ಮಂಡ್ಯ: ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ಕೃಷಿಕರ ಜಾಗೃತಿ ಸಮಾವೇಶದಲ್ಲಿ ಕೃಷಿ ಬಗ್ಗೆ ಅನೇಕ ಮಾಹಿತಿಯನ್ನು ನೀಡಲಾಗುತ್ತಿದ್ದು, ರೈತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಹೇಳಿದರು.
ಅವರು ಇಂದು(ಜು.14) ಮಂಡ್ಯ ಪಿ.ಇ.ಎಸ್ ವಿದ್ಯಾ ಸಂಸ್ಥೆಯ ಶ್ರೀ ವಿವೇಕಾನಂದ ಸಭಾಂಗಣದಲ್ಲಿ ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನ ಕೃಷಿ ಬೆಳೆಗಾರರ ಸಂಘ, ಸಂಪೂರ್ಣ ಸಾವಯವ ಕೃಷಿಕರ ಸಂಘ ಹಾಗೂ ಆರಿಗ್ರಾಫ್ ಇವರ ಸಹಭಾಗಿತ್ವದಲ್ಲಿ ನಡೆದ ಕೃಷಿಕರ ಜಾಗೃತಿ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸಿರಿಧಾನ್ಯಗಳನ್ನು ಆಹಾರದಲ್ಲಿ ಉಪಯೋಗಿಸುವುದರಿಂದ ಆರೋಗ್ಯಕರ ಜೀವನವನ್ನು ನಡೆಸಬಹುದು. ಸಾವಯವ ಕೃಷಿಯಾದ ಸಿರಿಧಾನ್ಯವನ್ನು ಬೆಳೆಯುವಂತಹ ಪದ್ಧತಿಯನ್ನು ಕಾರ್ಯಕ್ರಮದಲ್ಲಿ ತಿಳಿಸಲಾಗುತ್ತದೆ. ಬೆಳೆದಂತಹ ಸಿರಿಧಾನ್ಯವನ್ನು ಮಾರಾಟ ಮಾಡಲು ಮಾರ್ಕೆಟ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಸಿರಿಧಾನ್ಯವನ್ನು ಹೆಚ್ಚಿನ ಖರ್ಚಿಲ್ಲದೆ ಬೆಳೆಯಬಹುದಾಗಿದೆ. ಕೃಷಿಯಲ್ಲಿ ಬೆಳೆದ ಇನ್ನಿತರೆ ಬೆಳೆಗಳಿಗೆ ಬೆಲೆಯಲ್ಲಿ ಏರುಪೇರು ಸಾಮಾನ್ಯವಾಗಿದ್ದು, ಸಿರಿಧಾನ್ಯ ಬೆಳೆಗಾರರಿಗೆ ಅದರ ಸಮಸ್ಯೆ ಇರುವುದಿಲ್ಲ. ಸಿರಿಧಾನ್ಯವನ್ನು ಉತ್ತಮ ಬೆಲೆಗೆ ಮಾರಾಟ ಮಾಡಬಹುದು ಆದ್ದರಿಂದ ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಿ ಎಂದು ತಿಳಿಸಿದರು.
ಪರಿಸರದಲ್ಲಿನ ಹಸಿರು ಮನೆ ಅನಿಲಗಳ ಹೊರಸೂಸುವಿಕೆ ಹಾಗೂ ಜಾಗತಿಕ ತಾಪಮಾನದ ಏರಿಕೆಯಿಂದಾಗಿ ಹವಾಮಾನದ ಬದಲಾವಣೆಗೆ ಕಾರಣವಾಗುತ್ತಿದೆ. ಇದರ ಸಲುವಾಗಿ ನೈಸರ್ಗಿಕ ಅಸಮತೋಲನ ಉಂಟಾಗುತ್ತಿದ್ದು ಕೃಷಿ ಉತ್ಪಾದನೆ ಮೇಲೆ ಪರಿಣಾಮ ಬೀರುತ್ತಿದೆ, ರೈತರಿಗೆ ಇದು ಕಳವಳಕಾರಿ ವಿಷಯವಾಗಿದೆ ಎಂದರು.
ಕಾರ್ಬನ್ ಕ್ರೆಡಿಟ್ ಯೋಜನೆಯು ಪರಿಸರದಲ್ಲಿನ ಮಾಲಿನ್ಯವನ್ನು ಸರಿದೂಗಿಸಲು ಇಂಗಾಲದ ಹೊರಸೂಸುವಿಕೆಯನ್ನು ತಡೆದು, ಪರಿಸರದಲ್ಲಿ ಇಂಗಾಲದ ಡೈಯಾಕ್ಸೈಡ್ ಅನ್ನು ಹಿಡಿದಿಡುವ ಪ್ರಮುಖ ತಂತ್ರವಾಗಿದೆ. ಈ ಮೂಲಕ ನೈಸರ್ಗಿಕ ಸಮತೋಲನವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘವು ರೈತರ ಬವಣೆಗಳನ್ನು ತಗ್ಗಿಸಲು ಅನೇಕ ರೀತಿಯಲ್ಲಿ ಪ್ರಯತ್ನ ಪಡುತ್ತಿದೆ. ಜಾಗತಿಕವಾಗಿ ಪ್ರಚಲಿತವಾಗಿರುವ ಕಾರ್ಬನ್ ಕ್ರೆಡಿಟ್ ಯೋಜನೆಯನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಜಾರಿಗೆ ತಂದರೆ ನಾಡಿನ ಸಮಸ್ತ ರೈತರಿಗೂ ಪ್ರಯೋಜನ ದೊರೆತಂತಾಗುತ್ತದೆ. ಕಾರ್ಬನ್ ಕ್ರೆಡಿಟ್ ಯೋಜನೆಯನ್ನು ಮಂಡ್ಯ ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ಇಂದು ಉದ್ಘಾಟನೆ ಮಾಡುತ್ತಿರುವುದು ಅತ್ಯಂತ ಸಂತೋಷದ ವಿಚಾರವಾಗಿದೆ. ಇಡೀ ರಾಜ್ಯದ್ಯಂತ ಈ ಯೋಜನೆಯನ್ನು ಜಾರಿಗೆ ತರಲು ನಮ್ಮ ಸರ್ಕಾರ ಬದ್ಧವಾಗಿದೆ. ನೊಂದು ಬೆಂದ ರೈತರಿಗೆ ಈ ಯೋಜನೆಯು ಸಹಾಯವಾಗುತ್ತದೆ. ಇಂತಹ ಕಾರ್ಯಕ್ರಮವನ್ನು ಏರ್ಪಡಿಸಿದಂತಹ ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನ ಕೃಷಿ ಬೆಳೆಗಾರರ ಸಂಘದ ಅಧ್ಯಕ್ಷರು ಹಾಗೂ ನಿವೃತ್ತ ಐಎಎಸ್ ಅಧಿಕಾರಿಯಾದ ಅಮರ್ ನಾರಾಯಣ ಅವರಿಗೆ ಅಭಿನಂದನೆಗಳನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಂಡ್ಯ ಶಾಸಕ ಪಿ ರವಿಕುಮಾರ್, ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಅಶೋಕ್, ವನಕೃಷಿ ಸಂಘದ ಜಿಲ್ಲಾಧ್ಯಕ್ಷ ನಾಗರಾಜು, ರೈತ ಮುಖಂಡರಾದ ಸುನಂದಾ ಸೇರಿದಂತೆ ಇನ್ನಿತರ ರೈತರುಗಳು ಉಪಸ್ಥಿತರಿದ್ದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…