ಮಂಡ್ಯ

ಕಾವೇರಿ ನದಿ ನೀರು ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಬೇಕು : ಸುಮಲತಾ

ಮಂಡ್ಯ : ಕೃಷ್ಣರಾಜಸಾಗರದಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವುದರಿಂದ ಜನಸಾಮಾನ್ಯರಿಗೂ ಸಂಕಷ್ಟ ಎದುರಾಗಲಿದ್ದು, ರೈತರ ಹೋರಾಟದ ಜೊತೆ ನಾವೆಲ್ಲರೂ ನಿಲ್ಲಬೇಕಾಗಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂಕಷ್ಟಕಾಲದಲ್ಲಿ ರೈತರು ಬೆಳೆದಿರುವ ಬೆಳೆಗೆ ಮಾತ್ರ ಸಂಕಷ್ಟ ಎಂದು ಭಾವಿಸಬಾರದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಕಾಡಲಿದೆ. ಹಾಗಾಗಿ ಹೋರಾಟಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದರು.

ರೈತರ ಸಮಸ್ಯೆಯಾಗಲಿ ನೀರಿನ ಸಮಸ್ಯೆಯಾಗಲಿ ಅದು ರೈತರಿಗೆ ಸಂಬಂಧಿಸಿದ ಸಮಸ್ಯೆ ಅಲ್ಲ ಬದಲಾಗಿ , ಸಾಮಾನ್ಯ ಜನರ ಸಮಸ್ಯೆ ಕೂಡ ಹಾಗಿದೆ. ಇಂತಹ ವಿಷಯದಲ್ಲಿ ಯಾರೂ ಕೂಡ ರಾಜಕಾರಣ ಮಾಡಬಾರದು. ಮಳೆ ಬಾರದ ಕಾರಣ ಸಂಕಷ್ಟ ಪರಿಸ್ಥಿತಿ ಎದುರಾಗಿದೆ ಕಳೆದ ಬಾರಿ ಮಳೆಯಾಗಿ ಕಾವೇರಿ ಮಾತೆಗೆ ಬಾಗಿನ ಅರ್ಪಣೆ ಮಾಡಿದ್ದೆವು,ಆದರೆ ಈ ಬಾರಿ ಸಂಕಷ್ಟದ ಜೊತೆಗೆ ತಮಿಳುನಾಡಿಗೆ ನೀರು ಬಿಟ್ಟಿರುವುದರಿಂದ ರೈತರ ಕಷ್ಟ ಹೇಳತೀರದಾಗಿದೆ,ನಾವು ಯಾವ ರೀತಿ ಹೋರಾಟ ಮಾಡುತ್ತೇವೆ ಎಂಬುದು ಮುಖ್ಯ ಎಂದು ತಿಳಿಸಿದರು.

ಕೇಂದ್ರದಲ್ಲಿ ತಮಿಳುನಾಡಿಗೆ ಹೆಚ್ಚು ಒಲವು ಇದೆ. ನಾವು ಹೋರಾಟ ಮಾಡಬೇಕಾದ ಅವಶ್ಯಕತೆಯಿದೆ. ಇದಕ್ಕೆ ಪರಿಹಾರ ಹುಡುಕುವ ಕೆಲಸ ಮಾಡಬೇಕು. ನಮಗೆ ಸಮಸ್ಯೆ ಇದೆ, ನಮ್ಮ ಹೋರಾಟ ನಾವು ಮಾಡಬೇಕು. ನಮಗೆ ಸಮಸ್ಯೆ ಇದ್ದರೂ ನೀರು ಬಿಡುತ್ತಿದ್ದಾರೆ,ಸರ್ವ ಪಕ್ಷಗಳ ಸಭೆ ಕರೆದಿರುವ ಬಗ್ಗೆ ಮಾಹಿತಿ ಇದೆ, ಎಲ್ಲರೂ ಸೇರಿ ಚರ್ಚಿಸಲಿ, ರೈತರ ಹಿತ ಕಾಪಾಡುವುದು ಪ್ರಮುಖವಾಗಿದೆ ಎಂದರು.

ಕಾವೇರಿ ವಿಚಾರದಲ್ಲಿ ನಾನು ಸಂಸತ್ತಿನಲ್ಲಿ ಕಾವೇರಿ ನೀರಿನ ಬಗ್ಗೆ ಮಾತನಾಡಿದ್ದೇನೆ. ನಮ್ಮ ಸಮಸ್ಯೆ ಬಗ್ಗೆ ಹೇಳಿದ್ದೇನೆ. ಕೇಂದ್ರದ ಸಚಿವರನ್ನ ಸಹ ಭೇಟಿ ಮಾಡಿದ್ದೇನೆ. ಇವತ್ತು ಸಮಸ್ಯೆ ಯಾಗಿದೆ, ದನಿ ಎತ್ತುತ್ತೇವೆ ಎಂದರು.
ರಾಜಕೀಯವಾಗಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿದ್ದೇವೆ, ಬಿಜೆಪಿ ಸಂಸದೆಅಲ್ಲ ಬಿಜೆಪಿ ನಿರ್ಧಾರ ನನಗೆ ಅನ್ವಯವಾಗಲ್ಲ, ಅದು ಅವರಿಗೆ ಬಿಟ್ಟದ್ದು. ಎಲ್ಲವನ್ನೂ ನನ್ನ ಕೇಳಿ ಮಾಡಬೇಕು ಎಂಬ ನಿಯಮ ಇಲ್ಲ. ಪ್ರತಿಯೊಂದು ವಿಷಯದಲ್ಲೂ ನಾನು ಮಧ್ಯ ಪ್ರವೇಶ ಮಾಡಲ್ಲ. ನನ್ನನ್ನು ಸಂಪರ್ಕ ಮಾಡಿದರೆ ಬೆಂಬಲ ಮಾಡುತ್ತೇವೆ,ಇನ್ನು ನನಗೆ ರಾಜಕೀಯ ಅನಿವಾರ್ಯವಾಗಿಲ್ಲ, ಆಕಸ್ಮಿಕ ಮಾತ್ರ
ಎಂದರು.

ಆಪರೆಷನ್ ಹಸ್ತ ವಿಚಾರವಾಗಿ ಯಾರು ನನಗೆ ಆಹ್ವಾನ ಮಾಡಿಲ್ಲ, ನಾನು ಸಂತೋಷವಾಗಿದ್ದೇನೆ. ಕಾಂಗ್ರೆಸ್ ನಿಂದ ನಮಗೆ ಯಾವುದೇ ಆಫರ್ ನೀಡಿಲ್ಲ. ಎಲ್ಲವೂ ವದಂತಿಯ ಎಲ್ಲವೂ ಸರಿ ಎಂದಾದರೆ ಮಾತ್ರ ಮುಂದಿನ ಹೆಜ್ಜೆ ಇಡುತ್ತೇನೆ ಎಂದರು.

lokesh

Recent Posts

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

3 mins ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

10 mins ago

ಮಾನಸಿಕ ಅಸ್ವಸ್ಥರಿಗೆ ಬೇಕಿದೆ ಮಮತೆಯ ಮನೆ

ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…

16 mins ago

ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಹೆಚ್ಚಿನ ಬೇಡಿಕೆ ನಿರೀಕ್ಷೆ

ಗಿರೀಶ್ ಹುಣಸೂರು ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…

19 mins ago

‘ನಮ್ಮ ಕ್ಲಿನಿಕ್’; ಉಡಾಫೆ ಸಿಬ್ಬಂದಿಗೆ ಬ್ರೇಕ್!

ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…

24 mins ago