ಮಂಡ್ಯ

ಜಮೀನಿನಲ್ಲಿ ಇರಿಸಿದ್ದ ಸಿಡಿಮದ್ದು ಸಿಡಿದು ಹಸುವಿಗೆ ತೀವ್ರ ಗಾಯ

ಮಳವಳ್ಳಿ: ಕಾಡು ಪ್ರಾಣಿಗಳನ್ನು ಬೇಟೆಯಾಡುವ ಉದ್ದೇಶದಿಂದ ಜಮೀನಿನಲ್ಲಿ ಅಕ್ರಮವಾಗಿ ಇರಿಸಲಾಗಿದ್ದ ಸಿಡಿಮದ್ದು ಸಿಡಿದು ಇಲಾತಿ ಹಸು ತೀವ್ರವಾಗಿ ಗಾಯಗೊಂಡು, ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ತಾಲ್ಲೂಕಿನ ಹಲಗೂರು-ಮುತ್ತತ್ತಿ ಮಾರ್ಗದ ಬ್ಯಾಡರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜಮೀನಿನಲ್ಲಿ ಹಸುವನ್ನು ಮೇಯಲು ಬಿಡಲಾಗಿದ್ದ ಸಂದರ್ಭದಲ್ಲಿ ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರವಾಗಿದೆ. ಬ್ಯಾಡರಹಳ್ಳಿ ಗ್ರಾಮದ ಚೌಡೇಗೌಡ ಎಂಬವರ ಮಗ ಶಿವರಾಮ್ ಅವರ ಜಮೀನಿನಲ್ಲಿ ಅಪರಿಚಿತರು ಕಾಡುಪ್ರಾಣಿಗಳನ್ನು ಬೇಟೆಯಾಡಲು ಮೂರು ಕಡೆ ಸಿಡಿಮದ್ದನ್ನು ಇರಿಸಿದ್ದರು. ಹಸು ಮೇವು ಮೇಯಲು ಹೋದ ಸಂದರ್ಭದಲ್ಲಿ ಸಿಡಿಮದ್ದು ಸಿಡಿದು ತೀವ್ರಗಾಯಗೊಂಡಿದೆ.

ತಕ್ಷಣ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ ಮೇರೆಗೆ ಸ್ಥಳಕ್ಕೆ ವೃತ್ತ ನಿರೀಕ್ಷಕ ಶ್ರೀಧರ್, ಸಬ್‌ಇನ್‌ಸ್ಪೆಕ್ಟರ್ ಲೋಕೇಶ್ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಡಿವೈಎಸ್ಪಿ, ಶ್ವಾನದಳ ಹಾಗೂ ಬಾಂಬ್ ಪರಿಶೀಲನೆ ತಂಡ ಭೇಟಿ ನೀಡಿ ಸ್ಥಳ ಪರಿಶೀಲಿಸುತ್ತಿರುವಾಗ ಮತ್ತೆ ಎರಡು ಕಡೆ ಇರಿಸಲಾಗಿದ್ದ ಸಿಡಿಮದ್ದು ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗಾಯಗೊಂಡ ಹಸುವಿನ ಜಮೀನಿನ ಮಾಲೀಕ ಶಿವರಾಮ್ ಮಾತನಾಡಿ, ನಾವು ವ್ಯವಸಾಯ ಮಾಡಿಕೊಂಡು ಜೀವನ ನಡೆಸುತ್ತಿದ್ದೇವೆ. ಎಂದಿನಂತೆ ಹಸುಗಳನ್ನು ಮೇಯಿಸಲು ಜಮೀನಿಗೆ ಹೋದಾಗ ಸುಮಾರು 60 ರಿಂದ 70 ಸಾವಿರ ರೂ. ಬೆಲೆ ಬಾಳುವ ಹಸು ಸಿಡಿಮದ್ದಿನಿಂದ ತೀವ್ರ ಗಾಯಗೊಂಡಿದೆ. ಅದು ಮೇವು ಮೇಯಲೂ ಆಗುತ್ತಿಲ್ಲ. ಸಂಬಂಧಪಟ್ಟ ಅಽಕಾರಿಗಳು ಸೂಕ್ತ ಪರಿಹಾರ ಕೊಡಿಸಿ ಕೊಡಬೇಕೆಂದು ಮನವಿ ಮಾಡಿದರು.

ಹಲಗೂರು ಠಾಣೆ ಸಬ್‌ಇನ್‌ಸ್ಪೆಕ್ಟರ್ ಲೋಕೇಶ್ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

9 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

9 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

10 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

10 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

11 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

12 hours ago