ಮಂಡ್ಯ

ಕೃಷಿಯಷ್ಟೆ ಪಾತ್ರ ವಹಿಸುವ ಮೀನುಗಾರಿಗೆ ಉತ್ತೇಜನ ನೀಡಿ : ಜಿಲ್ಲಾಧಿಕಾರಿ

ಮಂಡ್ಯ : ರೈತರ ಆದಾಯ ಹೆಚ್ಚಿಸುವಲ್ಲಿ ಕೃಷಿಯಷ್ಟೆ ಮಹತ್ವದ ಪಾತ್ರವನ್ನು ಮೀನುಗಾರಿಕೆಯು ವಹಿಸುತ್ತದೆ. ಮೀನು ಸಾಕಾಣಿಕೆ ಕುರಿತು ರೈತರಿಗೆ ತರಬೇತಿ ನೀಡಿ ಜಿಲ್ಲೆಯಲ್ಲಿ ಮೀನುಗಾರಿಕೆಯನ್ನು ಉತ್ತೇಜಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 2025-26ನೇ ಸಾಲಿನ ಕೇಂದ್ರ ಪುರಸ್ಕೃತ “ಪ್ರಧಾನಮಂತ್ರಿ ಮತ್ಸಸಂಪದ ಯೋಜನೆ” (P.M.M.S.Y)ಯನ್ನು ಅನುಷ್ಠಾನ ಮತ್ತು ಮೇಲುಸ್ತುವಾರಿ ನಡೆಸಲು ಸಂಬಂಧ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮೀನುಗಾರಿಕೆ ಇಲಾಖೆಯ ವ್ಯಾಪ್ತಿಯಲ್ಲಿ 177 ಕೆರೆಗಳು ಇದೆ ಎಂದು ಹೇಳಿದರು.

ಈಗಾಗಲೇ ಮೀನುಗಾರಿಕೆ ಇಲಾಖೆಯ ವ್ಯಾಪ್ತಿಯ ಹಲವು ಕೆರೆಗಳಿಗೆ ಟೆಂಡರ್ ಕರೆಯಲಾಗಿದೆ. ಜಿಲ್ಲೆಯಲ್ಲಿ 2021 ನೇ ಸಾಲಿನಿಂದ 25 ನೇ ಸಾಲಿನ ವರೆಗೂ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ 742 ಫಲಾನುಭವಿಗಳಿದ್ದಾರೆ. ಇಲ್ಲಿಯವರೆಗೂ 124 ಫಲಾನುಭವಿಗಳಿಗೆ 513.38 ಲಕ್ಷ ಸಹಾಯಧನ ನೀಡಲಾಗಿದೆ ಎಂದರು.

ಮೀನುಗಾರಿಕೆ ಇಲಾಖೆಯಿಂದ 1 ಹೆಕ್ಟೇರ್ ಪ್ರದೇಶದಲ್ಲಿ ಮೀನು ಸಾಕಾಣಿಕೆಗೆ ಮಾಡಲು 7 ಲಕ್ಷ ಸಹಾಯಧನವನ್ನು ನೀಡಲಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಗೆ ಶೇ 60 ರಷ್ಟು ಸಬ್ಸಿಡಿ ಹಾಗೂ ಸಾಮಾನ್ಯ ವರ್ಗಗಳಿಗೆ ಶೇ 40 ರಷ್ಟು ಸಬ್ಸಿಡಿ ನೀಡಲಾಗುತ್ತದೆ ಎಂದು ತಿಳಿಸಿದರು.

ಮೀನುಗಾರಿಕೆ ಇಲಾಖೆಯಿಂದ ಸೌಲಭ್ಯ ಪಡೆದು ಮೀನುಗಾರಿಕೆಯಲ್ಲಿ ಯಶಸ್ಸು ಗಳಿಸಿದವರ ಯಶೋಗಾಥೆಯನ್ನು ಸಿದ್ಧಪಡಿಸಿ. ಹಿಂದೆ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸೌಲಭ್ಯ ಪಡೆದ ಅರ್ಹ ಫಲಾನುಭವಿಗಳು ಆರ್ಥಿಕವಾಗಿ ಸ್ವಾವಲಂಬಿಗಳಾಗಿದ್ದಾರ ಎಂಬುದನ್ನು ಪರಿಶೀಲಿಸಿ ಎಂದು ಹೇಳಿದರು.

ಮೀನುಗಾರಿಕೆ ಮಾಡಲು ಫಲಾನುಭವಿಗಳಿಗೆ ಸಾಲ ಸೌಲಭ್ಯ ಒದಗಿಸುವುದರ ಜೊತೆಗೆ ಮೀನುಗಾರಿಕೆ ಕುರಿತು ಸೂಕ್ತ ತರಬೇತಿ ನೀಡಿ. ಮೀನುಗಾರರು ಹಾಗೂ ರೈತರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಬದುಕಬೇಕು. ಜಿಲ್ಲೆಯಲ್ಲಿ ಪ್ರತಿ ವರ್ಷ ಸರಾಸರಿ 30 ಸಾವಿರಕ್ಕೂ ಹೆಚ್ಚು ಟನ್ ಮೀನು ಉತ್ಪಾದನೆ ಆಗುತ್ತಿದೆ. ಕರಾವಳಿ ಹೊರತುಪಡಿಸಿ ಮೀನುಗಾರಿಕೆಯಲ್ಲಿ ರಾಜ್ಯದಲ್ಲಿ ಜಿಲ್ಲೆ ಹತ್ತನೆ ಸ್ಥಾನದೊಳಗಿದೆ ಎಂದು ಹೇಳಿದರು.

ಮೀನುಗಾರಿಕೆ ಮಾಡಲು ವರ್ಷ ಪೂರ್ತಿ ನೀರು ಅಗತ್ಯ ಹಾಗಾಗಿ ಜಿಲ್ಲೆಯ ವರ್ಷ ಪೂರ್ತಿ ನೀರಿನ ಲಭ್ಯತೆ ಇರುವ ಪ್ರದೇಶಗಳಿಗೆ ಆದ್ಯತೆ ಮೇರೆಗೆ ಮೀನುಗಾರಿಕೆ ಪ್ರೋತ್ಸಾಹ ನೀಡಿ. ಜಿಲ್ಲೆಯಲ್ಲಿ ಬೇಡಿಕೆ ಇರುವ ಮೀನಿನ ತಳಿಯನ್ನು ಅಭಿವೃದ್ಧಿಪಡಿಸಿ, ಸದರಿ ವರ್ಷ ಅರ್ಹ ಮೀನುಗಾರರಿಗೆ ಉತ್ತೇಜನ ನೀಡಲು ನೀಡಿದ ಮತ್ಸ್ಯ ವಾಹನಗಳು ಉತ್ತಮ ಲಾಭ ಗಳಿಸುತ್ತಿದೆ ಎಂದು ಹೇಳಿದರು.

ಸಭೆಯಲ್ಲಿ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಬಾಬಾ ಸಾಬ್, ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರಗಳಾದ ಲೋಕೇಶ್, ಪೂಜಾಶ್ರೀ, ಪುಷ್ಪಲತಾ, ಜಗದೀಶ್ ಟಿ.ಡಿ, ಮಹದೇವಸ್ವಾಮಿ, ವಿ.ಸಿ ಫಾರಂನ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಡಾ. ಕಮಲಾಬಾಯಿ ಕೂಡಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

21 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

21 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

21 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

21 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

21 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

21 hours ago