ಮಂಡ್ಯ

ಜಮೀನಿನಲ್ಲಿ ಇರಿಸಿದ್ದ ಸಿಡಿಮದ್ದು ಸಿಡಿದು ಹಸುವಿಗೆ ತೀವ್ರ ಗಾಯ

ಮಳವಳ್ಳಿ: ಕಾಡು ಪ್ರಾಣಿಗಳನ್ನು ಬೇಟೆಯಾಡುವ ಉದ್ದೇಶದಿಂದ ಜಮೀನಿನಲ್ಲಿ ಅಕ್ರಮವಾಗಿ ಇರಿಸಲಾಗಿದ್ದ ಸಿಡಿಮದ್ದು ಸಿಡಿದು ಇಲಾತಿ ಹಸು ತೀವ್ರವಾಗಿ ಗಾಯಗೊಂಡು, ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ತಾಲ್ಲೂಕಿನ ಹಲಗೂರು-ಮುತ್ತತ್ತಿ ಮಾರ್ಗದ ಬ್ಯಾಡರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜಮೀನಿನಲ್ಲಿ ಹಸುವನ್ನು ಮೇಯಲು ಬಿಡಲಾಗಿದ್ದ ಸಂದರ್ಭದಲ್ಲಿ ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರವಾಗಿದೆ. ಬ್ಯಾಡರಹಳ್ಳಿ ಗ್ರಾಮದ ಚೌಡೇಗೌಡ ಎಂಬವರ ಮಗ ಶಿವರಾಮ್ ಅವರ ಜಮೀನಿನಲ್ಲಿ ಅಪರಿಚಿತರು ಕಾಡುಪ್ರಾಣಿಗಳನ್ನು ಬೇಟೆಯಾಡಲು ಮೂರು ಕಡೆ ಸಿಡಿಮದ್ದನ್ನು ಇರಿಸಿದ್ದರು. ಹಸು ಮೇವು ಮೇಯಲು ಹೋದ ಸಂದರ್ಭದಲ್ಲಿ ಸಿಡಿಮದ್ದು ಸಿಡಿದು ತೀವ್ರಗಾಯಗೊಂಡಿದೆ.

ತಕ್ಷಣ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ ಮೇರೆಗೆ ಸ್ಥಳಕ್ಕೆ ವೃತ್ತ ನಿರೀಕ್ಷಕ ಶ್ರೀಧರ್, ಸಬ್‌ಇನ್‌ಸ್ಪೆಕ್ಟರ್ ಲೋಕೇಶ್ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಡಿವೈಎಸ್ಪಿ, ಶ್ವಾನದಳ ಹಾಗೂ ಬಾಂಬ್ ಪರಿಶೀಲನೆ ತಂಡ ಭೇಟಿ ನೀಡಿ ಸ್ಥಳ ಪರಿಶೀಲಿಸುತ್ತಿರುವಾಗ ಮತ್ತೆ ಎರಡು ಕಡೆ ಇರಿಸಲಾಗಿದ್ದ ಸಿಡಿಮದ್ದು ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗಾಯಗೊಂಡ ಹಸುವಿನ ಜಮೀನಿನ ಮಾಲೀಕ ಶಿವರಾಮ್ ಮಾತನಾಡಿ, ನಾವು ವ್ಯವಸಾಯ ಮಾಡಿಕೊಂಡು ಜೀವನ ನಡೆಸುತ್ತಿದ್ದೇವೆ. ಎಂದಿನಂತೆ ಹಸುಗಳನ್ನು ಮೇಯಿಸಲು ಜಮೀನಿಗೆ ಹೋದಾಗ ಸುಮಾರು 60 ರಿಂದ 70 ಸಾವಿರ ರೂ. ಬೆಲೆ ಬಾಳುವ ಹಸು ಸಿಡಿಮದ್ದಿನಿಂದ ತೀವ್ರ ಗಾಯಗೊಂಡಿದೆ. ಅದು ಮೇವು ಮೇಯಲೂ ಆಗುತ್ತಿಲ್ಲ. ಸಂಬಂಧಪಟ್ಟ ಅಽಕಾರಿಗಳು ಸೂಕ್ತ ಪರಿಹಾರ ಕೊಡಿಸಿ ಕೊಡಬೇಕೆಂದು ಮನವಿ ಮಾಡಿದರು.

ಹಲಗೂರು ಠಾಣೆ ಸಬ್‌ಇನ್‌ಸ್ಪೆಕ್ಟರ್ ಲೋಕೇಶ್ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

52 mins ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

7 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago