ಹೆಚ್ಚಿದೆ. ಜಿಲ್ಲೆಯ ಎಲ್ಲಾ ಡಿಡಿಓಗಳು ತಮ್ಮ ಕರ್ತವ್ಯವನ್ನು ಅರಿತು ವ್ಯವಸ್ಥೆತವಾಗಿ ಹಣಕಾಸಿನ ಜವಾಬ್ದಾರಿಯನ್ನು ನಿಭಾಯಿಸಿ. ಎಚ್ ಆರ್ ಎಂ ಎಸ್ ತತ್ರಾಂಶ 2.0 ನಲ್ಲಿ ಇರುವ ನೂತನ ವಿಚಾರಗಳನ್ನು ತಿಳಿಯಿರಿ ಎಂದು ತಿಳಿಸಿದರು.

ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್. ನಂದಿನಿ ಮಾತನಾಡಿ, ಇಲಾಖೆಯ ಮುಖ್ಯಸ್ಥರು ಜವಾಬ್ದಾರಿಯನ್ನು ನೌಕರರಿಗೆ ಧನಾತ್ಮಕ ರೀತಿಯಲ್ಲಿ ಸ್ಪಂದಿಸಿ. ಮಂಡ್ಯ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರಿಗೆ ಅರಿವು ಮತ್ತು ಜ್ಞಾನ ಚೆನ್ನಾಗಿದೆ. ಜಿಲ್ಲೆಯ ಎಲ್ಲಾ ಅಧಿಕಾರಿಗಳು ಕಾರ್ಯ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ಜಿಲ್ಲೆಯಾದ್ಯಂತ ಮೂರು ತಿಂಗಳಿಗೊಮ್ಮೆ ತಾಲೂಕು ಮಟ್ಟದಲ್ಲಿ ಸರ್ಕಾರಿ ನೌಕರರ ಕುಂದು ಕೊರತೆ ಸಭೆ ನಡೆಸಲಾಗುತ್ತಿದೆ. ತಾಲೂಕು ಮಟ್ಟದಲ್ಲಿ ಪರಿಹರಿಸಬಹುದಾದ ಸಮಸ್ಯೆಗಳನ್ನು ಬಗೆಹರಿಸಲಾಗುತ್ತಿದೆ. ಇಲ್ಲಿ ಎಲ್ಲರೂ ಮುಖ್ಯರು, ಇಲಾಖೆಯ ಮುಖ್ಯಸ್ಥರು ಎಲ್ಲ ನೌಕರರನ್ನು ಉತ್ತಮವಾಗಿ ನಡೆಸಿಕೊಂಡು ಅವರಿಗೆ ಸ್ವಾತಂತ್ರ್ಯ ಗೌರವ ಮನ್ನಣೆಯನ್ನು ನೀಡಿ ಅವರ ಕಾರ್ಯಗಳನ್ನು ಗುರುತಿಸಿದರೆ ಅದರಿಂದ ನೌಕರರು ಉತ್ತೇಜನಗೊಳ್ಳುತ್ತಾರೆ ಎಂದು ಕಿವಿಮಾತು ಹೇಳಿದರು.

ಈಗಾಗಲೇ ನಮ್ಮಲ್ಲಿ ವಾಟರ್ ಮ್ಯಾನ್, ಬಿಲ್ ಕಲೆಕ್ಟರ್ಗಳಿಗೆ ಇ ಎಫ್ ಐ, ಪಿಎಫ್ ಸೌಲಭ್ಯವನ್ನು ಕೊಡಿಸುವ ಕೆಲಸ ಮಾಡಲಾಗಿದೆ. ಎಲ್ಲ ಇಲಾಖೆಗಳಲ್ಲೂ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೂ ಸದರಿ ಸೌಲಭ್ಯವನ್ನು ಕಲ್ಪಿಸಿ. ಇಲಾಖಾ ವಿಚಾರಣಾ ಪ್ರಕರಣಗಳನ್ನು ಸಾಧ್ಯವಾದಷ್ಟು ಬೇಗ ವಿಲೇವಾರಿ ಮಾಡಲಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಸರ್ಕಾರಿಗೆ ನೌಕರರಿಗೆ ಸದರಿ ಕಾರ್ಯಕ್ರಮ ಅತ್ಯಂತ ಉಪಯುಕ್ತವಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಸದರಿ ಕಾರ್ಯಕ್ರಮದ ಸ್ವರೂಪ ಯೋಗವನ್ನು ಪಡೆದುಕೊಳ್ಳಿ ಎಂದು ಹೇಳಿದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ ನಾಗೇಶ್ ಮಾತನಾಡಿ, ಎಚ್ ಆರ್ ಎಂ ಎಸ್ ಮತ್ತು k2 ಕುರಿತಾಗಿ ಇರುವ ದೋಷಗಳನ್ನು ಪರಿಹಾರ ಮಾಡಿಕೊಡಿ. ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರಿಗೆ ತಿಂಗಳ ಮೊದಲ ದಿನವೇ ಸಂಬಳ ನೀಡಿ. ಆರೋಗ್ಯ ಸಂಜೀವಿನಿ ಅಡಿ ಜಿಲ್ಲೆಯಲ್ಲಿ ಬಾಕಿ ಇರುವ ಮೊತ್ತವನ್ನು ಶೀಘ್ರವಾಗಿ ಪಾವತಿ ಮಾಡುವಂತೆ ಇತರೆ ಮನವಿಗಳನ್ನು ಸಲ್ಲಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ, ಸಂಪನ್ಮೂಲ ವ್ಯಕ್ತಿಗಳಾದ ಶ್ರೀಪಾದ, ಸರ್ಕಾರಿ ನೌಕರರ ಗೌರವಾಧ್ಯಕ್ಷ ಶ್ರೀನಿವಾಸ್, ಸರ್ಕಾರಿ ನೌಕರರ ಹಿರಿಯ ಉಪಾಧ್ಯಕ್ಷ ಚಂದ್ರಶೇಖರ್, ಪಶು ಪಾಲನೆ ಇಲಾಖೆ ಉಪ ನಿರ್ದೇಶಕ ಶಿವಲಿಂಗಯ್ಯ ಸೇರಿದಂತೆ ಇನ್ನಿತರ ಗಣ್ಯರುಗಳು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

10 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

11 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

12 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

13 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

17 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

17 hours ago