ಮಂಡ್ಯ

ಪ್ರತಿಯೊಬ್ಬರ ಸಣ್ಣ ಹೆಜ್ಜೆಗಳ ದೊಡ್ಡ ಪರಿಣಾಮವೇ Plant4Mother : ಇಒ ಹೆಚ್.ಜಿ.ಶ್ರೀನಿವಾಸ್

ಮಂಡ್ಯ: ಪ್ರತಿಯೊಬ್ಬ ನಾಗರಿಕರು ಗಿಡ-ಮರಗಳನ್ನು ಬೆಳೆಸಿ ಉಳಿಸುವ ಮೂಲಕ ಪರಿಸರವನ್ನು ಸಂರಕ್ಷಿಸುವ ಜವಾಬ್ದಾರಿಯನ್ನು ಹೊಂದಿದ್ದು ಅದರಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಗಿಡ ಬೆಳಸಿ ಮತ್ತು ಉಳಿಸಿ ಹಾಗೂ ಎಲ್ಲರೂ ಗಿಡಗಳನ್ನು ನೆಡಿ ಎಂದು ಕಾರ್ಯನಿರ್ವಾಹಕ ಅಧಿಕಾರಿಗಳಾದ ಹೆಚ್.ಜಿ.ಶ್ರೀನಿವಾಸ್ ಹೇಳಿದರು.

ಇಂದು ಯತ್ತಂಬಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಂತರಹಳ್ಳಿ ಬೆಟ್ಟದ ಆವರಣದಲ್ಲಿ ಅರಣ್ಯ ಇಲಾಖೆ ಮತ್ತು ತೋಟಗಾರಿಕೆ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ಎಂಬ ಅಭಿಯಾನದ ಮೂಲಕ ಸಸಿ ನೆಟ್ಟು ನಂತರ ಮಾತನಾಡಿದ ಅವರು ಮಳವಳ್ಳಿ ತಾಲ್ಲೂಕಿನ 39 ಗ್ರಾಮ ಪಂಚಾಯತಿಯಲ್ಲಿ ಈ ಅಭಿಯಾನವನ್ನು ಹಮ್ಮಿಕೊಂಡಿದೆವೆ ಅದ್ದರಿಂದ ಪ್ರತಿಯೊಬ್ಬರು ತಮ್ಮ ತಾಯಿಯ ಹೆಸರಿನಲ್ಲಿ ನೆನಪಿಗಾಗಿ ಒಂದು ಗಿಡ ನೆಟ್ಟು ಬೆಳೆಸುವಂತೆ ತಿಳಿಸಿದರು.

ಪ್ರಕೃತಿಯ ಸ್ವರೂಪ ಅಮ್ಮನ ಹೆಸರನ್ನು ಅಮರವಾಗಿಸಲು ಪ್ರತಿಯೊಬ್ಬರೂ ಒಂದೊಂದು ಸಸಿಯನ್ನು ನೆಟ್ಟು ಪರಿಸರವನ್ನ ಕಾಪಾಡುವಲ್ಲಿ ಪರಿಸರ ಪ್ರೇಮವನ್ನ ಬೆಳೆಸಿಕೊಳ್ಳ ಹಾಗೂ ನಗರೀಕರಣದ ಹೆಸರಿನಲ್ಲಿ ಕಾಂಕ್ರೀಟ್‌ರಣ ಹೆಚ್ಚಾಗುತ್ತಿದ್ದು ಪ್ರಸ್ತುತದ ಸಂದರ್ಭದಲ್ಲಿ ನಮ್ಮ ಪರಿಸರವನ್ನು ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ ಕಾಪಾಡಿಕೊಂಡು ಹೋಗಬೇಕಾಗಿದೆ. ಇಂದು ವೃಕ್ಷ ಅಭಿಯಾನದ ಮೂಲಕ ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಹುಟ್ಟು ಹಬ್ಬಕ್ಕೆ ಗಿಡಗಳನ್ನು ನೆಡುವುದರಿಂದ ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳು ಎಂದು ಹೇಳಿದರು.

ತಾಯಿಯ ಋಣವನ್ನು ತೀರಿಸಲು ಯಾರಿಂದಲೂ ಸಾಧ್ಯವಿಲ್ಲ ಆಗಾಗಿ ಪ್ರತಿಯೊಬ್ಬರು ಅಮ್ಮನ ಹೆಸರಿನಲ್ಲಿ ಸಸಿ ಬೆಳೆಸಿ ಪ್ರಕೃತಿಗೆ ಒಂದು ಕೊಡುಗೆಯಾಗಿ ನೀಡಬೇಕೆಂದು ತಿಳಿಸಿದರು. ಪರಿಸರವನ್ನು ನಾವು ಹಸಿರಾಗಿಸಿದರೆ ಅದು ನಮಗೆ ಉಸಿರನ್ನು ನೀಡುತ್ತದೆ, ಪ್ರತಿಯೊಬ್ಬರ ಸಣ್ಣ ಹೆಜ್ಜೆಗಳು ದೊಡ್ಡ ಪರಿಣಾಮವೇ Plant4Mother ಎಂದರು.

ಇದೇ ಸಂದರ್ಭದಲ್ಲಿ ಅಧ್ಯಕ್ಷರಾದ ಭಾಗ್ಯಮ್ಮ, ಪಿಡಿಒ ಲೋಕೇಶ್, ಡಿ.ಆರ್.ಎಫ್.ಒ ಶಿವಕುಮಾರ್, ತಾಲ್ಲೂಕು ಐಇಸಿ ಸಂಯೋಜಕರಾದ ಸುನಿಲ್ ಕುಮಾರ್, ಕಾರ್ಯದರ್ಶಿಗಳಾದ ಅಭಿಷೇಕ್, ಗ್ರಾಮ ಪಂಚಾಯತಿ ಸದಸ್ಯರು, ಶಾಲಾ ಮಕ್ಕಳು, ಶಿಕ್ಷಕರು, ನರೇಗಾ ಕೂಲಿಕಾರರು, ಸಾರ್ವಜನಿಕರು ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

1 hour ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

2 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

6 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

6 hours ago

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

9 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

9 hours ago