ಮಂಡ್ಯ: ಕಾಡು ಪ್ರಾಣಿಗಳ ಹತ್ಯೆಗೆ ಇಟ್ಟಿದ್ದ ಸಿಡಿ ಮದ್ದು ಸ್ಪೋಟಗೊಂಡು ಸ್ವಚ್ಚತಾ ಕಾರ್ಯಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ನಡೆದಿದೆ.
ನಾಗಮಂಗಲ ತಾಲ್ಲೂಕಿನ ಕಂಬದಹಳ್ಳಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಗ್ರಾಮದ ಜೈನಮಠದ ವಸತಿ ನಿಲಯದ ಹರಹಥ್ ಪಾಟೀಲ್ (15) ಹಾಗೂ ಸೌಧರ್ಮ (15) ಗಾಯಗೊಂಡ ವಿದ್ಯಾರ್ಥಿಗಳಾಗಿದ್ದಾರೆ.
ಸ್ವಚ್ಚತಾ ಕಾರ್ಯಕ್ಕಾಗಿ ಇಲ್ಲಿನ ಆಂಜನೇಯ ಬೆಟ್ಟಕ್ಕೆ ಬಂದಿದ್ದ 15 ವಿದ್ಯಾರ್ಥಿಗಳ ಪೈಕಿ ಇವರು ಸ್ವಚ್ಚತಾ ಕಾರ್ಯ ಮಾಡುವಾಗ ಅಕಸ್ಮಾತ್ ಸಿಡಿಮದ್ದು ಮುಟ್ಟಿದ್ದಾರೆ.
ಸಿಡಿಮದ್ದು ಸ್ಪೋಟಕ್ಕೆ ವಿದ್ಯಾರ್ಥಿಗಳ ಕೈ ಹಾಗೂ ಕಾಲಿಗೆ ಗಾಯವಾಗಿದ್ದು, ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪ್ರಾಣಿಗಳ ಭೇಟಿಗೆ ಎಂದು ಸಿಡಿಮದ್ದು ಇಟ್ಟಿರುವುದಾಗಿ ಹೇಳಲಾಗುತ್ತಿದ್ದು, ನಾಗಮಂಗಲದ ಬಿಂಡಿಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲುಗೊಂಡಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…