ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ವರ್ಷದಿಂದ ವರ್ಷಕ್ಕೆ ಅಂತರ್ಜಲ ಪ್ರಮಾಣ ಹೆಚ್ಚುತ್ತಿದ್ದು, ಮುಂದೆ ಹೆಚ್ಚಿನ ಅನಾಹುತ ಆಗುವ ಆತಂಕ ಎದುರಾಗಿದೆ.
ಮಂಡ್ಯ ಜಿಲ್ಲೆಯಲ್ಲಿ ಅಂತರ್ಜಲ ಬಳಕೆ ಪ್ರಮಾಣ ಹೆಚ್ಚುತ್ತಿರುವ ಪರಿಣಾಮ ಅಂತರ್ಜಲ ಪಾತಾಳ ಸೇರುತ್ತಿದೆ. ಈ ಹಿನ್ನೆಲೆಯಲ್ಲಿ ಆತಂಕ ಮನೆಮಾಡಿದ್ದು, ಮುಂದಿನ ದಿನಗಳಲ್ಲಿ ಭಾರೀ ಅನಾಹುತವಾಗುವ ಎಚ್ಚರಿಕೆ ನೀಡಲಾಗಿದೆ.
ಜಿಲ್ಲೆಯಲ್ಲಿರುವ ಅಂತರ್ಜಲ ಇಲಾಖೆಯ 61 ಅಧ್ಯಯನ ಕೊಳವೆ ಬಾವಿಗಳಲ್ಲಿ ಪ್ರತಿ ಮಾಹೆ ದಾಖಲಿಸುತ್ತಿದೆ. ಅದರಂತೆ 2024ರಲ್ಲಿ ಪ್ರತಿ ತಿಂಗಳು ನಡೆಸಿದ ಅಧ್ಯಯನದಂತೆ ಜುಲೈನಲ್ಲಿ 9.97 ಮೀಟರ್ನಷ್ಟು ಅಂತರ್ಜಲ ಏರಿಳಿತವಾಗಿದೆ. ಅಂದರೆ ಸರಾಸರಿ 11.76 ಮೀಟರ್ನಷ್ಟು ವ್ಯತ್ಯಾಸವಾಗಿರುವುದು ಕಂಡು ಬಂದಿದೆ.
ಬೇಸಿಗೆ ಅವಧಿಯಲ್ಲಿ ಅಂತರ್ಜಲದ ಬಳಕೆ ಹೆಚ್ಚಾಗಿರುವುದರಿಂದ ಫೆಬ್ರವರಿಯಿಂದ ಮೇ ತಿಂಗಳವರೆಗೆ ಅಂತರ್ಜಲ ಹೆಚ್ಚು ಕುಸಿಯುತ್ತಾ ಹೋಗುತ್ತದೆ. ಮೇ ತಿಂಗಳಿನಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದ್ದು, ಜೂನ್, ಜುಲೈನಲ್ಲಿ ಮುಂಗಾರು ಮಳೆಯಾಗಿದ್ದರಿಂದ ಅಂತರ್ಜಲ ಬಳಕೆ ಪ್ರಮಾಣ ಶೇಕಡಾ.4 ಮೀಟರ್ನಷ್ಟು ಕಡಿಮೆಯಾಗಿರುವುದನ್ನು ಗುರುತಿಸಲಾಗಿದೆ.
ಇನ್ನು ಜಿಲ್ಲೆಯ ನಾಗಮಂಗಲ, ಮಳವಳ್ಳಿ ಹಾಗೂ ಮಂಡ್ಯ ತಾಲ್ಲೂಕುಗಳಲ್ಲಿ ಅಂತರ್ಜಲ ಪ್ರಮಾಣದಲ್ಲಿ ಭಾರೀ ಕುಸಿತ ಕಂಡಿದ್ದು, ಅನ್ನದಾತರಲ್ಲೂ ಸಹ ಆತಂಕ ಮನೆಮಾಡಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಕೆರೆಗಳಲ್ಲಿ ಹೂಳೆತ್ತಿ ಮಳೆಗಾಲದಲ್ಲಿ ಅತೀ ಹೆಚ್ಚು ನೀರು ಸಂಗ್ರಹವಾಗುವ ಹಾಗೇ ಮಾಡುವಂತೆ ಸೂಚನೆ ನೀಡಲಾಗಿದೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…