ಮಂಡ್ಯ

ಸಮಾಗಮ ವೆಲ್ಫೇರ್ ಫೌಂಡೇಶನ್ ವತಿಯಿಂದ ಶಾಲೆಯಲ್ಲಿ ಪರಿಸರ ದಿನಾಚರಣೆ

ಮಂಡ್ಯ: ಪರಿಸರ ಸಂರಕ್ಷಣೆ ಎಂದರೆ ಗಿಡ ನೆಟ್ಟು ಆಚರಣೆ ಮಾಡುವುದಷ್ಟೇ ಅಲ್ಲದೆ, ಅವುಗಳನ್ನ ಪೋಷಣೆ ಮಾಡಬೇಕು ಆಗಷ್ಟೇ ಅದಕ್ಕೊಂದು ಪರಿಪೂರ್ಣತೆ ಸಿಕ್ಕಿ, ಪ್ರತಿಯೊಬ್ಬರಲ್ಲೂ ಪರಿಸರ ಪ್ರಜ್ಞೆಯು ಮೂಡುತ್ತದೆ ಎಂದು ಬೆಂಗಳೂರು ಆರ್ ಟಿ ಓ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ ಅವರು ಅಭಿಪ್ರಾಯಪಟ್ಟರು.

ಅವರು ಶನಿವಾರ ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲ್ಲೂಕಿನ ಶೀಳನೆರೆ ಹೋಬಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢ ಶಾಲೆಯಲ್ಲಿ ಸಮಾಗಮ ವೆಲ್ಫೇರ್ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರದಲ್ಲಿ ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಪರಿಸರ ಸಂರಕ್ಷಣೆ ನಮ್ಮೇಲ್ಲರ ಹೊಣೆಯು ಹೌದು.  ಪರಿಸರ ಅವಶ್ಯಕತೆಯನ್ನು ಇಂದಿನ ಪೀಳಿಗೆಗೆ ತಿಳಿಸಿ, ಅರಿವು ಮೂಡಿಸಬೇಕು ಇದರಿಂದ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ಹಾಗೂ ಪರಿಸರವನ್ನು ಕೊಡುಗೆಯಾಗಿ ನೀಡಬಹುದು ಎಂದು ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಮಾರಾಟ ಮಹಾಮಂಡಳಿ ನಿರ್ದೇಶಕ ಮೋಹನ್ ಎಸ್ ಮಾತನಾಡಿ, ಹಿಂದಿನಿಂದಲೂ ಪರಿಸರ ಸಂರಕ್ಷಣೆ ಬಗ್ಗೆ ವಿಷಯಗಳು ಚರ್ಚೆಯಾಗುತ್ತಿವೆ ಆದರೆ ಪ್ರಸ್ತುತದಲ್ಲಿ ಆರೋಗ್ಯಕರ ಜೀವನಕ್ಕಾಗಿ ಮರ ಬೆಳೆಸಿ ನಾಡು ಉಳಿಸಿ ಇಲ್ಲದಿದ್ದರೆ ಉತ್ತಮ ಪರಿಸರವಿಲ್ಲದೆ ಬದುಕಲು ಸಾಧ್ಯವಿಲ್ಲ ಎಂದರು.

ಇದಕ್ಕೂ ಮುನ್ನ ಪ್ರಸ್ತವಿಕ ನುಡಿಗಳನ್ನಾಡಿದ ಸಮಾಗಮ ವೆಲ್ಫೇರ್ ಫೌಂಡೇಶನ್ ನ್ ನಿರ್ದೇಶಕರು ಪಾಂಡು ಎಸ್,  ಪ್ರಸ್ತುತ ಪರಿಸರದ ಸ್ಥಿತಿ  ಗ್ರಾಮೀಣ ಪ್ರದೇಶಗಳಲ್ಲಿಯೂ ಸಹ ಪರಿಸರ ಸಂರಕ್ಷಣೆ ಬಗ್ಗೆ ಅರಿವು ಮೂಡಿಸುವಂತ ಕಾಲಗಟ್ಟಕ್ಕೆ ಬಂದು ತಲುಪಿದೆ. ಹಳ್ಳಿಗಳ ಪರಿಸ್ಥಿಯೇ ಹೀಗಾದರೆ ಪಟ್ಟಣಗಳ ಸ್ಥಿತಿ ಗತಿ ಹೇಗೆ ಎಂದು ಬೇಸರ ವ್ಯಕ್ತಪಡಿಸಿದರು.

ಹಳ್ಳಿಗಳಲ್ಲಿ ತಪ್ಪೇ ಸಗಣಿ ತುಂಬುತಿದ್ದ ತಿಪ್ಪೆಗಳು ಇಂದು ಪ್ಲಾಸ್ಟಿಕ್ ಗಳ ಗುಂಡಿಗಳಾಗಿವೆ ಹಾಗೆಯೇ ಪ್ರಸ್ತುತ ವರ್ಷದಲ್ಲಿ ಅತೀ ಹೆಚ್ಚು ಉಷ್ಣಾಂಶವನ್ನ ಕಾಣಬೇಕಾಯಿತು, ಇದೆ ರೀತಿ ಮುಂದುವರೆದರೆ ಬದುಕುವ ಆಸೆಯನ್ನೇ ಕಳೆದುಕೊಳ್ಳಬೇಕಾಗುತ್ತದೆ ಆದ್ದರಿಂದ ಆರೋಗ್ಯಕರ ಜೀವನ ನಡೆಸಲು ಪರಿಸರ ಸಂರಕ್ಷಿಸಿ ಎಂದು ನುಡಿದರು.

ಇದೆ ಸಂದರ್ಭದಲ್ಲಿ ಸಮಾಗಮ ವೆಲ್ಫೇರ್ ಫೌಂಡೇಶನ್ ವತಿಯಿಂದ ಶಾಲಾ ಕಾಲೇಜು ಮಕ್ಕಳಿಗೆ ಪ್ರಬಂಧ ಹಾಗೂ ಭಾಷಣ ಏರ್ಪಡಿಸಿ ವಿಜೇತರಿಗೆ ಪುಸ್ತಕ ಹಾಗೂ ಟ್ರೋಫಿಗಳನ್ನ ನೀಡಿ ಪ್ರೊತ್ಸಾಹಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಯುವರಾಜು, ಸದಸ್ಯ ಎಸ್ ಕೆ ಪ್ರಕಾಶ್, ಮುಖ್ಯಯೊಪಾಧ್ಯರಾದ ನೀಲಮ್ಮ, ಸಮಾಗಮ ವೆಲ್ಫೇರ್ ಫೌಂಡೇಶನ್ ನ್ ನಿರ್ದೇಶಕಿ ಸುಮಿತ್ರ ಎಚ್ ವಿ ಹಾಗೂ ನಿರ್ದೇಶಕರಾದ ರಾಘವೇಂದ್ರಸ್ವಾಮಿ ಎಂ.ಸಿ, ಶಿವಕುಮಾರ್‌ ಜಿ, ವಕೀಲರಾದ ರಘು ಎಸ್ ಕೆ ಆರ್ ಪೇಟೆ , ಆರ್ಥಿಕ ಸಲಹೆಗರರಾದ ಪ್ರಮೋದ್ ಕೆ ಆರ್ ಪೇಟೆ , ಕಿರಣ್ ಹಾಗೂ ಕಾಲೇಜಿನ ಉಪನ್ಯಾಸಕರು ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

10 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

10 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

11 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

12 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

12 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

15 hours ago