ಮಂಡ್ಯ

ರೈತನ ಮಗಳ ಸಾಧನೆ | ಮೈಸೂರು ವಿ.ವಿ ವ್ಯಾಪ್ತಿಯ ಬಿ.ಇಡಿ ಕಾಲೇಜಿಗೆ ಮೊದಲ ರ‍್ಯಾಂಕ್‌, ಚಿನ್ನದ ಪದಕ

ಕಿಕ್ಕೇರಿ : ಗ್ರಾಮೀಣ ಬದುಕಿನ ಸವಾಲುಗಳ ನಡುವೆ ಬೆಳೆದ ರೈತನ ಮಗಳು ತನ್ನ ಅಕ್ಷರಾಸಕ್ತಿಯಿಂದ ಇಡೀ ತಾಲ್ಲೂಕಿನ ಹೆಮ್ಮೆಯ ಮಗಳಾಗಿ ಹೊರಹೊಮ್ಮಿದ್ದಾಳೆ.

ಮೈಸೂರಿನ ಪ್ರತಿಷ್ಠಿತ ಬಿ.ಜಿ.ಎಸ್. ಶಿಕ್ಷಣ ಮಹಾವಿದ್ಯಾಲಯದ ಬಿ.ಇಡಿ. ಅಂತಿಮ ಪರೀಕ್ಷೆಯಲ್ಲಿ ಶೇ.97.9 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದು ಕಿಕ್ಕೇರಿ ಹೋಬಳಿಯ ಮಾದಾಪುರ ಗ್ರಾಮದ ಎಂ.ವೈ. ಹರ್ಷಿತಾ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ.

ಮಾದಾಪುರ ಗ್ರಾಮದ ರೈತ ದಂಪತಿ ಪುಷ್ಪಲತಾ ಮತ್ತು ಯತಿರಾಜು ಅವರ ಪುತ್ರಿಯಾದ ಹರ್ಷಿತಾ, ಹೊಲ-ಗದ್ದೆ ಕೆಲಸಗಳ ನಡುವೆ, ಸೀಮಿತ ಸಂಪನ್ಮೂಲಗಳ ನಡುವೆಯೂ ಶಿಕ್ಷಣವನ್ನೇ ಜೀವನದ ಬೆಳಕಾಗಿಸಿಕೊಂಡು ಈ ಶ್ರೇಷ್ಠ ಸಾಧನೆಯನ್ನು ಗಳಿಸಿದ್ದಾರೆ. ಇವರ ಯಶಸ್ಸು ಗ್ರಾಮೀಣ ಪ್ರದೇಶದ ಅನೇಕ ವಿದ್ಯಾರ್ಥಿನಿಯರಿಗೆ ಹೊಸ ದಾರಿದೀಪವಾಗಿದೆ.

ಹರ್ಷಿತಾ ಅವರ ಶೈಕ್ಷಣಿಕ ಪಯಣ ಶ್ರಮ ಮತ್ತು ಶಿಸ್ತಿನ ಸಂಕೇತವಾಗಿದೆ. ಪ್ರಾಥಮಿಕ ಶಿಕ್ಷಣವನ್ನು ಚನ್ನರಾಯಪಟ್ಟಣ ತಾಲ್ಲೂಕಿನ ಸೆಂಟಮೆರೀಸ್ ಶಾಲೆಯಲ್ಲಿ, ಎಸ್.ಎಸ್.ಎಲ್.ಸಿ ಶಿಕ್ಷಣವನ್ನು ರಾಧಾಕೃಷ್ಣ ಶಾಲೆ, ಚನ್ನರಾಯಪಟ್ಟಣದಲ್ಲಿ ಪೂರ್ಣಗೊಳಿಸಿದ್ದಾರೆ. ಪಿಯುಸಿ ವ್ಯಾಸಂಗವನ್ನು ಮೈಸೂರಿನ ಬಿ.ಜಿ.ಎಸ್. ಕಾಲೇಜಿನಲ್ಲಿ ಮಾಡಿದ್ದು, ನಂತರ ಯುವರಾಜ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಬಿಎಸ್ಸಿ ಪದವಿ ಪಡೆದು, ಮುಂದಿನ ಪೀಳಿಗೆಯನ್ನು ರೂಪಿಸುವ ಉದ್ದೇಶದಿಂದ ಬಿ.ಜಿ.ಎಸ್. ಮೈಸೂರಿನಲ್ಲಿ ಬಿ.ಇಡಿ. ವ್ಯಾಸಂಗಕ್ಕೆ ಕೈ ಹಾಕಿದರು.

