ಮಂಡ್ಯ : ಕೃಷ್ಣರಾಜಸಾಗರದಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವುದರಿಂದ ಜನಸಾಮಾನ್ಯರಿಗೂ ಸಂಕಷ್ಟ ಎದುರಾಗಲಿದ್ದು, ರೈತರ ಹೋರಾಟದ ಜೊತೆ ನಾವೆಲ್ಲರೂ ನಿಲ್ಲಬೇಕಾಗಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂಕಷ್ಟಕಾಲದಲ್ಲಿ ರೈತರು ಬೆಳೆದಿರುವ ಬೆಳೆಗೆ ಮಾತ್ರ ಸಂಕಷ್ಟ ಎಂದು ಭಾವಿಸಬಾರದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಕಾಡಲಿದೆ. ಹಾಗಾಗಿ ಹೋರಾಟಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದರು.
ರೈತರ ಸಮಸ್ಯೆಯಾಗಲಿ ನೀರಿನ ಸಮಸ್ಯೆಯಾಗಲಿ ಅದು ರೈತರಿಗೆ ಸಂಬಂಧಿಸಿದ ಸಮಸ್ಯೆ ಅಲ್ಲ ಬದಲಾಗಿ , ಸಾಮಾನ್ಯ ಜನರ ಸಮಸ್ಯೆ ಕೂಡ ಹಾಗಿದೆ. ಇಂತಹ ವಿಷಯದಲ್ಲಿ ಯಾರೂ ಕೂಡ ರಾಜಕಾರಣ ಮಾಡಬಾರದು. ಮಳೆ ಬಾರದ ಕಾರಣ ಸಂಕಷ್ಟ ಪರಿಸ್ಥಿತಿ ಎದುರಾಗಿದೆ ಕಳೆದ ಬಾರಿ ಮಳೆಯಾಗಿ ಕಾವೇರಿ ಮಾತೆಗೆ ಬಾಗಿನ ಅರ್ಪಣೆ ಮಾಡಿದ್ದೆವು,ಆದರೆ ಈ ಬಾರಿ ಸಂಕಷ್ಟದ ಜೊತೆಗೆ ತಮಿಳುನಾಡಿಗೆ ನೀರು ಬಿಟ್ಟಿರುವುದರಿಂದ ರೈತರ ಕಷ್ಟ ಹೇಳತೀರದಾಗಿದೆ,ನಾವು ಯಾವ ರೀತಿ ಹೋರಾಟ ಮಾಡುತ್ತೇವೆ ಎಂಬುದು ಮುಖ್ಯ ಎಂದು ತಿಳಿಸಿದರು.
ಕೇಂದ್ರದಲ್ಲಿ ತಮಿಳುನಾಡಿಗೆ ಹೆಚ್ಚು ಒಲವು ಇದೆ. ನಾವು ಹೋರಾಟ ಮಾಡಬೇಕಾದ ಅವಶ್ಯಕತೆಯಿದೆ. ಇದಕ್ಕೆ ಪರಿಹಾರ ಹುಡುಕುವ ಕೆಲಸ ಮಾಡಬೇಕು. ನಮಗೆ ಸಮಸ್ಯೆ ಇದೆ, ನಮ್ಮ ಹೋರಾಟ ನಾವು ಮಾಡಬೇಕು. ನಮಗೆ ಸಮಸ್ಯೆ ಇದ್ದರೂ ನೀರು ಬಿಡುತ್ತಿದ್ದಾರೆ,ಸರ್ವ ಪಕ್ಷಗಳ ಸಭೆ ಕರೆದಿರುವ ಬಗ್ಗೆ ಮಾಹಿತಿ ಇದೆ, ಎಲ್ಲರೂ ಸೇರಿ ಚರ್ಚಿಸಲಿ, ರೈತರ ಹಿತ ಕಾಪಾಡುವುದು ಪ್ರಮುಖವಾಗಿದೆ ಎಂದರು.
ಕಾವೇರಿ ವಿಚಾರದಲ್ಲಿ ನಾನು ಸಂಸತ್ತಿನಲ್ಲಿ ಕಾವೇರಿ ನೀರಿನ ಬಗ್ಗೆ ಮಾತನಾಡಿದ್ದೇನೆ. ನಮ್ಮ ಸಮಸ್ಯೆ ಬಗ್ಗೆ ಹೇಳಿದ್ದೇನೆ. ಕೇಂದ್ರದ ಸಚಿವರನ್ನ ಸಹ ಭೇಟಿ ಮಾಡಿದ್ದೇನೆ. ಇವತ್ತು ಸಮಸ್ಯೆ ಯಾಗಿದೆ, ದನಿ ಎತ್ತುತ್ತೇವೆ ಎಂದರು.
ರಾಜಕೀಯವಾಗಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿದ್ದೇವೆ, ಬಿಜೆಪಿ ಸಂಸದೆಅಲ್ಲ ಬಿಜೆಪಿ ನಿರ್ಧಾರ ನನಗೆ ಅನ್ವಯವಾಗಲ್ಲ, ಅದು ಅವರಿಗೆ ಬಿಟ್ಟದ್ದು. ಎಲ್ಲವನ್ನೂ ನನ್ನ ಕೇಳಿ ಮಾಡಬೇಕು ಎಂಬ ನಿಯಮ ಇಲ್ಲ. ಪ್ರತಿಯೊಂದು ವಿಷಯದಲ್ಲೂ ನಾನು ಮಧ್ಯ ಪ್ರವೇಶ ಮಾಡಲ್ಲ. ನನ್ನನ್ನು ಸಂಪರ್ಕ ಮಾಡಿದರೆ ಬೆಂಬಲ ಮಾಡುತ್ತೇವೆ,ಇನ್ನು ನನಗೆ ರಾಜಕೀಯ ಅನಿವಾರ್ಯವಾಗಿಲ್ಲ, ಆಕಸ್ಮಿಕ ಮಾತ್ರ
ಎಂದರು.
ಆಪರೆಷನ್ ಹಸ್ತ ವಿಚಾರವಾಗಿ ಯಾರು ನನಗೆ ಆಹ್ವಾನ ಮಾಡಿಲ್ಲ, ನಾನು ಸಂತೋಷವಾಗಿದ್ದೇನೆ. ಕಾಂಗ್ರೆಸ್ ನಿಂದ ನಮಗೆ ಯಾವುದೇ ಆಫರ್ ನೀಡಿಲ್ಲ. ಎಲ್ಲವೂ ವದಂತಿಯ ಎಲ್ಲವೂ ಸರಿ ಎಂದಾದರೆ ಮಾತ್ರ ಮುಂದಿನ ಹೆಜ್ಜೆ ಇಡುತ್ತೇನೆ ಎಂದರು.
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…