ಮಂಡ್ಯ

ರೈತನ ಮಗಳ ಸಾಧನೆ | ಮೈಸೂರು ವಿ.ವಿ ವ್ಯಾಪ್ತಿಯ ಬಿ.ಇಡಿ ಕಾಲೇಜಿಗೆ ಮೊದಲ ರ‍್ಯಾಂಕ್‌, ಚಿನ್ನದ ಪದಕ

ಕಿಕ್ಕೇರಿ : ಗ್ರಾಮೀಣ ಬದುಕಿನ ಸವಾಲುಗಳ ನಡುವೆ ಬೆಳೆದ ರೈತನ ಮಗಳು ತನ್ನ ಅಕ್ಷರಾಸಕ್ತಿಯಿಂದ ಇಡೀ ತಾಲ್ಲೂಕಿನ ಹೆಮ್ಮೆಯ ಮಗಳಾಗಿ ಹೊರಹೊಮ್ಮಿದ್ದಾಳೆ.

ಮೈಸೂರಿನ ಪ್ರತಿಷ್ಠಿತ ಬಿ.ಜಿ.ಎಸ್. ಶಿಕ್ಷಣ ಮಹಾವಿದ್ಯಾಲಯದ ಬಿ.ಇಡಿ. ಅಂತಿಮ ಪರೀಕ್ಷೆಯಲ್ಲಿ ಶೇ.97.9 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದು ಕಿಕ್ಕೇರಿ ಹೋಬಳಿಯ ಮಾದಾಪುರ ಗ್ರಾಮದ ಎಂ.ವೈ. ಹರ್ಷಿತಾ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ.

ಮಾದಾಪುರ ಗ್ರಾಮದ ರೈತ ದಂಪತಿ ಪುಷ್ಪಲತಾ ಮತ್ತು ಯತಿರಾಜು ಅವರ ಪುತ್ರಿಯಾದ ಹರ್ಷಿತಾ, ಹೊಲ-ಗದ್ದೆ ಕೆಲಸಗಳ ನಡುವೆ, ಸೀಮಿತ ಸಂಪನ್ಮೂಲಗಳ ನಡುವೆಯೂ ಶಿಕ್ಷಣವನ್ನೇ ಜೀವನದ ಬೆಳಕಾಗಿಸಿಕೊಂಡು ಈ ಶ್ರೇಷ್ಠ ಸಾಧನೆಯನ್ನು ಗಳಿಸಿದ್ದಾರೆ. ಇವರ ಯಶಸ್ಸು ಗ್ರಾಮೀಣ ಪ್ರದೇಶದ ಅನೇಕ ವಿದ್ಯಾರ್ಥಿನಿಯರಿಗೆ ಹೊಸ ದಾರಿದೀಪವಾಗಿದೆ.

ಹರ್ಷಿತಾ ಅವರ ಶೈಕ್ಷಣಿಕ ಪಯಣ ಶ್ರಮ ಮತ್ತು ಶಿಸ್ತಿನ ಸಂಕೇತವಾಗಿದೆ. ಪ್ರಾಥಮಿಕ ಶಿಕ್ಷಣವನ್ನು ಚನ್ನರಾಯಪಟ್ಟಣ ತಾಲ್ಲೂಕಿನ ಸೆಂಟಮೆರೀಸ್ ಶಾಲೆಯಲ್ಲಿ, ಎಸ್.ಎಸ್.ಎಲ್.ಸಿ ಶಿಕ್ಷಣವನ್ನು ರಾಧಾಕೃಷ್ಣ ಶಾಲೆ, ಚನ್ನರಾಯಪಟ್ಟಣದಲ್ಲಿ ಪೂರ್ಣಗೊಳಿಸಿದ್ದಾರೆ. ಪಿಯುಸಿ ವ್ಯಾಸಂಗವನ್ನು ಮೈಸೂರಿನ ಬಿ.ಜಿ.ಎಸ್. ಕಾಲೇಜಿನಲ್ಲಿ ಮಾಡಿದ್ದು, ನಂತರ ಯುವರಾಜ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಬಿಎಸ್ಸಿ ಪದವಿ ಪಡೆದು, ಮುಂದಿನ ಪೀಳಿಗೆಯನ್ನು ರೂಪಿಸುವ ಉದ್ದೇಶದಿಂದ ಬಿ.ಜಿ.ಎಸ್. ಮೈಸೂರಿನಲ್ಲಿ ಬಿ.ಇಡಿ. ವ್ಯಾಸಂಗಕ್ಕೆ ಕೈ ಹಾಕಿದರು.

