ಮಂಡ್ಯ : ಕೆರಗೋಡು ಹನುಮನ ಧ್ವಜ ತೆರವು ರಾಜ್ಯಾದಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಧ್ವಜ ತೆರವುಗೊಳಿಸಿದ ಸಂದರ್ಭ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ವಿವಿಧ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೆ ಕೆ.ಆರ್ ಪೇಟೆ ಪಟ್ಟಣದ ಟಿಬಿ ವೃತ್ತದಲ್ಲಿ ಹಾರಿಸಿದ್ದ ಭಗವಾಧ್ವಜ ಹಾಗೂ ಅಳವಡಿಸಲಾಗಿದ್ದ ಮಹನೀಯ ಫ್ಲೆಕ್ಸ್ ಅನ್ನು ಪುರಸಭೆ ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಇದನ್ನ ವಿರೋಧಿಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಟಿಬಿ ವೃತ್ತದ ಹತ್ತಾರು ವರ್ಷಗಳಿಂದ ಭಗವಾಧ್ವಜ ಹಾರುತ್ತಿತ್ತು. ಕೆಲ ದಿನಗಳ ಹಿಂದೆ ಪುರಸಭೆ ಧ್ವಜ ತೆರವುಗೊಳಿಸಿತ್ತು. ಹಿಂದೂ ಕಾರ್ಯಕರ್ತರು ಶನಿವಾರ ಮತ್ತೆ ಭಗವಾಧ್ವಜ ಹಾರಿಸಿದ್ದರು. ಇದರ ಜೊತೆಗೆ ಕೆಂಪೇಗೌಡ, ಡಾ.ಬಿ ಆರ್ ಅಂಬೇಡ್ಕರ್, ಸಂಗೊಳ್ಳಿರಾಯಣ್ಣ, ಬಸವಣ್ಣ ವಿಶ್ವಕರ್ಮ ಮಡಿವಾಳ ಮಾಚಯ್ಯನವರು, ಆಧ್ಯವಚನಕಾರ ದೇವರ ದಾಸಿಮಯ್ಯ ಸೇರಿ ಹಲವು ಮಹನೀಯರ ಭಾವಚಿತ್ರ ಕಳಸ ಆಕಾರದ ಪ್ಲೆಕ್ಸ್ ಅಳವಡಿಸಿದ್ದರು. ಆದರೆ ತಡರಾತ್ರಿ ಪುರಸಭೆ ಅಧಿಕಾರಿಗಳು ಯಾರಿಗೂ ಮಾಹಿತಿ ನೀಡದೇ ಪೋಲಿಸ್ ಭದ್ರತೆಯಲ್ಲಿ ಭಗವಾಧ್ವಜ ಜೊತೆಗೆ ಧ್ವಜಕಂಬವನ್ನೂ ತೆರವು ಮಾಡಿದ್ದಾರೆ. ಜೊತೆಗೆ ಮಹನೀಯರ ಪ್ಲೆಕ್ಸ್ ಕೂಡ ತೆರವು ಮಾಡಿದ್ದಾರೆ.
ಈ ಸಂಬಂಧ ಅಧಿಕಾರಿಗಳ ನಡೆ ಖಂಡಿಸಿ ಹಿಂದೂ ಸಂಘಟನೆ ಕಾರ್ಯಕರ್ತರು ಬೆಳ್ಳಂಬೆಳಗ್ಗೆ ಸ್ಥಳದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…