ಮಂಡ್ಯ

ಮಂಡ್ಯ: ಕೃಷಿ ಯಂತ್ರೋಪಕರಣದಿಂದ ಆಧುನಿಕ ಕೃಷಿಯತ್ತ ರೈತರು: ಡಾ. ಕೆ.ಸಿ.ನಾರಾಯಣಸ್ವಾಮಿ

ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ ಮತ್ತು ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆ ಮೇಳ – 2026” ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ಇಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯದ ವಿ.ಸಿ. ಫಾರಂ, ಆವರಣದಲ್ಲಿ ಯಂತ್ರೋಪಕರಣ ಮತ್ತು ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆ ಮೇಳವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ಇದರ ಗೌರವಾನ್ವಿತ ಕುಲಪತಿಗಳಾದ ಡಾ. ಕೆ. ಸಿ. ನಾರಾಯಣಸ್ವಾಮಿ ಅವರು, ಅಭಿವೃದ್ಧಿ ಹೊಂದಿದ ಪಶ್ಚಿಮ ರಾಷ್ಟ್ರಗಳಲ್ಲಿ ಕೃಷಿಯಲ್ಲಿ ಸುಮಾರು 80 ರಿಂದ 90 ಶೇಕಡಾ ಮಟ್ಟದಲ್ಲಿ ಯಂತ್ರೋಪಕರಣಗಳ ಬಳಕೆ ನಡೆಯುತ್ತಿದೆ ಎಂದು ತಿಳಿಸಿದರು. ನಮ್ಮ ದೇಶದ ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ಸುಮಾರು 40 ರಿಂದ 50 ಶೇಕಡಾ ಮಟ್ಟದಲ್ಲಿ ಕೃಷಿ ಯಾಂತ್ರೀಕರಣ ಬಳಕೆಯಲ್ಲಿದ್ದು, ಕರ್ನಾಟಕ ರಾಜ್ಯದ ರೈತರು ಸಹ ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಯಂತ್ರೋಪಕರಣಗಳನ್ನು ಬಳಸುವ ಮೂಲಕ ಉತ್ಪಾದಕತೆ ಮತ್ತು ಆರ್ಥಿಕ ಮಟ್ಟವನ್ನು ಹೆಚ್ಚಿಸಿಕೊಳ್ಳಬೇಕೆಂದು ಹೇಳಿದರು.

ಇಂದಿನ ದಿನಗಳಲ್ಲಿ ಕೃಷಿ ಕಾರ್ಮಿಕರ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೃಷಿ ಯಾಂತ್ರೀಕರಣ ಅತ್ಯಂತ ಅಗತ್ಯವಾಗಿದೆ. ರೈತರು ಆಧುನಿಕ ತಂತ್ರಜ್ಞಾನ ಹಾಗೂ ಯಂತ್ರೋಪಕರಣಗಳನ್ನು ಅಳವಡಿಸಿಕೊಂಡು ಕೃಷಿಯನ್ನು ಹೆಚ್ಚು ಲಾಭದಾಯಕವಾಗಿಸಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು. ಇದರೊಂದಿಗೆ ಕೃಷಿ ಯಂತ್ರೋಪಕರಣಗಳ ದುರಸ್ತಿ ವಿಧಾನಗಳು ಹಾಗೂ ಸುರಕ್ಷಿತ ಬಳಕೆ ಕುರಿತು ತರಬೇತಿ ನೀಡುವ ಸರ್ಟಿಫಿಕೇಟ್ ಕೋರ್ಸ್‌ಗಳನ್ನು ಮುಂದಿನ ವರ್ಷಗಳಲ್ಲಿ ಆರಂಭಿಸಲು ಯೋಜಿಸಲಾಗಿದೆ ಎಂದು ಅವರು ಹೇಳಿದರು.

ಈ ಮೇಳದಲ್ಲಿ ಸುಮಾರು 50ಕ್ಕೂ ಹೆಚ್ಚು ಕೃಷಿ ಯಂತ್ರೋಪಕರಣಗಳಿಗೆ ಸಂಬಂಧಿಸಿದ ಮಳಿಗೆಗಳನ್ನು ಏರ್ಪಡಿಸಲಾಗಿತ್ತು. ವಿವಿಧ ಕಂಪನಿಗಳು ಹಾಗೂ ಸಂಸ್ಥೆಗಳು ತಮ್ಮ ಆಧುನಿಕ ಕೃಷಿ ಯಂತ್ರೋಪಕರಣಗಳನ್ನು ಪ್ರದರ್ಶಿಸಿದ್ದು, ರೈತರಿಗೆ ಅವುಗಳ ಕಾರ್ಯವಿಧಾನ, ಬಳಕೆ ವಿಧಾನ ಹಾಗೂ ಕೃಷಿಯಲ್ಲಿ ದೊರೆಯುವ ಪ್ರಯೋಜನಗಳ ಕುರಿತು ಸಮಗ್ರ ಮಾಹಿತಿ ನೀಡಲಾಯಿತು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

5 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

5 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

16 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

16 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

16 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

16 hours ago