ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ ಸಂಬಂಧಿಸಿದಂತೆ ಒಟ್ಟು 34 ಪ್ರಕರಣಗಳು ವರದಿ ಆಗಿದ್ದು, 28 ಪ್ರಕರಣಗಳನ್ನು ಭೇದಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದ್ದಾರೆ.
ಶಾಸಕ ಮಧು ಜಿ.ಮಾದೇಗೌಡ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಈ ಹೆದ್ದಾರಿ ಸಾರ್ವಜನಿಕ ಬಳಕೆಗೆ ಮುಕ್ತಗೊಂಡ ಬಳಿಕ 2022 ರಿಂದ 2025ರ ಅಂತ್ಯಕ್ಕೆ ಈ ಪ್ರಕರಣಗಳು ವರದಿಯಾಗಿವೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಯಾಣಿಕರ ಸುಲಿಗೆಗೆ ಸಂಬಂಧಿಸಿದಂತೆ ಒಟ್ಟು 22 ಪ್ರಕರಣಗಳು ವರದಿಯಾಗಿದ್ದು, 17 ಪ್ರಕರಣಗಳನ್ನು ಭೇದಿಸಲಾಗಿದೆ. ಒಟ್ಟು 34 ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 12, ಮಂಡ್ಯ ಜಿಲ್ಲೆಯಲ್ಲಿ 9 ಹಾಗೂ ಮೈಸೂರು ನಗರದಲ್ಲಿ 1 ಪ್ರಕರಣ ವರದಿಯಾಗಿದೆ ಎಂದರು.
ಪ್ರಯಾಣಿಕರ ದರೋಡೆಗೆ ಸಂಬಂಧಿಸಿದಂತೆ, ವರದಿಯಾದ ಒಟ್ಟು 12 ಪ್ರಕರಣಗಳಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 7 ಹಾಗೂ ಮಂಡ್ಯ ಜಿಲ್ಲೆಯಲ್ಲಿ 5 ಪ್ರಕರಣಗಳು ವರದಿಯಾಗಿದ್ದು 11 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 56 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಲಿಗೆ ಮತ್ತು ದರೋಡೆಯನ್ನು ತಡೆಯಲು ದಿನದ 24 ಗಂಟೆಗಳಲ್ಲಿ ಮೂರು ಪಾಳಿಯಲ್ಲಿ ಹೈವೇ ಪೆಟ್ರೋಲಿಂಗ್ ನಿಯೋಜನೆ ಸೇರಿದಂತೆ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.
19.27 ಲಕ್ಷ ಸಂಚಾರ ನಿಯಮ ಉಲ್ಲಂಘನೆ
ಮೈಸೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಒಟ್ಟು 19.27 ಲಕ್ಷ ಸಂಚಾರ ನಿಯಮಗಳ ಉಲ್ಲಂಘನೆ ಆಗಿದೆ. 2024ರಲ್ಲಿ 13,83,861 ಹಾಗೂ 2025ರಲ್ಲಿ 5,43,175 ಪ್ರಕರಣಗಳು ದಾಖಲಾಗಿವೆ ಎಂದು ಸಚಿವ ಜಿ.ಪರಮೇಶ್ವರ್ ತಿಳಿಸಿದರು.
ನಿಯಮ ಉಲ್ಲಂಘನೆ ಸಂಬಂಧ 2024ರಲ್ಲಿ 13,83,861 ಪ್ರಕರಣಗಳು ವರದಿಯಾಗಿದ್ದು ರೂ.93,75,42,500 ದಂಡ ವಿಧಿಸಲಾಗಿದೆ. ದಂಡದ ಮೊತ್ತ ರೂ. 8,38,80,500 ಸಂಗ್ರಹಿಸಲಾಗಿದೆ. ದಂಡದ ಮೊತ್ತ 85,36,62,000 ರೂ. ಬಾಕಿ ಇದೆ.
ನಿಯಮ ಉಲ್ಲಂಘನೆ ಸಂಬಂಧ 2025ಲ್ಲಿ 5,43,175 ಪ್ರಕರಣಗಳು ವರದಿಯಾಗಿದ್ದು ರೂ. 40,10,76,500 ದಂಡ ವಿಧಿಸಲಾಗಿದೆ. ದಂಡದ ಮೊತ್ತ ರೂ. 4,30,73,000 ಸಂಗ್ರಹಿಸಲಾಗಿದೆ. ದಂಡದ ಮೊತ್ತ 35,8003,500 ರೂ. ಬಾಕಿ ಇದೆ ಎಂದು ಉತ್ತರಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…