ಮಂಡ್ಯ

ಕಾವೇರಿ ನದಿ ನೀರು ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಬೇಕು : ಸುಮಲತಾ

ಮಂಡ್ಯ : ಕೃಷ್ಣರಾಜಸಾಗರದಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವುದರಿಂದ ಜನಸಾಮಾನ್ಯರಿಗೂ ಸಂಕಷ್ಟ ಎದುರಾಗಲಿದ್ದು, ರೈತರ ಹೋರಾಟದ ಜೊತೆ ನಾವೆಲ್ಲರೂ ನಿಲ್ಲಬೇಕಾಗಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂಕಷ್ಟಕಾಲದಲ್ಲಿ ರೈತರು ಬೆಳೆದಿರುವ ಬೆಳೆಗೆ ಮಾತ್ರ ಸಂಕಷ್ಟ ಎಂದು ಭಾವಿಸಬಾರದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಕಾಡಲಿದೆ. ಹಾಗಾಗಿ ಹೋರಾಟಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದರು.

ರೈತರ ಸಮಸ್ಯೆಯಾಗಲಿ ನೀರಿನ ಸಮಸ್ಯೆಯಾಗಲಿ ಅದು ರೈತರಿಗೆ ಸಂಬಂಧಿಸಿದ ಸಮಸ್ಯೆ ಅಲ್ಲ ಬದಲಾಗಿ , ಸಾಮಾನ್ಯ ಜನರ ಸಮಸ್ಯೆ ಕೂಡ ಹಾಗಿದೆ. ಇಂತಹ ವಿಷಯದಲ್ಲಿ ಯಾರೂ ಕೂಡ ರಾಜಕಾರಣ ಮಾಡಬಾರದು. ಮಳೆ ಬಾರದ ಕಾರಣ ಸಂಕಷ್ಟ ಪರಿಸ್ಥಿತಿ ಎದುರಾಗಿದೆ ಕಳೆದ ಬಾರಿ ಮಳೆಯಾಗಿ ಕಾವೇರಿ ಮಾತೆಗೆ ಬಾಗಿನ ಅರ್ಪಣೆ ಮಾಡಿದ್ದೆವು,ಆದರೆ ಈ ಬಾರಿ ಸಂಕಷ್ಟದ ಜೊತೆಗೆ ತಮಿಳುನಾಡಿಗೆ ನೀರು ಬಿಟ್ಟಿರುವುದರಿಂದ ರೈತರ ಕಷ್ಟ ಹೇಳತೀರದಾಗಿದೆ,ನಾವು ಯಾವ ರೀತಿ ಹೋರಾಟ ಮಾಡುತ್ತೇವೆ ಎಂಬುದು ಮುಖ್ಯ ಎಂದು ತಿಳಿಸಿದರು.

ಕೇಂದ್ರದಲ್ಲಿ ತಮಿಳುನಾಡಿಗೆ ಹೆಚ್ಚು ಒಲವು ಇದೆ. ನಾವು ಹೋರಾಟ ಮಾಡಬೇಕಾದ ಅವಶ್ಯಕತೆಯಿದೆ. ಇದಕ್ಕೆ ಪರಿಹಾರ ಹುಡುಕುವ ಕೆಲಸ ಮಾಡಬೇಕು. ನಮಗೆ ಸಮಸ್ಯೆ ಇದೆ, ನಮ್ಮ ಹೋರಾಟ ನಾವು ಮಾಡಬೇಕು. ನಮಗೆ ಸಮಸ್ಯೆ ಇದ್ದರೂ ನೀರು ಬಿಡುತ್ತಿದ್ದಾರೆ,ಸರ್ವ ಪಕ್ಷಗಳ ಸಭೆ ಕರೆದಿರುವ ಬಗ್ಗೆ ಮಾಹಿತಿ ಇದೆ, ಎಲ್ಲರೂ ಸೇರಿ ಚರ್ಚಿಸಲಿ, ರೈತರ ಹಿತ ಕಾಪಾಡುವುದು ಪ್ರಮುಖವಾಗಿದೆ ಎಂದರು.

ಕಾವೇರಿ ವಿಚಾರದಲ್ಲಿ ನಾನು ಸಂಸತ್ತಿನಲ್ಲಿ ಕಾವೇರಿ ನೀರಿನ ಬಗ್ಗೆ ಮಾತನಾಡಿದ್ದೇನೆ. ನಮ್ಮ ಸಮಸ್ಯೆ ಬಗ್ಗೆ ಹೇಳಿದ್ದೇನೆ. ಕೇಂದ್ರದ ಸಚಿವರನ್ನ ಸಹ ಭೇಟಿ ಮಾಡಿದ್ದೇನೆ. ಇವತ್ತು ಸಮಸ್ಯೆ ಯಾಗಿದೆ, ದನಿ ಎತ್ತುತ್ತೇವೆ ಎಂದರು.
ರಾಜಕೀಯವಾಗಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿದ್ದೇವೆ, ಬಿಜೆಪಿ ಸಂಸದೆಅಲ್ಲ ಬಿಜೆಪಿ ನಿರ್ಧಾರ ನನಗೆ ಅನ್ವಯವಾಗಲ್ಲ, ಅದು ಅವರಿಗೆ ಬಿಟ್ಟದ್ದು. ಎಲ್ಲವನ್ನೂ ನನ್ನ ಕೇಳಿ ಮಾಡಬೇಕು ಎಂಬ ನಿಯಮ ಇಲ್ಲ. ಪ್ರತಿಯೊಂದು ವಿಷಯದಲ್ಲೂ ನಾನು ಮಧ್ಯ ಪ್ರವೇಶ ಮಾಡಲ್ಲ. ನನ್ನನ್ನು ಸಂಪರ್ಕ ಮಾಡಿದರೆ ಬೆಂಬಲ ಮಾಡುತ್ತೇವೆ,ಇನ್ನು ನನಗೆ ರಾಜಕೀಯ ಅನಿವಾರ್ಯವಾಗಿಲ್ಲ, ಆಕಸ್ಮಿಕ ಮಾತ್ರ
ಎಂದರು.

ಆಪರೆಷನ್ ಹಸ್ತ ವಿಚಾರವಾಗಿ ಯಾರು ನನಗೆ ಆಹ್ವಾನ ಮಾಡಿಲ್ಲ, ನಾನು ಸಂತೋಷವಾಗಿದ್ದೇನೆ. ಕಾಂಗ್ರೆಸ್ ನಿಂದ ನಮಗೆ ಯಾವುದೇ ಆಫರ್ ನೀಡಿಲ್ಲ. ಎಲ್ಲವೂ ವದಂತಿಯ ಎಲ್ಲವೂ ಸರಿ ಎಂದಾದರೆ ಮಾತ್ರ ಮುಂದಿನ ಹೆಜ್ಜೆ ಇಡುತ್ತೇನೆ ಎಂದರು.

lokesh

Recent Posts

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

2 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

2 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

2 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

2 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

2 hours ago

ಹನೂರು | ಮಧ್ಯರಾತ್ರಿ ಮಾರಕಾಸ್ತ್ರ ಹಿಡಿದು ಓಡಾಟ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಹನೂರು : ಶನಿವಾರ ಮಧ್ಯರಾತ್ರಿ ಎರಡು ಗಂಟೆ ವೇಳೆಯಲ್ಲಿ ಯಾರೋ ಆಸಾಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಐದಾರು ಜನರು ಓಡಾಡುತ್ತಿರುವ ದೃಶ್ಯ…

3 hours ago