ಮಂಡ್ಯ: ಪರಿಸರ ಸಂರಕ್ಷಣೆ ಎಂದರೆ ಗಿಡ ನೆಟ್ಟು ಆಚರಣೆ ಮಾಡುವುದಷ್ಟೇ ಅಲ್ಲದೆ, ಅವುಗಳನ್ನ ಪೋಷಣೆ ಮಾಡಬೇಕು ಆಗಷ್ಟೇ ಅದಕ್ಕೊಂದು ಪರಿಪೂರ್ಣತೆ ಸಿಕ್ಕಿ, ಪ್ರತಿಯೊಬ್ಬರಲ್ಲೂ ಪರಿಸರ ಪ್ರಜ್ಞೆಯು ಮೂಡುತ್ತದೆ ಎಂದು ಬೆಂಗಳೂರು ಆರ್ ಟಿ ಓ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ ಅವರು ಅಭಿಪ್ರಾಯಪಟ್ಟರು.
ಅವರು ಶನಿವಾರ ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲ್ಲೂಕಿನ ಶೀಳನೆರೆ ಹೋಬಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢ ಶಾಲೆಯಲ್ಲಿ ಸಮಾಗಮ ವೆಲ್ಫೇರ್ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರದಲ್ಲಿ ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಪರಿಸರ ಸಂರಕ್ಷಣೆ ನಮ್ಮೇಲ್ಲರ ಹೊಣೆಯು ಹೌದು. ಪರಿಸರ ಅವಶ್ಯಕತೆಯನ್ನು ಇಂದಿನ ಪೀಳಿಗೆಗೆ ತಿಳಿಸಿ, ಅರಿವು ಮೂಡಿಸಬೇಕು ಇದರಿಂದ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ಹಾಗೂ ಪರಿಸರವನ್ನು ಕೊಡುಗೆಯಾಗಿ ನೀಡಬಹುದು ಎಂದು ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಮಾರಾಟ ಮಹಾಮಂಡಳಿ ನಿರ್ದೇಶಕ ಮೋಹನ್ ಎಸ್ ಮಾತನಾಡಿ, ಹಿಂದಿನಿಂದಲೂ ಪರಿಸರ ಸಂರಕ್ಷಣೆ ಬಗ್ಗೆ ವಿಷಯಗಳು ಚರ್ಚೆಯಾಗುತ್ತಿವೆ ಆದರೆ ಪ್ರಸ್ತುತದಲ್ಲಿ ಆರೋಗ್ಯಕರ ಜೀವನಕ್ಕಾಗಿ ಮರ ಬೆಳೆಸಿ ನಾಡು ಉಳಿಸಿ ಇಲ್ಲದಿದ್ದರೆ ಉತ್ತಮ ಪರಿಸರವಿಲ್ಲದೆ ಬದುಕಲು ಸಾಧ್ಯವಿಲ್ಲ ಎಂದರು.
ಇದಕ್ಕೂ ಮುನ್ನ ಪ್ರಸ್ತವಿಕ ನುಡಿಗಳನ್ನಾಡಿದ ಸಮಾಗಮ ವೆಲ್ಫೇರ್ ಫೌಂಡೇಶನ್ ನ್ ನಿರ್ದೇಶಕರು ಪಾಂಡು ಎಸ್, ಪ್ರಸ್ತುತ ಪರಿಸರದ ಸ್ಥಿತಿ ಗ್ರಾಮೀಣ ಪ್ರದೇಶಗಳಲ್ಲಿಯೂ ಸಹ ಪರಿಸರ ಸಂರಕ್ಷಣೆ ಬಗ್ಗೆ ಅರಿವು ಮೂಡಿಸುವಂತ ಕಾಲಗಟ್ಟಕ್ಕೆ ಬಂದು ತಲುಪಿದೆ. ಹಳ್ಳಿಗಳ ಪರಿಸ್ಥಿಯೇ ಹೀಗಾದರೆ ಪಟ್ಟಣಗಳ ಸ್ಥಿತಿ ಗತಿ ಹೇಗೆ ಎಂದು ಬೇಸರ ವ್ಯಕ್ತಪಡಿಸಿದರು.
ಹಳ್ಳಿಗಳಲ್ಲಿ ತಪ್ಪೇ ಸಗಣಿ ತುಂಬುತಿದ್ದ ತಿಪ್ಪೆಗಳು ಇಂದು ಪ್ಲಾಸ್ಟಿಕ್ ಗಳ ಗುಂಡಿಗಳಾಗಿವೆ ಹಾಗೆಯೇ ಪ್ರಸ್ತುತ ವರ್ಷದಲ್ಲಿ ಅತೀ ಹೆಚ್ಚು ಉಷ್ಣಾಂಶವನ್ನ ಕಾಣಬೇಕಾಯಿತು, ಇದೆ ರೀತಿ ಮುಂದುವರೆದರೆ ಬದುಕುವ ಆಸೆಯನ್ನೇ ಕಳೆದುಕೊಳ್ಳಬೇಕಾಗುತ್ತದೆ ಆದ್ದರಿಂದ ಆರೋಗ್ಯಕರ ಜೀವನ ನಡೆಸಲು ಪರಿಸರ ಸಂರಕ್ಷಿಸಿ ಎಂದು ನುಡಿದರು.
