ಮಂಡ್ಯ

ತೋಟಗಾರಿಕಾ ಬೆಳೆಗಳಿಗೆ ಪ್ರೋತ್ಸಾಹ ನೀಡಿ : ಅಧಿಕಾರಿಗಳಿಗೆ ಜಿ.ಪಂ. ಸಿಇಓ ಸಲಹೆ

ಮಂಡ್ಯ : ತೋಟಗಾರಿಕಾ ಬೆಳೆಗಳಿಗೆ ಪ್ರೋತ್ಸಾಹ ನೀಡುವುದು ಗ್ರಾಮೀಣ ಆರ್ಥಿಕತೆಗೆ, ಪರಿಸರ ಸಮತೋಲನಕ್ಕೆ ಹಾಗೂ ಆಹಾರ ಭದ್ರತೆಗೆ ಬಹು ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ತೋಟಗಾರಿಕಾ ಬೆಳೆಗಳನ್ನು ಬೆಳೆಯುವಂತೆ ರೈತರನ್ನು ಪ್ರೋತ್ಸಾಹಿಸುವಂತೆ ಹಾಗೂ ತೋಟಗಾರಿಕಾ ಬೆಳೆಗಳಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಸೂಚಿಸಿದರು.

ಬುಧವಾರ ಮಂಡ್ಯ, ಶ್ರೀರಂಗಪಟ್ಟಣ ಮತ್ತು ಪಾಂಡವಪುರ ತಾಲ್ಲೂಕುಗಳಲ್ಲಿನ ತೋಟಗಾರಿಕಾ ಇಲಾಖೆಯ ಫಲಾನುಭವಿಗಳ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಅಣಬೆ, ಕರಿಬೇವು, ಪಪ್ಪಾಯ, ಬಾಳೆ ಬೆಳೆ ಬೆಳೆದಿರುವ ರೈತರೊಂದಿಗೆ ಚರ್ಚಿಸಿ ಯೋಜನೆಯಿಂದಾಗಿರುವ ಪ್ರಯೋಜನದ ಬಗ್ಗೆ ಮಾಹಿತಿ ಪಡೆದರು.

ತೋಟಗಾರಿಕೆ ಇಲಾಖೆಯಿಂದ ಬಿತ್ತನೆ, ಮಲ್ಚಿಂಗ್, ಹನಿ ನೀರಾವರಿ, ಗ್ರೀನ್ ಹೌಸ್ ಗಳಿಗೆ ಸರ್ಕಾರದ ಮಾರ್ಗಸೂಚಿಯನ್ವಯ ಸಹಾಯಧನ ನೀಡಲಾಗುತ್ತದೆ. ರೈತರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ತೋಟಗಾರಿಕೆ ಬೆಳೆಗಳನ್ನು ಬೆಳೆದು ಯಶಸ್ವಿಯಾಗಿರುವ ರೈತರ ಯಶೋಗಾಥೆಗಳನ್ನು ಸಿದ್ದಪಡಿಸಿ ಜಿಲ್ಲೆಯಾದ್ಯಂತ ಪ್ರಚಾರ ಮಾಡುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

10X10 ಅಡಿ ಅಳತೆಯಲ್ಲಿ ಅಣಬೆ ಬೇಸಾಯ: ಮನೆಯ ಛಾವಣಿಯ 10X10 ಅಡಿ ಅಳತೆಯಲ್ಲಿ ಅಣಬೆ ಬೇಸಾಯ ಮಾಡುತ್ತಿರುವ ಸುನೀಲ್ ಎಂಬುವವರು ಡಿಪ್ಲೊಮೋ ಪದವಿ ಪಡೆದಿದ್ದು, ಅಣಬೆ ಬೇಸಾಯದಿಂದ ಪ್ರತೀ ಮಾಹೆ ರೂ.25,000/-ದಿಂದ 30,000/-ದವರೆಗೆ ಆದಾಯ ಗಳಿಸುತ್ತಿದ್ದಾರೆ. ರೂ.2.00ಲಕ್ಷಗಳ ಮೂಲ ಬಂಡವಾಳದೊಂದಿಗೆ ಅಣಬೆ ಬೇಸಾಯ ಪ್ರಾರಂಭಿಸಿದ್ದು, ತೋಟಗಾರಿಕಾ ಇಲಾಖೆಯಿಂದ ರೂ.1.00 ಲಕ್ಷಗಳವರೆಗೆ ಸಹಾಯಧನ ದೊರೆಯುತ್ತದೆ ಎಂದು ತಿಳಿಸಿದರು.

