ಮಂಡ್ಯ

ಜಮೀನಿನಲ್ಲಿ ಇರಿಸಿದ್ದ ಸಿಡಿಮದ್ದು ಸಿಡಿದು ಹಸುವಿಗೆ ತೀವ್ರ ಗಾಯ

ಮಳವಳ್ಳಿ: ಕಾಡು ಪ್ರಾಣಿಗಳನ್ನು ಬೇಟೆಯಾಡುವ ಉದ್ದೇಶದಿಂದ ಜಮೀನಿನಲ್ಲಿ ಅಕ್ರಮವಾಗಿ ಇರಿಸಲಾಗಿದ್ದ ಸಿಡಿಮದ್ದು ಸಿಡಿದು ಇಲಾತಿ ಹಸು ತೀವ್ರವಾಗಿ ಗಾಯಗೊಂಡು, ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ತಾಲ್ಲೂಕಿನ ಹಲಗೂರು-ಮುತ್ತತ್ತಿ ಮಾರ್ಗದ ಬ್ಯಾಡರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜಮೀನಿನಲ್ಲಿ ಹಸುವನ್ನು ಮೇಯಲು ಬಿಡಲಾಗಿದ್ದ ಸಂದರ್ಭದಲ್ಲಿ ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರವಾಗಿದೆ. ಬ್ಯಾಡರಹಳ್ಳಿ ಗ್ರಾಮದ ಚೌಡೇಗೌಡ ಎಂಬವರ ಮಗ ಶಿವರಾಮ್ ಅವರ ಜಮೀನಿನಲ್ಲಿ ಅಪರಿಚಿತರು ಕಾಡುಪ್ರಾಣಿಗಳನ್ನು ಬೇಟೆಯಾಡಲು ಮೂರು ಕಡೆ ಸಿಡಿಮದ್ದನ್ನು ಇರಿಸಿದ್ದರು. ಹಸು ಮೇವು ಮೇಯಲು ಹೋದ ಸಂದರ್ಭದಲ್ಲಿ ಸಿಡಿಮದ್ದು ಸಿಡಿದು ತೀವ್ರಗಾಯಗೊಂಡಿದೆ.

ತಕ್ಷಣ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ ಮೇರೆಗೆ ಸ್ಥಳಕ್ಕೆ ವೃತ್ತ ನಿರೀಕ್ಷಕ ಶ್ರೀಧರ್, ಸಬ್‌ಇನ್‌ಸ್ಪೆಕ್ಟರ್ ಲೋಕೇಶ್ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಡಿವೈಎಸ್ಪಿ, ಶ್ವಾನದಳ ಹಾಗೂ ಬಾಂಬ್ ಪರಿಶೀಲನೆ ತಂಡ ಭೇಟಿ ನೀಡಿ ಸ್ಥಳ ಪರಿಶೀಲಿಸುತ್ತಿರುವಾಗ ಮತ್ತೆ ಎರಡು ಕಡೆ ಇರಿಸಲಾಗಿದ್ದ ಸಿಡಿಮದ್ದು ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗಾಯಗೊಂಡ ಹಸುವಿನ ಜಮೀನಿನ ಮಾಲೀಕ ಶಿವರಾಮ್ ಮಾತನಾಡಿ, ನಾವು ವ್ಯವಸಾಯ ಮಾಡಿಕೊಂಡು ಜೀವನ ನಡೆಸುತ್ತಿದ್ದೇವೆ. ಎಂದಿನಂತೆ ಹಸುಗಳನ್ನು ಮೇಯಿಸಲು ಜಮೀನಿಗೆ ಹೋದಾಗ ಸುಮಾರು 60 ರಿಂದ 70 ಸಾವಿರ ರೂ. ಬೆಲೆ ಬಾಳುವ ಹಸು ಸಿಡಿಮದ್ದಿನಿಂದ ತೀವ್ರ ಗಾಯಗೊಂಡಿದೆ. ಅದು ಮೇವು ಮೇಯಲೂ ಆಗುತ್ತಿಲ್ಲ. ಸಂಬಂಧಪಟ್ಟ ಅಽಕಾರಿಗಳು ಸೂಕ್ತ ಪರಿಹಾರ ಕೊಡಿಸಿ ಕೊಡಬೇಕೆಂದು ಮನವಿ ಮಾಡಿದರು.

ಹಲಗೂರು ಠಾಣೆ ಸಬ್‌ಇನ್‌ಸ್ಪೆಕ್ಟರ್ ಲೋಕೇಶ್ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

10 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

10 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

10 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

10 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

11 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

11 hours ago