ಮಂಡ್ಯ : ಕೆರಗೋಡು ಹನುಮನ ಧ್ವಜ ತೆರವು ರಾಜ್ಯಾದಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಧ್ವಜ ತೆರವುಗೊಳಿಸಿದ ಸಂದರ್ಭ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ವಿವಿಧ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೆ ಕೆ.ಆರ್ ಪೇಟೆ ಪಟ್ಟಣದ ಟಿಬಿ ವೃತ್ತದಲ್ಲಿ ಹಾರಿಸಿದ್ದ ಭಗವಾಧ್ವಜ ಹಾಗೂ ಅಳವಡಿಸಲಾಗಿದ್ದ ಮಹನೀಯ ಫ್ಲೆಕ್ಸ್ ಅನ್ನು ಪುರಸಭೆ ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಇದನ್ನ ವಿರೋಧಿಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಟಿಬಿ ವೃತ್ತದ ಹತ್ತಾರು ವರ್ಷಗಳಿಂದ ಭಗವಾಧ್ವಜ ಹಾರುತ್ತಿತ್ತು. ಕೆಲ ದಿನಗಳ ಹಿಂದೆ ಪುರಸಭೆ ಧ್ವಜ ತೆರವುಗೊಳಿಸಿತ್ತು. ಹಿಂದೂ ಕಾರ್ಯಕರ್ತರು ಶನಿವಾರ ಮತ್ತೆ ಭಗವಾಧ್ವಜ ಹಾರಿಸಿದ್ದರು. ಇದರ ಜೊತೆಗೆ ಕೆಂಪೇಗೌಡ, ಡಾ.ಬಿ ಆರ್ ಅಂಬೇಡ್ಕರ್, ಸಂಗೊಳ್ಳಿರಾಯಣ್ಣ, ಬಸವಣ್ಣ ವಿಶ್ವಕರ್ಮ ಮಡಿವಾಳ ಮಾಚಯ್ಯನವರು, ಆಧ್ಯವಚನಕಾರ ದೇವರ ದಾಸಿಮಯ್ಯ ಸೇರಿ ಹಲವು ಮಹನೀಯರ ಭಾವಚಿತ್ರ ಕಳಸ ಆಕಾರದ ಪ್ಲೆಕ್ಸ್ ಅಳವಡಿಸಿದ್ದರು. ಆದರೆ ತಡರಾತ್ರಿ ಪುರಸಭೆ ಅಧಿಕಾರಿಗಳು ಯಾರಿಗೂ ಮಾಹಿತಿ ನೀಡದೇ ಪೋಲಿಸ್ ಭದ್ರತೆಯಲ್ಲಿ ಭಗವಾಧ್ವಜ ಜೊತೆಗೆ ಧ್ವಜಕಂಬವನ್ನೂ ತೆರವು ಮಾಡಿದ್ದಾರೆ. ಜೊತೆಗೆ ಮಹನೀಯರ ಪ್ಲೆಕ್ಸ್ ಕೂಡ ತೆರವು ಮಾಡಿದ್ದಾರೆ.
ಈ ಸಂಬಂಧ ಅಧಿಕಾರಿಗಳ ನಡೆ ಖಂಡಿಸಿ ಹಿಂದೂ ಸಂಘಟನೆ ಕಾರ್ಯಕರ್ತರು ಬೆಳ್ಳಂಬೆಳಗ್ಗೆ ಸ್ಥಳದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ನವದೆಹಲಿ: ಮೇ.3ರಂದು ನಡೆದಿದ್ದ ನೀಟ್ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್ಜಿಎ…
ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ…
ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…
ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್ ಆಗಿ ಶಾಸಕ ಜೆಸಿಡಿ ಪ್ರಭಾಕರ್ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್ ಅವರು ಪ್ರಭಾಕರ್…
ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…