ಮಂಡ್ಯ

ಭತ್ತ, ರಾಗಿ ಖರೀದಿ ನೋಂದಣಿಯ ಅವಧಿ ವಿಸ್ತರಣೆ

ಮಂಡ್ಯ : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ೨೦೨೫-೨೬ನೇ ಸಾಲಿನ ಭತ್ತ ಮತ್ತು ರಾಗಿ ಖರೀದಿಗೆ ಸಮಯಾವಕಾಶ ವಿಸ್ತರಿಸಿದ್ದು, ಭತ್ತ ಖರೀದಿಗೆ ಡಿ.೩೧ರ ವರೆಗೆ ಹಾಗೂ ರಾಗಿ ಖರೀದಿಗೆ ಡಿ.೧೫ರ ವರೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ೨೦೨೫-೨೬ ನೇ ಸಾಲಿನ ಕಬ್ಬು ಸರಬರಾಜು ಮಾಡಿದ ರೈತರಿಗೆ ಹಾಗೂ ೨೦೨೪-೨೫ ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ, ಕೊಬ್ಬರಿ ಸರಬರಾಜು ಮಾಡಿದ ರೈತರಿಗೆ ಹಣ ಪವತಿಸಲು ಬಾಕಿಯಿರುವ ಸಂಬಂಧ ಆಯೋಜಿಸಲಾಗಿದ್ದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

೨೦೨೫-೨೬ ನೇ ಸಾಲಿಗೆ ಸಂಬಂಧಪಟ್ಟಂತೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿ ನೋಂದಣಿಗಾಗಿ ಜಿಲ್ಲೆಯಲ್ಲಿ ೧೭ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರು ನೇರವಾಗಿ ನೋಂದಣಿ ಕೇಂದ್ರಗಳಲ್ಲಿ ಭತ್ತ ಮತ್ತು ರಾಗಿ ಖರೀದಿಗೆ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಹೇಳಿದರು.

ಈವರೆಗೂ ಭತ್ತ ಖರೀದಿಗಾಗಿ ೧೮೨ ರೈತರು ೫೯೫೩.೦೦ ಕ್ವಿಂಟಾಲ್ ಪ್ರಮಾಣದಲ್ಲಿ ಭತ್ತಕ್ಕೆ ನೋಂದಾಯಿಸಿಕೊಂಡಿರುತ್ತಾರೆ. ರಾಗಿ ಖರೀದಿಗಾಗಿ ೧೩,೦೪೭ ರೈತರು ೩,೦೮,೬೬೬ ಕ್ವಿಂಟಾಲ್ ಪ್ರಮಾಣದ ರಾಗಿಗೆ ನೋಂದಾಯಿಸಿಕೊಂಡಿರುತ್ತಾರೆ ಎಂದು ಮಾಹಿತಿ ನೀಡಿದರು.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಸರ್ಕಾರವು ೨೦೨೫-೨೬ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದಿರುವ ಭತ್ತ ಮತ್ತು ರಾಗಿ ಖರೀದಿಸಲು ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂಟಾಲ್‌ಗೆ ರೂ ೨೩೬೯, ಗ್ರೇಡ್- ಎ ಭತ್ತಕ್ಕೆ ರೂ ೨೩೮೯ ಹಾಗೂ ರಾಗಿ ಪ್ರತಿ ಕ್ವಿಂಟಾಲ್‌ಗೆ ರೂ ೪೮೮೬ ನಿಗಽಪಡಿಸಲಾಗಿರುತ್ತದೆ. ಜಿಲ್ಲೆಯ ಎಲ್ಲಾ ರೈತರು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.

ಕಬ್ಬು ಸರಬರಾಜು ಮಾಡುವ ರೈತರಿಗೆ ಪಾವತಿ ಹಣವನ್ನು ಕಬ್ಬು ಸರಬರಾಜು ಮಾಡಿದ ೧೪ ದಿನದೊಳಗೆ ಹಣ ಪಾವತಿಸುವುದು ಕಡ್ಡಾಯವಾಗಿದ್ದು. ಜಿಲ್ಲೆಯಲ್ಲಿನ ಸಕ್ಕರೆ ಕಾರ್ಖಾನೆಗಳು ಕಬ್ಬು ಸರಬರಾಜು ಮಾಡಿದ ರೈತರಿಗೆ ೧೪ ದಿನದೊಳಗೆ ಹಣ ಪಾವತಿಸದಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಹಾಗೂ ೨೦೨೪-೨೫ ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಕೊಬ್ಬರಿ ಸರಬರಾಜು ಮಾಡಿದ ರೈತರಿಗೆ ಬಾಕಿಯಿರುವ ಪಾವತಿ ಹಣವನ್ನು ಶೀಘ್ರದಲ್ಲೇ ಪಾವತಿಸಬೇಕು ಎಂದರು.

ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಪ್ರತೀಕ್ ಹೆಗ್ಡೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

34 mins ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

3 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

3 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

4 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

5 hours ago

ಆಂದೋಲನ ಸಂಪಾದಕೀಯ | ಇಂಧನ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಲಿ

ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…

5 hours ago