ಬಿ.ಇಡಿ. ವ್ಯಾಸಂಗದ ಅವಧಿಯಲ್ಲಿ ತಮ್ಮ ಪ್ರತಿಭೆ, ಅಧ್ಯಯನದ ಶಿಸ್ತು ಹಾಗೂ ಬೋಧನಾ ಕೌಶಲ್ಯದಿಂದ ಎರಡು ಚಿನ್ನದ ಪದಕಗಳು ಹಾಗೂ ಎರಡು ನಗದು ಪುರಸ್ಕಾರಗಳನ್ನು ಪಡೆದು ಕಾಲೇಜಿನ ಇತಿಹಾಸದಲ್ಲೇ ವಿಶೇಷ ಸ್ಥಾನ ಗಳಿಸಿದ್ದಾರೆ. ಗ್ರಾಮೀಣ ಹಿನ್ನೆಲೆ, ರೈತ ಕುಟುಂಬದ ಮಗಳು ಎಂಬ ಅನೇಕ ಸವಾಲುಗಳ ನಡುವೆಯೂ ಹರ್ಷಿತಾ ಅವರ ಅಚಲ ಸಂಕಲ್ಪ ಮತ್ತು ಅಕ್ಷರ ಪ್ರೀತಿಯೇ ಈ ಯಶಸ್ಸಿನ ಬೆನ್ನೆಲುಬಾಗಿದೆ.

‘ಮಣ್ಣು ಹಿಡಿದ ಕೈಗಳು ಕೂಡ ಅಕ್ಷರದ ಮೂಲಕ ಭವಿಷ್ಯ ರೂಪಿಸಬಹುದು’ ಎಂಬುದಕ್ಕೆ ಹರ್ಷಿತಾ ಅವರ ಸಾಧನೆ ಜೀವಂತ ಸಾಕ್ಷಿಯಾಗಿದೆ. ಶಿಕ್ಷಣದ ಶಕ್ತಿಯಿಂದ ಬದುಕು ಮಾತ್ರವಲ್ಲ, ಸಮಾಜವನ್ನೂ ರೂಪಿಸಬಹುದು ಎಂಬ ಸಂದೇಶವನ್ನು ಅವರು ಸಾರಿದ್ದಾರೆ.

ಈ ಅಪೂರ್ವ ಸಾಧನೆಗಾಗಿ ಕೆ.ಆರ್.ಪೇಟೆ ತಾಲ್ಲೂಕಿನ ಜನಪ್ರತಿನಿಧಿಗಳು, ಶಿಕ್ಷಣ ತಜ್ಞರು, ಶಿಕ್ಷಕ ವೃಂದ ಹಾಗೂ ಮಾದಾಪುರ ಗ್ರಾಮದ ಸಾರ್ವಜನಿಕರು ಹರ್ಷಿತಾ ಮತ್ತು ಅವರ ಕುಟುಂಬವನ್ನು ಹೃತ್ಪೂರ್ವಕವಾಗಿ ಅಭಿನಂದಿಸಿ, ಅವರ ಮುಂದಿನ ಶಿಕ್ಷಣ ಮತ್ತು ವೃತ್ತಿಜೀವನಕ್ಕೆ ಶುಭ ಹಾರೈಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

8 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

10 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

11 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

11 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

14 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

15 hours ago