ಮಂಡ್ಯ

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ ಸಂಬಂಧಿಸಿದಂತೆ ಒಟ್ಟು 34 ಪ್ರಕರಣಗಳು ವರದಿ ಆಗಿದ್ದು, 28 ಪ್ರಕರಣಗಳನ್ನು ಭೇದಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದ್ದಾರೆ.

ಶಾಸಕ ಮಧು ಜಿ.ಮಾದೇಗೌಡ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಈ ಹೆದ್ದಾರಿ ಸಾರ್ವಜನಿಕ ಬಳಕೆಗೆ ಮುಕ್ತಗೊಂಡ ಬಳಿಕ 2022 ರಿಂದ 2025ರ ಅಂತ್ಯಕ್ಕೆ ಈ ಪ್ರಕರಣಗಳು ವರದಿಯಾಗಿವೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಯಾಣಿಕರ ಸುಲಿಗೆಗೆ ಸಂಬಂಧಿಸಿದಂತೆ ಒಟ್ಟು 22 ಪ್ರಕರಣಗಳು ವರದಿಯಾಗಿದ್ದು, 17 ಪ್ರಕರಣಗಳನ್ನು ಭೇದಿಸಲಾಗಿದೆ. ಒಟ್ಟು 34 ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 12, ಮಂಡ್ಯ ಜಿಲ್ಲೆಯಲ್ಲಿ 9 ಹಾಗೂ ಮೈಸೂರು ನಗರದಲ್ಲಿ 1 ಪ್ರಕರಣ ವರದಿಯಾಗಿದೆ ಎಂದರು.

ಪ್ರಯಾಣಿಕರ ದರೋಡೆಗೆ ಸಂಬಂಧಿಸಿದಂತೆ, ವರದಿಯಾದ ಒಟ್ಟು 12 ಪ್ರಕರಣಗಳಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 7 ಹಾಗೂ ಮಂಡ್ಯ ಜಿಲ್ಲೆಯಲ್ಲಿ 5 ಪ್ರಕರಣಗಳು ವರದಿಯಾಗಿದ್ದು 11 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 56 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಲಿಗೆ ಮತ್ತು ದರೋಡೆಯನ್ನು ತಡೆಯಲು ದಿನದ 24 ಗಂಟೆಗಳಲ್ಲಿ ಮೂರು ಪಾಳಿಯಲ್ಲಿ ಹೈವೇ ಪೆಟ್ರೋಲಿಂಗ್ ನಿಯೋಜನೆ ಸೇರಿದಂತೆ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

19.27 ಲಕ್ಷ ಸಂಚಾರ ನಿಯಮ ಉಲ್ಲಂಘನೆ
ಮೈಸೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಒಟ್ಟು 19.27 ಲಕ್ಷ ಸಂಚಾರ ನಿಯಮಗಳ ಉಲ್ಲಂಘನೆ ಆಗಿದೆ. 2024ರಲ್ಲಿ 13,83,861 ಹಾಗೂ 2025ರಲ್ಲಿ 5,43,175 ಪ್ರಕರಣಗಳು ದಾಖಲಾಗಿವೆ ಎಂದು ಸಚಿವ ಜಿ.ಪರಮೇಶ್ವರ್ ತಿಳಿಸಿದರು.

ನಿಯಮ ಉಲ್ಲಂಘನೆ ಸಂಬಂಧ 2024ರಲ್ಲಿ 13,83,861 ಪ್ರಕರಣಗಳು ವರದಿಯಾಗಿದ್ದು ರೂ.93,75,42,500 ದಂಡ ವಿಧಿಸಲಾಗಿದೆ. ದಂಡದ ಮೊತ್ತ ರೂ. 8,38,80,500 ಸಂಗ್ರಹಿಸಲಾಗಿದೆ. ದಂಡದ ಮೊತ್ತ 85,36,62,000 ರೂ. ಬಾಕಿ ಇದೆ.

ನಿಯಮ ಉಲ್ಲಂಘನೆ ಸಂಬಂಧ 2025ಲ್ಲಿ 5,43,175 ಪ್ರಕರಣಗಳು ವರದಿಯಾಗಿದ್ದು ರೂ. 40,10,76,500 ದಂಡ ವಿಧಿಸಲಾಗಿದೆ. ದಂಡದ ಮೊತ್ತ ರೂ. 4,30,73,000 ಸಂಗ್ರಹಿಸಲಾಗಿದೆ. ದಂಡದ ಮೊತ್ತ 35,8003,500 ರೂ. ಬಾಕಿ ಇದೆ ಎಂದು ಉತ್ತರಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

11 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

11 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

11 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

11 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

11 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

12 hours ago