Categories: ಮಂಡ್ಯ

ಟಿಪ್ಪರ್ ಹರಿದು ರೈತ ಸಾವು; ಪರಿಹಾರಕ್ಕೆ ಆಗ್ರಹಿಸಿ ಮೃತ ಸಂಬಂಧಿಕರ ಪ್ರತಿಭಟನೆ

ಭಾರತೀನಗರ: ರಸ್ತೆ ಕಾಮಗಾರಿಗೆ ಜಲ್ಲಿ ಸಾಗಿಸುತ್ತಿದ್ದ ಟಿಪ್ಪರ್ ಹರಿದು ರೈತ ಸಂಘದ ಕಾರ್ಯಕರ್ತ ಮೃತಪಟ್ಟಿರುವ ಘಟನೆ ಕರಡಕೆರೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಗ್ರಾಮದ ರೈತ ನಿಂಗೇಗೌಡ (೫೫) ಮೃತ ದುರ್ದೈವಿ. ಮಂಗಳವಾರ ಬೆಳಿಗ್ಗೆ ೧೦ರ ಸಮಯದಲ್ಲಿ ನಿಂಗೇಗೌಡ ಜಾನುವಾರುಗಳಿಗೆ ತನ್ನ ಟಿವಿಎಸ್ ಮೊಪೆಡ್‌ನಲ್ಲಿ ಮೇವನ್ನು ತೆಗೆದುಕೊಂಡು ಬಂದು ಮನೆಯ ಬಳಿ ಮೊಪೆಡ್ ನಿಲ್ಲಿಸಿ, ಮೇವು ಇಳಿಸುವ ಸಂದರ್ಭ ರಸ್ತೆ ಕಾಮಗಾರಿಗೆ ಜಲ್ಲಿ ಸಾಗಿಸುತ್ತಿದ್ದ ಟಿಪ್ಪರ್ ಜಲ್ಲಿಯನ್ನು ಕೆಳಗೆ ಸುರಿಯಲು ಹಿಂಬದಿಗೆ ಚಲಿಸುವಾಗ ಚಾಲಕನ ನಿರ್ಲಕ್ಷ್ಯದಿಂದಾಗಿ ರೈತ ನಿಂಗೇಗೌಡನ ಮೇಲೆ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯ ಅಧಿಕಾರಿ ಆನಂದ್ ಅವರು ರಜೆಯಲ್ಲಿದ್ದ ಕಾರಣ ಮದ್ದೂರು ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳಾದ ವೆಂಕಟೇಗೌಡ ಹಾಗೂ ಶಶಿಕುಮಾರ್ ಅವರು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು.

ಪರಿಹಾರಕ್ಕಾಗಿ ಪ್ರತಿಭಟನೆ:
ಈ ಅವಘಡಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣವಾಗಿದ್ದು, ರಸ್ತೆ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಹಾಗೂ ಟಿಪ್ಪರ್ ಮಾಲೀಕ ಸ್ಥಳಕ್ಕೆ ಆಗಮಿಸಿ, ರೈತ ನಿಂಗೇಗೌಡ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಅಲ್ಲಿಯವರೆಗೂ ಮೃತ ನಿಂಗೇಗೌಡರ ದೇಹವನ್ನು ಸ್ಥಳದಿಂದ ತೆರವುಗೊಳಿಸುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದರು. ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು ಗುತ್ತಿಗೆದಾರರು ಹಾಗೂ ಟಿಪ್ಪರ್ ಮಾಲೀಕರಿಗೆ ದೂರವಾಣಿ ಮೂಲಕ ಸ್ಥಳಕ್ಕೆ ಆಗಮಿಸುವಂತೆ ತಿಳಿಸಿದರು.

