ಕೆ.ಆರ್.ಪೇಟೆ : ಸೆಸ್ಕ್ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತನೊಬ್ಬ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನ ಅರೆಬೂವನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಅರೆಬೂವನಹಳ್ಳಿ ಗ್ರಾಮದ ರೈತ ಬಿ.ಎನ್.ಮಂಜುನಾಥ್ ಮೃತ ರೈತರಾಗಿದ್ದಾರೆ. ಮಂಜುನಾಥ್ ಅವರು ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿ, ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು ಗಮನಿಸದೆ ಹುಲ್ಲು ಕುಯ್ಯುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈಗಾಗಲೇ ತಾಲ್ಲೂಕಿನಾದ್ಯಂತ ವಿದ್ಯುತ್ನಿಂದ ಹಲವಾರು ಜೀವಗಳು ಬಲಿಯಾಗುತ್ತಿದ್ದರೂ ತಾಲ್ಲೂಕಿನ ಸೆಸ್ಕ್ ಇಲಾಖೆಯವರು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ರೈತ ಸಂಘದ ಹಿರಿಯ ಮುಖಂಡ ಮುದುಗೆರೆ ರಾಜೇಗೌಡ ಹಾಗೂ ಅರೆಬೂವನಹಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ.
ಮನೆಯ ಒಡೆಯನನ್ನು ಕಳೆದುಕೊಂಡು ಮೃತ ಮಂಜುನಾಥ್ ಅವರ ಪತ್ನಿ ಸೇರಿದಂತೆ ಮಕ್ಕಳು ಆಘಾತಕ್ಕೀಡಾಗಿದ್ದು, ಸೆಸ್ಕ್ ಇಲಾಖೆಯ ಮೇಲ್ಮಟ್ಟದ ಅಧಿಕಾರಿಗಳು ಮೃತರ ಕುಟುಂಬದವರಿಗೆ ಸೂಕ್ತ ಪರಿಹಾರ ನೀಡಬೇಕು. ಅಲ್ಲದೆ, ತಾಲ್ಲೂಕಿನಾದ್ಯಂತ ವಿದ್ಯುತ್ ತಂತಿಗಳನ್ನು ಸರಿಪಡಿಸಿ ಮುಂದೆ ನಡೆಯಬಹುದಾದ ಆಘಾತಗಳನ್ನು ತಪ್ಪಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಚೌಡೇನಹಳ್ಳಿ ನಾಗರಾಜು, ವಕೀಲ ಕುರುಬಳ್ಳಿ ನಾಗೇಶ್, ಮಂಚನಹಳ್ಳಿ ನಾಗೇಗೌಡ ಇತರರಿದ್ದರು.
ಈ ಸಂಬಂಧ ಮೃತ ಮಂಜುನಾಥ್ ಅವರ ಪುತ್ರ ಬಿ.ಎಂ. ಧರ್ಮೇಶ್ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅನುಮತಿಗಾಗಿ ಕಾಯುತ್ತಿರುವ ಮತ್ತೆರಡು ಹಡಗುಗಳು ಹೊಸದಿಲ್ಲಿ : ಸುಮಾರು 46,000 ಮೆಟ್ರಿಕ್ ಟನ್ಗಳಿಗೂ ಹೆಚ್ಚು ಇಂಧನ ಹೊತ್ತ ದೊಡ್ಡ ದ್ರವೀಕೃತ…
ಬೆಂಗಳೂರು : ರಾಜ್ಯದಲ್ಲಿ ಗ್ಯಾಸ್ ಸಿಗದೆ ಆಟೋ ಚಾಲಕರು ರಾತ್ರಿಯಿಡೀ ಕ್ಯೂ ನಿಲ್ಲುತ್ತಿದ್ದರೆ, ಜನಪ್ರತಿನಿಧಿಗಳಾದ ಶಾಸಕರು ಮಾತ್ರ ಐಪಿಎಲ್ ಟಿಕೆಟ್ಗಳ…
ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…
ಬೆಂಗಳೂರು: ಗ್ಯಾಸ್ ಸಿಗದೇ ಆಟೋ ಚಾಲಕರು ಪರದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಆಕ್ರೋಶ…
ದಾವಣಗೆರೆ: ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸುವ ಜೊತೆಗೆ ಅಭಿವೃದ್ಧಿಗೂ ಪ್ರತಿ ಕ್ಷೇತ್ರಕ್ಕೆ ನೂರು ಕೋಟಿ ರೂ.ಗಳಿಗೆ ಹೆಚ್ಚಿನ ಅನುದಾನವನ್ನು ಸಿದ್ದರಾಮಯ್ಯ ಅವರು…
ಚೆನ್ನೈ: ತಾವು ಈ ಬಾರಿ ತಮಿಳುನಾಡಿನ ವಿಧಾನಸಭಾ ಚುನಾವಣೆಯ ಸ್ಪರ್ಧೆಯಲ್ಲಿ ಇಲ್ಲ. ಇದರ ಬಗ್ಗೆ ಅನಗತ್ಯವಾಗಿ ಗೊಂದಲಗಳು ಬೇಡ ಎಂದು…