ಮಂಡ್ಯ

ಪ್ರತಿಯೊಬ್ಬರ ಸಣ್ಣ ಹೆಜ್ಜೆಗಳ ದೊಡ್ಡ ಪರಿಣಾಮವೇ Plant4Mother : ಇಒ ಹೆಚ್.ಜಿ.ಶ್ರೀನಿವಾಸ್

ಮಂಡ್ಯ: ಪ್ರತಿಯೊಬ್ಬ ನಾಗರಿಕರು ಗಿಡ-ಮರಗಳನ್ನು ಬೆಳೆಸಿ ಉಳಿಸುವ ಮೂಲಕ ಪರಿಸರವನ್ನು ಸಂರಕ್ಷಿಸುವ ಜವಾಬ್ದಾರಿಯನ್ನು ಹೊಂದಿದ್ದು ಅದರಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಗಿಡ ಬೆಳಸಿ ಮತ್ತು ಉಳಿಸಿ ಹಾಗೂ ಎಲ್ಲರೂ ಗಿಡಗಳನ್ನು ನೆಡಿ ಎಂದು ಕಾರ್ಯನಿರ್ವಾಹಕ ಅಧಿಕಾರಿಗಳಾದ ಹೆಚ್.ಜಿ.ಶ್ರೀನಿವಾಸ್ ಹೇಳಿದರು.

ಇಂದು ಯತ್ತಂಬಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಂತರಹಳ್ಳಿ ಬೆಟ್ಟದ ಆವರಣದಲ್ಲಿ ಅರಣ್ಯ ಇಲಾಖೆ ಮತ್ತು ತೋಟಗಾರಿಕೆ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ಎಂಬ ಅಭಿಯಾನದ ಮೂಲಕ ಸಸಿ ನೆಟ್ಟು ನಂತರ ಮಾತನಾಡಿದ ಅವರು ಮಳವಳ್ಳಿ ತಾಲ್ಲೂಕಿನ 39 ಗ್ರಾಮ ಪಂಚಾಯತಿಯಲ್ಲಿ ಈ ಅಭಿಯಾನವನ್ನು ಹಮ್ಮಿಕೊಂಡಿದೆವೆ ಅದ್ದರಿಂದ ಪ್ರತಿಯೊಬ್ಬರು ತಮ್ಮ ತಾಯಿಯ ಹೆಸರಿನಲ್ಲಿ ನೆನಪಿಗಾಗಿ ಒಂದು ಗಿಡ ನೆಟ್ಟು ಬೆಳೆಸುವಂತೆ ತಿಳಿಸಿದರು.

ಪ್ರಕೃತಿಯ ಸ್ವರೂಪ ಅಮ್ಮನ ಹೆಸರನ್ನು ಅಮರವಾಗಿಸಲು ಪ್ರತಿಯೊಬ್ಬರೂ ಒಂದೊಂದು ಸಸಿಯನ್ನು ನೆಟ್ಟು ಪರಿಸರವನ್ನ ಕಾಪಾಡುವಲ್ಲಿ ಪರಿಸರ ಪ್ರೇಮವನ್ನ ಬೆಳೆಸಿಕೊಳ್ಳ ಹಾಗೂ ನಗರೀಕರಣದ ಹೆಸರಿನಲ್ಲಿ ಕಾಂಕ್ರೀಟ್‌ರಣ ಹೆಚ್ಚಾಗುತ್ತಿದ್ದು ಪ್ರಸ್ತುತದ ಸಂದರ್ಭದಲ್ಲಿ ನಮ್ಮ ಪರಿಸರವನ್ನು ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ ಕಾಪಾಡಿಕೊಂಡು ಹೋಗಬೇಕಾಗಿದೆ. ಇಂದು ವೃಕ್ಷ ಅಭಿಯಾನದ ಮೂಲಕ ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಹುಟ್ಟು ಹಬ್ಬಕ್ಕೆ ಗಿಡಗಳನ್ನು ನೆಡುವುದರಿಂದ ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳು ಎಂದು ಹೇಳಿದರು.

ತಾಯಿಯ ಋಣವನ್ನು ತೀರಿಸಲು ಯಾರಿಂದಲೂ ಸಾಧ್ಯವಿಲ್ಲ ಆಗಾಗಿ ಪ್ರತಿಯೊಬ್ಬರು ಅಮ್ಮನ ಹೆಸರಿನಲ್ಲಿ ಸಸಿ ಬೆಳೆಸಿ ಪ್ರಕೃತಿಗೆ ಒಂದು ಕೊಡುಗೆಯಾಗಿ ನೀಡಬೇಕೆಂದು ತಿಳಿಸಿದರು. ಪರಿಸರವನ್ನು ನಾವು ಹಸಿರಾಗಿಸಿದರೆ ಅದು ನಮಗೆ ಉಸಿರನ್ನು ನೀಡುತ್ತದೆ, ಪ್ರತಿಯೊಬ್ಬರ ಸಣ್ಣ ಹೆಜ್ಜೆಗಳು ದೊಡ್ಡ ಪರಿಣಾಮವೇ Plant4Mother ಎಂದರು.

ಇದೇ ಸಂದರ್ಭದಲ್ಲಿ ಅಧ್ಯಕ್ಷರಾದ ಭಾಗ್ಯಮ್ಮ, ಪಿಡಿಒ ಲೋಕೇಶ್, ಡಿ.ಆರ್.ಎಫ್.ಒ ಶಿವಕುಮಾರ್, ತಾಲ್ಲೂಕು ಐಇಸಿ ಸಂಯೋಜಕರಾದ ಸುನಿಲ್ ಕುಮಾರ್, ಕಾರ್ಯದರ್ಶಿಗಳಾದ ಅಭಿಷೇಕ್, ಗ್ರಾಮ ಪಂಚಾಯತಿ ಸದಸ್ಯರು, ಶಾಲಾ ಮಕ್ಕಳು, ಶಿಕ್ಷಕರು, ನರೇಗಾ ಕೂಲಿಕಾರರು, ಸಾರ್ವಜನಿಕರು ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

4 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

5 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

6 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

8 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

14 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

20 hours ago