ನಂತರ ಸ್ಥಳಕ್ಕೆ ಆಗಮಿಸಿದ ಗುತ್ತಿಗೆ ಪಡೆದಿದ್ದ ಎಸ್‌ಸಿಸಿ ಕಂಪನಿ ಅಧಿಕಾರಿ ಮೃತನ ಕುಟುಂಬಕ್ಕೆ ತಾತ್ಕಾಲಿಕವಾಗಿ ೨.೫ ಲಕ್ಷ ಪರಿಹಾರ ನೀಡುವುದಾಗಿ ಮತ್ತು ಉಳಿಕೆ ಹಣವನ್ನು ವಿಮೆ ಮೂಲಕ ಕೊಡಿಸಿಕೊಡುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆದರು. ನಂತರ ಮೃತ ದೇಹವನ್ನು ಸ್ಥಳದಿಂದ ತೆರವುಗೊಳಿಸಿ ಭಾರತೀನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶವ ಪರೀಕ್ಷೆ ನಡೆಸಿ, ವಾರಸುದಾರರಿಗೆ ಒಪ್ಪಿಸಲಾಯಿತು.
ಈ ಸಂಬಂಧ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಬಿ.ಟಿ. ಮೋಹನ್ ಕುಮಾರ್

ಮಂಡ್ಯ ಜಿಲ್ಲೆ, ಮಂಡ್ಯ ತಾಲ್ಲೂಕು ಹೊಸಬೂದನೂರು ಗ್ರಾಮದ ನಾನು ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂ.ಎ. (ಎಂಸಿಜೆ) ಮಾಡಿ, 1999ರಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. 1999ರಲ್ಲಿ `ಆಂದೋಲನ' ಪತ್ರಿಕೆಯಲ್ಲಿ ಮೊದಲು ಪೇಜ್ ಡಿಸೈನರ್ ಆಗಿ ಕೆಲಸಕ್ಕೆ ಸೇರಿದ ಅನುಭವ ಪಡೆದು, 2001ರಲ್ಲಿ `ಆಂದೋಲನ' ಪತ್ರಿಕೆಯಲ್ಲೇ ಜಿಲ್ಲಾ ವರದಿಗಾರನಾದೆ. 2001ರಿಂದ 2008ರವರೆಗೆ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದ ನಾನು, 2009ರಿಂದ `ಪ್ರಜಾನುಡಿ' ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿ, 2011ರಲ್ಲಿ `ವಿಜಯ ವಾಣಿ' ಪತ್ರಿಕೆಯ ಮೈಸೂರು ವಿಭಾಗದ ಹಿರಿಯ ಉಪ ಸಂಪಾದಕನಾಗಿ ಕೆಲಸ ನಿರ್ವಹಿಸಿದೆ. ಸುಮಾರು ಮೂರೂವರೆ ವರ್ಷ ಕೆಲಸ ನಿರ್ವಹಿಸಿ, 2015ರಲ್ಲಿ `ರಾಜ್ಯ ಧರ್ಮ' ಪತ್ರಿಕೆಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದೆ. 2019ರಲ್ಲಿ ಮತ್ತೆ `ಆಂದೋಲನ' ಪತ್ರಿಕೆಯ ಮಂಡ್ಯ ಜಿಲ್ಲಾ ಹಿರಿಯ ವರದಿಗಾರನಾಗಿ ನೇಮಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸವಾಗಿದೆ.

Recent Posts

ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಂಡ ಮೈಸೂರಿಗರು

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್‌ ಬ್ಯಾಂಡ್‌ನ ಸದ್ದಿನೊಂದಿಗೆ…

8 hours ago

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಕಾಫಿ ಪುಡಿ ಅಂಗಡಿ ಬೆಂಕಿಗಾಹುತಿ

ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…

8 hours ago

ಮೈಸೂರು, ಚಾ.ನಗರ, ಮಂಡ್ಯ, ಕೊಡಗು ಎಸ್‌ಪಿಗಳ ವರ್ಗ

ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…

8 hours ago

ಕೊಡಗು ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ನೇಮಕ

ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್‌ ವರಿಷ್ಠಾಧಿಕಾರಿ ರಾಮರಾಜನ್‌ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…

8 hours ago

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

12 hours ago

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

12 hours ago