Categories: ಮಂಡ್ಯ

ಟಿಪ್ಪರ್ ಹರಿದು ರೈತ ಸಾವು; ಪರಿಹಾರಕ್ಕೆ ಆಗ್ರಹಿಸಿ ಮೃತ ಸಂಬಂಧಿಕರ ಪ್ರತಿಭಟನೆ

ಭಾರತೀನಗರ: ರಸ್ತೆ ಕಾಮಗಾರಿಗೆ ಜಲ್ಲಿ ಸಾಗಿಸುತ್ತಿದ್ದ ಟಿಪ್ಪರ್ ಹರಿದು ರೈತ ಸಂಘದ ಕಾರ್ಯಕರ್ತ ಮೃತಪಟ್ಟಿರುವ ಘಟನೆ ಕರಡಕೆರೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಗ್ರಾಮದ ರೈತ ನಿಂಗೇಗೌಡ (೫೫) ಮೃತ ದುರ್ದೈವಿ. ಮಂಗಳವಾರ ಬೆಳಿಗ್ಗೆ ೧೦ರ ಸಮಯದಲ್ಲಿ ನಿಂಗೇಗೌಡ ಜಾನುವಾರುಗಳಿಗೆ ತನ್ನ ಟಿವಿಎಸ್ ಮೊಪೆಡ್‌ನಲ್ಲಿ ಮೇವನ್ನು ತೆಗೆದುಕೊಂಡು ಬಂದು ಮನೆಯ ಬಳಿ ಮೊಪೆಡ್ ನಿಲ್ಲಿಸಿ, ಮೇವು ಇಳಿಸುವ ಸಂದರ್ಭ ರಸ್ತೆ ಕಾಮಗಾರಿಗೆ ಜಲ್ಲಿ ಸಾಗಿಸುತ್ತಿದ್ದ ಟಿಪ್ಪರ್ ಜಲ್ಲಿಯನ್ನು ಕೆಳಗೆ ಸುರಿಯಲು ಹಿಂಬದಿಗೆ ಚಲಿಸುವಾಗ ಚಾಲಕನ ನಿರ್ಲಕ್ಷ್ಯದಿಂದಾಗಿ ರೈತ ನಿಂಗೇಗೌಡನ ಮೇಲೆ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯ ಅಧಿಕಾರಿ ಆನಂದ್ ಅವರು ರಜೆಯಲ್ಲಿದ್ದ ಕಾರಣ ಮದ್ದೂರು ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳಾದ ವೆಂಕಟೇಗೌಡ ಹಾಗೂ ಶಶಿಕುಮಾರ್ ಅವರು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು.

ಪರಿಹಾರಕ್ಕಾಗಿ ಪ್ರತಿಭಟನೆ:
ಈ ಅವಘಡಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣವಾಗಿದ್ದು, ರಸ್ತೆ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಹಾಗೂ ಟಿಪ್ಪರ್ ಮಾಲೀಕ ಸ್ಥಳಕ್ಕೆ ಆಗಮಿಸಿ, ರೈತ ನಿಂಗೇಗೌಡ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಅಲ್ಲಿಯವರೆಗೂ ಮೃತ ನಿಂಗೇಗೌಡರ ದೇಹವನ್ನು ಸ್ಥಳದಿಂದ ತೆರವುಗೊಳಿಸುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದರು. ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು ಗುತ್ತಿಗೆದಾರರು ಹಾಗೂ ಟಿಪ್ಪರ್ ಮಾಲೀಕರಿಗೆ ದೂರವಾಣಿ ಮೂಲಕ ಸ್ಥಳಕ್ಕೆ ಆಗಮಿಸುವಂತೆ ತಿಳಿಸಿದರು.

ನಂತರ ಸ್ಥಳಕ್ಕೆ ಆಗಮಿಸಿದ ಗುತ್ತಿಗೆ ಪಡೆದಿದ್ದ ಎಸ್‌ಸಿಸಿ ಕಂಪನಿ ಅಧಿಕಾರಿ ಮೃತನ ಕುಟುಂಬಕ್ಕೆ ತಾತ್ಕಾಲಿಕವಾಗಿ ೨.೫ ಲಕ್ಷ ಪರಿಹಾರ ನೀಡುವುದಾಗಿ ಮತ್ತು ಉಳಿಕೆ ಹಣವನ್ನು ವಿಮೆ ಮೂಲಕ ಕೊಡಿಸಿಕೊಡುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆದರು. ನಂತರ ಮೃತ ದೇಹವನ್ನು ಸ್ಥಳದಿಂದ ತೆರವುಗೊಳಿಸಿ ಭಾರತೀನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶವ ಪರೀಕ್ಷೆ ನಡೆಸಿ, ವಾರಸುದಾರರಿಗೆ ಒಪ್ಪಿಸಲಾಯಿತು.
ಈ ಸಂಬಂಧ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಬಿ.ಟಿ. ಮೋಹನ್ ಕುಮಾರ್

ಮಂಡ್ಯ ಜಿಲ್ಲೆ, ಮಂಡ್ಯ ತಾಲ್ಲೂಕು ಹೊಸಬೂದನೂರು ಗ್ರಾಮದ ನಾನು ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂ.ಎ. (ಎಂಸಿಜೆ) ಮಾಡಿ, 1999ರಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. 1999ರಲ್ಲಿ `ಆಂದೋಲನ' ಪತ್ರಿಕೆಯಲ್ಲಿ ಮೊದಲು ಪೇಜ್ ಡಿಸೈನರ್ ಆಗಿ ಕೆಲಸಕ್ಕೆ ಸೇರಿದ ಅನುಭವ ಪಡೆದು, 2001ರಲ್ಲಿ `ಆಂದೋಲನ' ಪತ್ರಿಕೆಯಲ್ಲೇ ಜಿಲ್ಲಾ ವರದಿಗಾರನಾದೆ. 2001ರಿಂದ 2008ರವರೆಗೆ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದ ನಾನು, 2009ರಿಂದ `ಪ್ರಜಾನುಡಿ' ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿ, 2011ರಲ್ಲಿ `ವಿಜಯ ವಾಣಿ' ಪತ್ರಿಕೆಯ ಮೈಸೂರು ವಿಭಾಗದ ಹಿರಿಯ ಉಪ ಸಂಪಾದಕನಾಗಿ ಕೆಲಸ ನಿರ್ವಹಿಸಿದೆ. ಸುಮಾರು ಮೂರೂವರೆ ವರ್ಷ ಕೆಲಸ ನಿರ್ವಹಿಸಿ, 2015ರಲ್ಲಿ `ರಾಜ್ಯ ಧರ್ಮ' ಪತ್ರಿಕೆಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದೆ. 2019ರಲ್ಲಿ ಮತ್ತೆ `ಆಂದೋಲನ' ಪತ್ರಿಕೆಯ ಮಂಡ್ಯ ಜಿಲ್ಲಾ ಹಿರಿಯ ವರದಿಗಾರನಾಗಿ ನೇಮಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

2 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

2 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

2 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

2 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

2 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

2 hours ago