ಇದೇ ಮಾದರಿಯಲ್ಲಿ ಸ್ವ-ಸಹಾಯ ಸಂಘಗಳು ಅಣಬೆ ಬೇಸಾಯ ಮಾಡಿಸಲು ತರಬೇತಿ ನೀಡಬೇಕು ಹಾಗೂ ಅವರು ಬೆಳೆದ ಬೆಳೆಗೆ ಸೂಕ್ತ ಮಾರುಕಟ್ಟೆಯನ್ನು ಕಲ್ಪಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿ.ಪಂ. ಸಿಇಓ ಸಲಹೆ ನೀಡಿದರು.

ರೈತರಿಂದ ನೇರ ಕಾರ್ಖಾನೆಗೆ ಸರಬರಾಜಾಗುತ್ತಿರುವ ಕರಿಬೇವು
ಮಂಡ್ಯ ತಾಲ್ಲೂಕಿನ ಎಲೆಚಾಕನಹಳ್ಳಿ ಗ್ರಾಮದ ರೈತ ತಿಮ್ಮೆಗೌಡರ ಜಮೀನಿನಲ್ಲಿ ನರೇಗಾ ಯೋಜನೆಯ ಸಹಾಯದಿಂದ ಬೆಳೆಯಲಾಗಿರುವ ಕರಿಬೇವನ್ನು ನೇರವಾಗಿ ಕಾರ್ಖಾನೆಗೆ ಸರಬರಾಜು ಮಾಡಲಾಗುತ್ತಿದೆ. ಇದರಿಂದ ಉತ್ತಮ ಲಾಭ ದೊರೆಯುತ್ತಿದೆ ಎಂದು ರೈತ ಸಂತಸ ವ್ಯಕ್ತಪಡಿಸಿದರು.

ಪ್ರಗತಿಪರ ರೈತ ಲಕ್ಷ್ಮೇಗೌಡರ ಪಪ್ಪಾಯ ತೋಟಕ್ಕೆ ಭೇಟಿ
ಪ್ರಗತಿಪರ ರೈತ ಲಕ್ಷ್ಮೇಗೌಡರು ಶ್ರೀರಂಗಪಟ್ಟಣ ತಾಲ್ಲೂಕಿನ ಗಣಂಗೂರಿನಲ್ಲಿರುವ ತಮ್ಮ 10 ಎಕರೆ ತೋಟದಲ್ಲಿ ನರೇಗಾ ಹಾಗೂ ತೋಟಗಾರಿಕಾ ಇಲಾಖೆಯ ಅನುದಾನ ಪಡೆದು ಪಪ್ಪಾಯ ಹಾಗೂ ಅಂತರ ಬೆಳೆಯಾಗಿ ದಾಳಿಂಬೆ ಬೆಳೆದಿದ್ದು, ಮಂಡ್ಯ ಜಿಲ್ಲೆಯಲ್ಲಿನ ಹಾಪ್ ಕಾಮ್ಸ್ ಗಳಿಗೆ ಕಳೆದ ಸಾಲಿನಲ್ಲಿ ಅತಿ ಹೆಚ್ಚು ಪಪ್ಪಾಯ ಸರಬರಾಜು ಮಾಡಿದ ರೈತರಾಗಿದ್ದಾರೆ.

ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ರೂಪಶ್ರೀ, ತೋಟಗಾರಿಕಾ ಇಲಾಖೆಯ ಸಹಾಯಕ ಸಾಂಖ್ಯಿಕ ಅಧಿಕಾರಿ ಮಂಜೇಶ್ ಸೇರಿದಂತೆ ಇತರೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ನಾಳೆಗೆ 60 ದಿನಗಳ ಡೆಡ್‌ಲೈನ್‌ ಅಂತ್ಯ: ಸಂಕಷ್ಟದಲ್ಲಿ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್‌: ಅಮೇರಿಕಾ ಮತ್ತು ಇರಾನ್‌ ನಡುವಿನ ಮಿಲಿಟರಿ ಸಂಘರ್ಷ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌…

9 mins ago

ರಾಜ್ಯದಲ್ಲಿ ಮೂರು ದಿನ ಮಳೆ ಮುನ್ಸೂಚನೆ: ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ,…

1 hour ago

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

5 hours ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

5 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…

5 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

5 hours ago