ಮಂಡ್ಯ

ಮದ್ದೂರು ತಾಲ್ಲೂಕಿನಲ್ಲಿ ಅಭಿವೃದ್ಧಿಯ ಪರ್ವ : 1146.76 ಕೋಟಿ ರೂ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗೆ ಸಜ್ಜಾದ ವೇದಿಕೆ

ಮದ್ದೂರು: ತಾಲ್ಲೂಕಿನಲ್ಲಿ ಅಭಿವೃದ್ಧಿಯ ಪರ್ವ, 1146.76 ಕೋಟಿ ರೂ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ವೇದಿಕೆ ಸಜ್ಜಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.28ರಂದು ಮದ್ದೂರಿನಲ್ಲಿ ಚಾಲನೆ ನೀಡಲಿದ್ದಾರೆ.

ತಾಲ್ಲೂಕಿನಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳನ್ನು ಸ್ವಾಗತಿಸಲು ಕಾರ್ಯಕ್ರಮಕ್ಕೆ ವಿಶೇಷ ವೇದಿಕೆ ಸಿದ್ಧವಾಗಿದೆ. ಶಿವಪುರ ಸತ್ಯಾಗ್ರಹ ಸೌಧದ ವಿನ್ಯಾಸದೊಂದಿಗೆ ವೇದಿಕೆಯ ಮುಂಭಾಗ ಆಕರ್ಷಿತವಾಗಿ ಸಿದ್ಧಗೊಂಡಿದೆ.
ಕಾರ್ಯಕ್ರಮ ಕುರಿತಂತೆ ಶಾಸಕ ಕೆ.ಎಂ.ಉದಯ್ ಅವರು ಮಾತನಾಡಿ, ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಲು ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳು ವಸ್ತುಪ್ರದರ್ಶನ ಮಳಿಗೆಯನ್ನು ತೆರೆಯಲಾಗುವುದು. ಸರ್ಕಾರವು ಅಭಿವೃದ್ಧಿಗೆ ಆದ್ಯತೆ ನೀಡಿದೆ ಎಂಬುದಕ್ಕೆ ಜು.28ರಂದು ನಡೆಯಲಿರುವ ಕಾರ್ಯಕ್ರಮ ಸಾಕ್ಷಿಯಾಗಲಿದೆ ಎಂದರು.

ರೈತರಿಗೆ ಹೆಚ್ಚು ಅನುಕೂಲವಾಗುವಂತೆ ನಾಲೆ ಹಾಗೂ ಕೆರೆಗಳ ಅಭಿವೃದ್ಧಿಗೆ ಆದ್ಯತೆ ನೀಡಿರುವ ಕಾಮಗಾರಿಗಳು ಹಾಗೂ ರಸ್ತೆ, ಚರಂಡಿ, ಕುಡಿಯುವ ನೀರಿಗೆ ಸಂಬಂಧಿಸಿದ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಸರ್ಕಾರದೊಂದಿಗೆ ಅಭಿವೃದ್ಧಿ ಕೆಲಸಗಳಲ್ಲಿ ಕೈ ಜೋಡಿಸಬೇಕು. ಸಾರ್ವಜನಿಕರು ಕಾರ್ಯಕ್ರಮಕ್ಕೆ ಆಗಮಿಸಲು 500 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದರು.

ಜಿಲ್ಲಾಧಿಕಾರಿ ಡಾ.ಕುಮಾರ ಅವರು ಮಾತನಾಡಿ, 16 ಇಲಾಖೆಗಳ ಒಟ್ಟು 87 ಕಾಮಗಾರಿಗಳ ಪೈಕಿ 60 ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ 27 ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಲಿದೆ. ಎಲ್ಲಾ ಕಾಮಗಾರಿಗಳ ಒಟ್ಟು ಮೊತ್ತ 1146.79 ಕೋಟಿ ರೂ.ಗಳಾಗಿರುತ್ತದೆ ಎಂದರು.

ಜಿಲ್ಲಾ ಪೊಲೀಸ್ ಅಧಿಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಅವರು ಮಾತನಾಡಿ, ಕಾರ್ಯಕ್ರಮಕ್ಕೆ ವಿವಿಧ ಭಾಗಗಳಿಂದ ಆಗಮಿಸುವ ವಾಹನಗಳನ್ನು ನಿಲುಗಡೆ ಮಾಡಲು ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಸೂಕ್ತ ಬಂದೋಬಸ್ತ್ ವ್ಯವಸ್ಥೆಗಾಗಿ 1000 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಅವರು ಮಾತನಾಡಿ, ಕಾರ್ಯಕ್ರಮದ ದಿನದಂದು ಜೀತ ವಿಮುಕ್ತ 85 ಜನರಿಗೆ ನನ್ನ ಗುರುತು ಅಭಿಯಾನದಡಿ 14 ದಾಖಲೆಗಳನ್ನು ನೀಡಲಾಗುವುದು. ಸಾರಥಿ ಯೋಜನೆಯಡಿ ಇಬ್ಬರಿಗೆ ಕಾರು ಖರೀದಿಸಲು ಸಹಾಯಧನ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್‌ಕುಮಾರ್, ಉಪಾಧ್ಯಕ್ಷ ಟಿ. ಆರ್.ಪ್ರಸನ್ನಕುಮಾರ್, ಮನ್‌ಮುಲ್ ನಿರ್ದೇಶಕ ಹರೀಶ್‌ಬಾಬು, ಉಪವಿಭಾಗಾಽಕಾರಿ ಶಿವಮೂರ್ತಿ, ತಹಸಿಲ್ದಾರ್ ಪರುಶುರಾಮ್ ಸತ್ತಿಗೆರಿ, ತಾಪಂ ಇಒ ರಾಮಲಿಂಗಯ್ಯ, ಇಂಜಿನಿಯರ್‌ಗಳಾದ ನಾಗರಾಜು, ದೇವಾನಂದ, ಸಿಪಿಐಗಳಾದ ವೆಂಕಟೇಗೌಡ, ಶಿವಕುಮಾರ್, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆಲುವರಾಜ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಮದ್ದೂರಿನಲ್ಲಿ ಜು.28ರಂದು ನಡೆಯಲಿರುವ ಮುಖ್ಯಮಂತ್ರಿಗಳ ಕಾರ್ಯಕ್ರಮದ ವೇದಿಕೆ ಸಿದ್ಧತೆಯನ್ನು ಶಾಸಕ ಕೆ.ಎಂ.ಉದಯ್, ಜಿಲ್ಲಾಧಿಕಾರಿ ಡಾ.ಕುಮಾರ, ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ, ಜಿಪಂ ಸಿಇಒ ಅವರುಗಳು ಪರಿಶೀಲಿಸಿದರು.

ಆಂದೋಲನ ಡೆಸ್ಕ್

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

2 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

6 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

7 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

8 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

10 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

13 hours ago