ಮಂಡ್ಯ

ತೋಟಗಾರಿಕಾ ಬೆಳೆಗಳಿಗೆ ಪ್ರೋತ್ಸಾಹ ನೀಡಿ : ಅಧಿಕಾರಿಗಳಿಗೆ ಜಿ.ಪಂ. ಸಿಇಓ ಸಲಹೆ

ಮಂಡ್ಯ : ತೋಟಗಾರಿಕಾ ಬೆಳೆಗಳಿಗೆ ಪ್ರೋತ್ಸಾಹ ನೀಡುವುದು ಗ್ರಾಮೀಣ ಆರ್ಥಿಕತೆಗೆ, ಪರಿಸರ ಸಮತೋಲನಕ್ಕೆ ಹಾಗೂ ಆಹಾರ ಭದ್ರತೆಗೆ ಬಹು ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ತೋಟಗಾರಿಕಾ ಬೆಳೆಗಳನ್ನು ಬೆಳೆಯುವಂತೆ ರೈತರನ್ನು ಪ್ರೋತ್ಸಾಹಿಸುವಂತೆ ಹಾಗೂ ತೋಟಗಾರಿಕಾ ಬೆಳೆಗಳಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಸೂಚಿಸಿದರು.

ಬುಧವಾರ ಮಂಡ್ಯ, ಶ್ರೀರಂಗಪಟ್ಟಣ ಮತ್ತು ಪಾಂಡವಪುರ ತಾಲ್ಲೂಕುಗಳಲ್ಲಿನ ತೋಟಗಾರಿಕಾ ಇಲಾಖೆಯ ಫಲಾನುಭವಿಗಳ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಅಣಬೆ, ಕರಿಬೇವು, ಪಪ್ಪಾಯ, ಬಾಳೆ ಬೆಳೆ ಬೆಳೆದಿರುವ ರೈತರೊಂದಿಗೆ ಚರ್ಚಿಸಿ ಯೋಜನೆಯಿಂದಾಗಿರುವ ಪ್ರಯೋಜನದ ಬಗ್ಗೆ ಮಾಹಿತಿ ಪಡೆದರು.

ತೋಟಗಾರಿಕೆ ಇಲಾಖೆಯಿಂದ ಬಿತ್ತನೆ, ಮಲ್ಚಿಂಗ್, ಹನಿ ನೀರಾವರಿ, ಗ್ರೀನ್ ಹೌಸ್ ಗಳಿಗೆ ಸರ್ಕಾರದ ಮಾರ್ಗಸೂಚಿಯನ್ವಯ ಸಹಾಯಧನ ನೀಡಲಾಗುತ್ತದೆ. ರೈತರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ತೋಟಗಾರಿಕೆ ಬೆಳೆಗಳನ್ನು ಬೆಳೆದು ಯಶಸ್ವಿಯಾಗಿರುವ ರೈತರ ಯಶೋಗಾಥೆಗಳನ್ನು ಸಿದ್ದಪಡಿಸಿ ಜಿಲ್ಲೆಯಾದ್ಯಂತ ಪ್ರಚಾರ ಮಾಡುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

10X10 ಅಡಿ ಅಳತೆಯಲ್ಲಿ ಅಣಬೆ ಬೇಸಾಯ: ಮನೆಯ ಛಾವಣಿಯ 10X10 ಅಡಿ ಅಳತೆಯಲ್ಲಿ ಅಣಬೆ ಬೇಸಾಯ ಮಾಡುತ್ತಿರುವ ಸುನೀಲ್ ಎಂಬುವವರು ಡಿಪ್ಲೊಮೋ ಪದವಿ ಪಡೆದಿದ್ದು, ಅಣಬೆ ಬೇಸಾಯದಿಂದ ಪ್ರತೀ ಮಾಹೆ ರೂ.25,000/-ದಿಂದ 30,000/-ದವರೆಗೆ ಆದಾಯ ಗಳಿಸುತ್ತಿದ್ದಾರೆ. ರೂ.2.00ಲಕ್ಷಗಳ ಮೂಲ ಬಂಡವಾಳದೊಂದಿಗೆ ಅಣಬೆ ಬೇಸಾಯ ಪ್ರಾರಂಭಿಸಿದ್ದು, ತೋಟಗಾರಿಕಾ ಇಲಾಖೆಯಿಂದ ರೂ.1.00 ಲಕ್ಷಗಳವರೆಗೆ ಸಹಾಯಧನ ದೊರೆಯುತ್ತದೆ ಎಂದು ತಿಳಿಸಿದರು.

