ಮಂಡ್ಯ

ಮಂಡ್ಯ | ಬಾಲ್ಯ ವಿವಾಹ ತಡೆಗಟ್ಟುವಲ್ಲಿ ವಿಫಲ ; ಅಧಿಕಾರಿಗಳಿಗೆ ನೋಟಿಸ್‌ ಜಾರಿ

ಮಂಡ್ಯ : ಜಿಲ್ಲೆಯಲ್ಲಿ 2024-25 ನೇ ಸಾಲಿನಲ್ಲಿ 57 ಬಾಲ್ಯ ವಿವಾಹ ನಡೆದಿರುವ ಬಗ್ಗೆ ಎಫ್.ಐ.ಆರ್ ದಾಖಲಿಸಲಾಗಿದೆ. ಬಾಲ್ಯ ವಿವಾಹ ನಡೆಯುವ ಮೊದಲೇ ಅಧಿಕಾರಿಗಳು ಪತ್ತೆ ಹಚ್ಚಿ ತಡೆಗಟ್ಟಬೇಕಿತ್ತು. ಬಾಲ್ಯ ವಿವಾಹವಿಫಲರಾದ ಅಧಿಕಾರಿಗಳಿಗೆ ನೊಟೀಸ್ ಜಾರಿ ಮಾಡುವಂತೆ ಜಿಲ್ಲಾಧಿಕಾರಿ ಡಾ: ಕುಮಾರ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಮದುವೆಯ ಬಗ್ಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಆಯಾ ಗ್ರಾಮದ ಪಿ.ಡಿ.ಓ, ಶಾಲೆಯ ಮುಖ್ಯೋಪಾಧ್ಯಾಯರ ಗಮನಕ್ಕೆ ಬರುತ್ತಿಲ್ಲ ಎಂದರೆ ನಂಬಲು ಸಾಧ್ಯವಾಗುತ್ತಿಲ್ಲ. ಪ್ರೌಢಶಾಲೆಯ ಹೆಣ್ಣು ಮಗು 3 ದಿನ ಕ್ಕಿಂತ ಹೆಚ್ಚು ಶಾಲೆಗೆ ಬರುತ್ತಿಲ್ಲ ಎಂದರೆ ಪರಿಶೀಲನೆ ನಡೆಸಬೇಕು ಎಂದರು.

ಮಂಡ್ಯ ಜಿಲ್ಲೆಯು ತಲಾದಯದಲ್ಲಿ ಆರನೇ ಸ್ಥಾನದಲ್ಲಿದೆ. ತಲಾದಯ ಪ್ರತಿ ವರ್ಷಕ್ಕೆ ಅಂದಾಜು ರೂ 2,32,000/- ಇದೆ. ಆದರೂ ಸಹ ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳು ನಡೆಯುತ್ತಿದೆ ಎಂದರೆ ಯೋಜನೆ ಮಾಡುವ ಸಂಗತಿಯಾಗಿದೆ. ಬಾಲ್ಯ ವಿವಾಹ ನಡೆದಿರುವ 5 ವರ್ಷಗಳ ಪ್ರಕರಣಗಳ ಬಗ್ಗೆ ಸಾಮಾಜಿಕ ಅಧ್ಯಯನ ‌ನಡೆಸಿ‌ ಇದರಿಂದ ಸಮಸ್ಯೆಯ ಮೂಲವನ್ನು ತಿಳಿಯಬಹುದು ಎಂದರು.

2024-25 ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ನಡೆದಿರುವ 57 ಬಾಲ್ಯ ವಿವಾಹ ಪ್ರಕರಣಗಳಲ್ಲಿ ಬಹಳಷ್ಟು ನಡೆದಿರುವುದು ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯರದು. ಬಾಲ್ಯ ವಿವಾಹ ನಡೆದರೆ ವಿದ್ಯಾರ್ಥಿನಿಯರ ಶಿಕ್ಷಣ ಹಕ್ಕು ಕಸೆದುಕೊಂಡಂತೆ ಎಂಬುದು ತಿಳಿದಿರಲಿ ಎಂದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಮ್ಮ ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಪ್ರೌಢಶಾಲಾ ಹೆಣ್ಣು ಮಕ್ಕಳ ಹಾಜರಾತಿಯಲ್ಲಿ ಕೊರತೆ ಉಂಟಾದರೆ ತಕ್ಷಣ ಪರಿಶೀಲನೆ ನಡೆಸಿ. ತಮ್ಮ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರಿಗೆ ಚುರುಕಾಗಿ ಕಾರ್ಯನಿರ್ವಹಿಸಲು ತಿಳಿಸಿ ಇದರಿಂದ ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಡೆಯದಂತೆ ತಡೆಗಟ್ಟಬಹುದು. ಗ್ರಾಮಗಳಲ್ಲಿ ನಡೆಯುವ ಮಕ್ಕಳ ಗ್ರಾಮ ಸಭೆಗಳಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಮೂರ್ತಿ, ಉಪವಿಭಾಗಾಧಿಕಾರಿ ಶಿವಮೂರ್ತಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರ ಸ್ವಾಮಿ, ಮಕ್ಕಳ ರಕ್ಷಣಾಧಿಕಾರಿ ರಶ್ಮಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

23 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

23 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

23 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

23 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

23 hours ago