ಮಂಡ್ಯ

ಟ್ರಾನ್ಸ್‌ಫಾರ್ಮರ್‌ನಿಂದ ವಿದ್ಯುತ್ ಪ್ರವಹಿಸಿ ರೈತ ಸಾವು

ಕೆ.ಆರ್.ಪೇಟೆ : ಸೆಸ್ಕ್ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತನೊಬ್ಬ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನ ಅರೆಬೂವನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಅರೆಬೂವನಹಳ್ಳಿ ಗ್ರಾಮದ ರೈತ ಬಿ.ಎನ್.ಮಂಜುನಾಥ್ ಮೃತ ರೈತರಾಗಿದ್ದಾರೆ. ಮಂಜುನಾಥ್ ಅವರು ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿ, ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು ಗಮನಿಸದೆ ಹುಲ್ಲು ಕುಯ್ಯುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈಗಾಗಲೇ ತಾಲ್ಲೂಕಿನಾದ್ಯಂತ ವಿದ್ಯುತ್‌ನಿಂದ ಹಲವಾರು ಜೀವಗಳು ಬಲಿಯಾಗುತ್ತಿದ್ದರೂ ತಾಲ್ಲೂಕಿನ ಸೆಸ್ಕ್ ಇಲಾಖೆಯವರು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ರೈತ ಸಂಘದ ಹಿರಿಯ ಮುಖಂಡ ಮುದುಗೆರೆ ರಾಜೇಗೌಡ ಹಾಗೂ ಅರೆಬೂವನಹಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ.

ಮನೆಯ ಒಡೆಯನನ್ನು ಕಳೆದುಕೊಂಡು ಮೃತ ಮಂಜುನಾಥ್ ಅವರ ಪತ್ನಿ ಸೇರಿದಂತೆ ಮಕ್ಕಳು ಆಘಾತಕ್ಕೀಡಾಗಿದ್ದು, ಸೆಸ್ಕ್ ಇಲಾಖೆಯ ಮೇಲ್ಮಟ್ಟದ ಅಧಿಕಾರಿಗಳು ಮೃತರ ಕುಟುಂಬದವರಿಗೆ ಸೂಕ್ತ ಪರಿಹಾರ ನೀಡಬೇಕು. ಅಲ್ಲದೆ, ತಾಲ್ಲೂಕಿನಾದ್ಯಂತ ವಿದ್ಯುತ್ ತಂತಿಗಳನ್ನು ಸರಿಪಡಿಸಿ ಮುಂದೆ ನಡೆಯಬಹುದಾದ ಆಘಾತಗಳನ್ನು ತಪ್ಪಿಸಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಚೌಡೇನಹಳ್ಳಿ ನಾಗರಾಜು, ವಕೀಲ ಕುರುಬಳ್ಳಿ ನಾಗೇಶ್, ಮಂಚನಹಳ್ಳಿ ನಾಗೇಗೌಡ ಇತರರಿದ್ದರು.

ಈ ಸಂಬಂಧ ಮೃತ ಮಂಜುನಾಥ್ ಅವರ ಪುತ್ರ ಬಿ.ಎಂ. ಧರ್ಮೇಶ್ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

andolanait

Recent Posts

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

3 hours ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

3 hours ago

ಭಾರತೀನಗರ: ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ  ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…

4 hours ago

ದಕ್ಷ ಮತ್ತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ತಲ್ಲಣ

ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…

4 hours ago

ಇದು ಉದ್ಯಾನವಲ್ಲ: ಅನೈತಿಕ ಚಟುವಟಿಕೆಗಳ ತಾಣ

ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…

4 hours ago