ಇದೇ ಮಾದರಿಯಲ್ಲಿ ಸ್ವ-ಸಹಾಯ ಸಂಘಗಳು ಅಣಬೆ ಬೇಸಾಯ ಮಾಡಿಸಲು ತರಬೇತಿ ನೀಡಬೇಕು ಹಾಗೂ ಅವರು ಬೆಳೆದ ಬೆಳೆಗೆ ಸೂಕ್ತ ಮಾರುಕಟ್ಟೆಯನ್ನು ಕಲ್ಪಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿ.ಪಂ. ಸಿಇಓ ಸಲಹೆ ನೀಡಿದರು.

ರೈತರಿಂದ ನೇರ ಕಾರ್ಖಾನೆಗೆ ಸರಬರಾಜಾಗುತ್ತಿರುವ ಕರಿಬೇವು
ಮಂಡ್ಯ ತಾಲ್ಲೂಕಿನ ಎಲೆಚಾಕನಹಳ್ಳಿ ಗ್ರಾಮದ ರೈತ ತಿಮ್ಮೆಗೌಡರ ಜಮೀನಿನಲ್ಲಿ ನರೇಗಾ ಯೋಜನೆಯ ಸಹಾಯದಿಂದ ಬೆಳೆಯಲಾಗಿರುವ ಕರಿಬೇವನ್ನು ನೇರವಾಗಿ ಕಾರ್ಖಾನೆಗೆ ಸರಬರಾಜು ಮಾಡಲಾಗುತ್ತಿದೆ. ಇದರಿಂದ ಉತ್ತಮ ಲಾಭ ದೊರೆಯುತ್ತಿದೆ ಎಂದು ರೈತ ಸಂತಸ ವ್ಯಕ್ತಪಡಿಸಿದರು.

ಪ್ರಗತಿಪರ ರೈತ ಲಕ್ಷ್ಮೇಗೌಡರ ಪಪ್ಪಾಯ ತೋಟಕ್ಕೆ ಭೇಟಿ
ಪ್ರಗತಿಪರ ರೈತ ಲಕ್ಷ್ಮೇಗೌಡರು ಶ್ರೀರಂಗಪಟ್ಟಣ ತಾಲ್ಲೂಕಿನ ಗಣಂಗೂರಿನಲ್ಲಿರುವ ತಮ್ಮ 10 ಎಕರೆ ತೋಟದಲ್ಲಿ ನರೇಗಾ ಹಾಗೂ ತೋಟಗಾರಿಕಾ ಇಲಾಖೆಯ ಅನುದಾನ ಪಡೆದು ಪಪ್ಪಾಯ ಹಾಗೂ ಅಂತರ ಬೆಳೆಯಾಗಿ ದಾಳಿಂಬೆ ಬೆಳೆದಿದ್ದು, ಮಂಡ್ಯ ಜಿಲ್ಲೆಯಲ್ಲಿನ ಹಾಪ್ ಕಾಮ್ಸ್ ಗಳಿಗೆ ಕಳೆದ ಸಾಲಿನಲ್ಲಿ ಅತಿ ಹೆಚ್ಚು ಪಪ್ಪಾಯ ಸರಬರಾಜು ಮಾಡಿದ ರೈತರಾಗಿದ್ದಾರೆ.

ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ರೂಪಶ್ರೀ, ತೋಟಗಾರಿಕಾ ಇಲಾಖೆಯ ಸಹಾಯಕ ಸಾಂಖ್ಯಿಕ ಅಧಿಕಾರಿ ಮಂಜೇಶ್ ಸೇರಿದಂತೆ ಇತರೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

22 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

22 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

22 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

22 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

22 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

22 hours ago