ಇದೆ ಸಂದರ್ಭದಲ್ಲಿ ಸಮಾಗಮ ವೆಲ್ಫೇರ್ ಫೌಂಡೇಶನ್ ವತಿಯಿಂದ ಶಾಲಾ ಕಾಲೇಜು ಮಕ್ಕಳಿಗೆ ಪ್ರಬಂಧ ಹಾಗೂ ಭಾಷಣ ಏರ್ಪಡಿಸಿ ವಿಜೇತರಿಗೆ ಪುಸ್ತಕ ಹಾಗೂ ಟ್ರೋಫಿಗಳನ್ನ ನೀಡಿ ಪ್ರೊತ್ಸಾಹಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಯುವರಾಜು, ಸದಸ್ಯ ಎಸ್ ಕೆ ಪ್ರಕಾಶ್, ಮುಖ್ಯಯೊಪಾಧ್ಯರಾದ ನೀಲಮ್ಮ, ಸಮಾಗಮ ವೆಲ್ಫೇರ್ ಫೌಂಡೇಶನ್ ನ್ ನಿರ್ದೇಶಕಿ ಸುಮಿತ್ರ ಎಚ್ ವಿ ಹಾಗೂ ನಿರ್ದೇಶಕರಾದ ರಾಘವೇಂದ್ರಸ್ವಾಮಿ ಎಂ.ಸಿ, ಶಿವಕುಮಾರ್ ಜಿ, ವಕೀಲರಾದ ರಘು ಎಸ್ ಕೆ ಆರ್ ಪೇಟೆ , ಆರ್ಥಿಕ ಸಲಹೆಗರರಾದ ಪ್ರಮೋದ್ ಕೆ ಆರ್ ಪೇಟೆ , ಕಿರಣ್ ಹಾಗೂ ಕಾಲೇಜಿನ ಉಪನ್ಯಾಸಕರು ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
ನವೀನ್ ಡಿಸೋಜ ಗುಡ್ಡದ ಮೇಲೆ ಅವೈಜ್ಞಾನಿಕವಾಗಿ ಸುರಿದಿದ್ದ ಕಸ ವಿಂಗಡಣೆ ಕೆಲಸ ಚುರುಕು ಮಡಿಕೇರಿ: ವಾಯು ಗುಣಮಟ್ಟದಲ್ಲಿ ದೇಶದಲ್ಲೇ ಹೆಸರಾಗಿರುವ…
ಇತ್ತೀಚಿನ ದಿನಮಾನಗಳಲ್ಲಿ ಸಕ್ಕರೆ ಕಾಯಿಲೆ ಎಂಬುದು ಸಾಮಾನ್ಯವಾಗಿ ಬಿಟ್ಟಿದೆ. ಈ ಕಾಯಿಲೆ ಗಂಭೀರ ಸ್ವರೂಪ ಪಡೆದುಕೊಂಡಾಗ ಗ್ಯಾಂಗ್ರಿನ್ ರೂಪ ಪಡೆದುಕೊಳ್ಳುತ್ತದೆ.…
ಎಸ್.ಎಸ್.ಭಟ್ ನಂಜನಗೂಡು: ಮೈಸೂರು ನಗರದಿಂದ ನಂಜನಗೂಡಿಗೆ ತೆರಳುವ ಬಸ್ ಹತ್ತುವ ಪ್ರಯಾಣಿಕ ಆಘಾತಕ್ಕೆ ಒಳಗಾಗುವುದು ಗ್ಯಾರಂಟಿ. ಮೈಸೂರು ಬಸ್ ನಿಲ್ದಾಣದಿಂದ…
ಮಂಜು ಕೋಟೆ ಕೋಟೆ ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷರಾಗಿ ಮೊಳಿಯೂರು ಆನಂದ್ ಮುಂದುವರಿಕೆಗೆ ನ್ಯಾಯಾಲಯದ ತೀರ್ಪು ಎಚ್.ಡಿ.ಕೋಟೆ: ತಾಲ್ಲೂಕು ಕುರುಬ…
ಕೆ.ಬಿ.ರಮೇಶನಾಯಕ ಬಡವರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶ ಮೈಸೂರು: ಬಡವರ ಕೈಗೆಟುಕುವ ದರದಲ್ಲಿ ಗುಣಮಟ್ಟದ ತಿಂಡಿ, ಊಟವನ್ನು…