ಬಿ.ಇಡಿ. ವ್ಯಾಸಂಗದ ಅವಧಿಯಲ್ಲಿ ತಮ್ಮ ಪ್ರತಿಭೆ, ಅಧ್ಯಯನದ ಶಿಸ್ತು ಹಾಗೂ ಬೋಧನಾ ಕೌಶಲ್ಯದಿಂದ ಎರಡು ಚಿನ್ನದ ಪದಕಗಳು ಹಾಗೂ ಎರಡು ನಗದು ಪುರಸ್ಕಾರಗಳನ್ನು ಪಡೆದು ಕಾಲೇಜಿನ ಇತಿಹಾಸದಲ್ಲೇ ವಿಶೇಷ ಸ್ಥಾನ ಗಳಿಸಿದ್ದಾರೆ. ಗ್ರಾಮೀಣ ಹಿನ್ನೆಲೆ, ರೈತ ಕುಟುಂಬದ ಮಗಳು ಎಂಬ ಅನೇಕ ಸವಾಲುಗಳ ನಡುವೆಯೂ ಹರ್ಷಿತಾ ಅವರ ಅಚಲ ಸಂಕಲ್ಪ ಮತ್ತು ಅಕ್ಷರ ಪ್ರೀತಿಯೇ ಈ ಯಶಸ್ಸಿನ ಬೆನ್ನೆಲುಬಾಗಿದೆ.

‘ಮಣ್ಣು ಹಿಡಿದ ಕೈಗಳು ಕೂಡ ಅಕ್ಷರದ ಮೂಲಕ ಭವಿಷ್ಯ ರೂಪಿಸಬಹುದು’ ಎಂಬುದಕ್ಕೆ ಹರ್ಷಿತಾ ಅವರ ಸಾಧನೆ ಜೀವಂತ ಸಾಕ್ಷಿಯಾಗಿದೆ. ಶಿಕ್ಷಣದ ಶಕ್ತಿಯಿಂದ ಬದುಕು ಮಾತ್ರವಲ್ಲ, ಸಮಾಜವನ್ನೂ ರೂಪಿಸಬಹುದು ಎಂಬ ಸಂದೇಶವನ್ನು ಅವರು ಸಾರಿದ್ದಾರೆ.

ಈ ಅಪೂರ್ವ ಸಾಧನೆಗಾಗಿ ಕೆ.ಆರ್.ಪೇಟೆ ತಾಲ್ಲೂಕಿನ ಜನಪ್ರತಿನಿಧಿಗಳು, ಶಿಕ್ಷಣ ತಜ್ಞರು, ಶಿಕ್ಷಕ ವೃಂದ ಹಾಗೂ ಮಾದಾಪುರ ಗ್ರಾಮದ ಸಾರ್ವಜನಿಕರು ಹರ್ಷಿತಾ ಮತ್ತು ಅವರ ಕುಟುಂಬವನ್ನು ಹೃತ್ಪೂರ್ವಕವಾಗಿ ಅಭಿನಂದಿಸಿ, ಅವರ ಮುಂದಿನ ಶಿಕ್ಷಣ ಮತ್ತು ವೃತ್ತಿಜೀವನಕ್ಕೆ ಶುಭ ಹಾರೈಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯಕ್ಕೆ ಹೆಚ್ಚುವರಿ 1122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ: ಸಚಿವ ಡಾ.ಶರಣ ಪ್ರಕಾಶ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್‌ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ…

12 seconds ago

ಹನೂರು| ಸಚಿವರನ್ನೇ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಕಾರ್ಯಕರ್ತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ…

25 mins ago

ಕಾಡಾನೆ ದಾಳಿಗೆ ನಾಶವಾದ ತೆಂಗು, ಮುಸುಕಿನ ಜೋಳ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಾನೆ ದಾಳಿಗೆ ತೆಂಗು ಹಾಗೂ ಮುಸುಕಿನ ಜೋಳದ ಬೆಳೆ ನಾಶವಾಗಿರುವ ಘಟನೆ…

33 mins ago

ರಾಜ್ಯಕ್ಕೂ ಬಂತು ಎಸ್‌ಐಆರ್‌ ; ಜೂನ್‌ನಿಂದ ಆರಂಭ

ಬೆಂಗಳೂರು : ಇಡೀ ದೇಶದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಎಸ್‌ಐಆರ್ ಪ್ರಕ್ರಿಯೆ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬಿಹಾರ ಮತ್ತು…

2 hours ago

ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ಪುರಭವನ?

ಮೈಸೂರು : ಸಾಂಸ್ಕೃತಿಕ ನಗರದ ಹೃದಯ ಭಾಗದಲ್ಲಿ ರುವ ಐತಿಹಾಸಿಕ ರಂಗಾಚಾರ್ಲು ಪುರಭವನ ಇದೀಗ ನಿರ್ಲಕ್ಷ್ಯದ ಪರಿಣಾಮ ಶಿಥಿಲಾವಸ್ಥೆಯತ್ತ ಸಾಗುತ್ತಿದೆ.…

3 hours ago

ಹಿಜಾಬ್‌ ವಿವಾದ : ಹೊಸ ಆದೇಶ ಸಕಾರಾತ್ಮಕ ಬೆಳವಣಿಗೆಗೆ ಸಹಾಯ

ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…

4 hours ago