ಮಂಡ್ಯ

ರೈತರ ಹಿತ ಕಾಯುವುದು ಶತಸಿದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ

ಮಂಡ್ಯ : ನಾವು ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ. ಎಂಥದ್ದೇ ಪರಿಸ್ಥಿತಿ ಬಂದರೂ ರೈತರ ಹಿತ ಕಾಯಲು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದರು.

ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮತ್ತು ಹಲವು ಸಂಘಟನೆಗಳ ಒಕ್ಕೂಟ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪ್ರತಿಭಟನಾಕಾರರ ಮನವಿ ಪತ್ರ ಸ್ವೀಕರಿಸಿ ಅವರ ಬೇಡಿಕೆಗಳಿಗೆ ಸ್ಪಂದಿಸಿ ಮಾತನಾಡಿದರು.‌

ನಾವು ಈ ವರ್ಷ ಭೀಕರ ಬರಗಾಲ ಎದುರಿಸುತ್ತಿದ್ದೇವೆ. ಮಳೆ ಪೂರ್ತಿ ಕೈಕೊಟ್ಟಿದೆ. ಇದರಿಂದ ಜಲಾಶಯಗಳು ತುಂಬದೆ ನಾವು ಸಂಕಷ್ಟದ ವರ್ಷದಲ್ಲಿ ಇದ್ದೇವೆ. ನಾವು ತಮಿಳುನಾಡಿಗೆ 177.25 ಟಿಎಂಸಿ ನೀರು ಕೊಡಬೇಕು ಎನ್ನುವ ಆದೇಶ ಹೊರಬಿದ್ದಿದೆ. ಪ್ರತಿ ತಿಂಗಳು ಇಷ್ಟಿಷ್ಟು ನೀರು ಬಿಡಬೇಕು ಎನ್ನುವ ಆದೇಶ ಇದೆ. ನಾವು ಕಾವೇರಿ ಪ್ರಾಧಿಕಾರ ಮತ್ತು ಸಮಿತಿ ಎದುರು ನೀರಿಲ್ಲ, ಆದ್ದರಿಂದ ನೀರು ಬಿಡಲು ಸಾಧ್ಯವಿಲ್ಲ ಎಂದು ನಮ್ಮ ವಾದವನ್ನು ಬಲವಾಗಿ ಮಂಡಿಸಿದ್ದೇವೆ. ಆದರೂ ಮೊದಲು 5000 ಕ್ಯೂಸೆಕ್ಸ್ ನೀರು ಬಿಡಲು ಹೇಳಿದರು, ಬಳಿಕ 3000 ಕ್ಯೂಸೆಕ್ಸ್ ನೀರು ಬಿಡಲು ಆದೇಶ ಬಂತು. ಅದಕ್ಕೂ ನಾವು ಒಪ್ಪಲಿಲ್ಲ. ಈಗ ನೆನ್ನೆ ದಿನ 2600 ಕ್ಯೂಸೆಕ್ಸ್ ನೀರು ಬಿಡಲು ಆದೇಶವಾಗಿದೆ. ಆದರೆ ನಾವು ಕುಡಿಯುವ ನೀರಿಗೆ ಮತ್ತು ಬೆಳೆ ಉಳಿಸಿಕೊಳ್ಳಲು ಮೊದಲ ಆದ್ಯತೆ ನೀಡುತ್ತೇವೆ. ಮುಂಗಾರು ಬೆಳೆಯನ್ನು ಉಳಿಸಿಕೊಳ್ಳಲು ಶತಾಯಗತಾಯ ಪ್ರಯತ್ನಿಸುತ್ತೇವೆ. ನಾನೂ ರೈತ ಹೋರಾಟದಲ್ಲಿ ಬಂದಿರುವ ರೈತರ ಮಗ. ನಾವೂ ಅಚ್ಚುಕಟ್ಟೆ ಪ್ರದೇಶದಲ್ಲೇ ಇದ್ದೇವೆ. ಆದ್ದರಿಂದ ರೈತರ ಸಂಕಷ್ಟ ನನಗೆ ಚೆನ್ನಾಗಿ ಗೊತ್ತಿದೆ. ಆದ್ದರಿಂದ ನಿಮ್ಮ ಹಿತ ಕಾಯಲು ಹಿಂದೆ ಬೀಳುವುದಿಲ್ಲ. ಅಧಿಕಾರಕ್ಕಾಗಿ ರೈತರನ್ನು ಬಲಿ ಕೊಡುವುದಿಲ್ಲ. ನಾವು ಕೇವಲ ಅಧಿಕಾರಕ್ಕಾಗಿ ಅಂಟಿಕೊಂಡು ಕೂರುವವರಲ್ಲ ಎಂದು ಸ್ಪಷ್ಟವಾಗಿ ನುಡಿದರು.

ರೈತರ ಹಿತ ಕಾಯಲು ಗಂಭೀರವಾದ, ಪ್ರಾಯೋಗಿಕವಾದ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

lokesh

Recent Posts

ಚಾರಣಕ್ಕೆ ಹೊಸ ಮಾರ್ಗಸೂಚಿ; ಮೆಚ್ಚುಗೆ

ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…

3 hours ago

ಖಾಸಗಿ ಶಾಲೆಗಳ ಆರ್ಭಟಕ್ಕೆ ಬಾಡಿದ ಸರ್ಕಾರಿ ಶಾಲೆ

ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…

3 hours ago

‘ಅಮೆರಿಕದಲ್ಲಿ ನೆಲೆ ಕಂಡುಕೊಂಡಿರುವ ಮಕ್ಕಳ ಭವಿಷ್ಯದ ಬಗ್ಗೆ ಭಯವಾಗುತ್ತದೆ…’

ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…

3 hours ago

ಕಾವೇರಿ ನದಿಯಲ್ಲಿ ಬರೀ ಬಂಡೆಗಲ್ಲುಗಳ ದರ್ಶನ

ಭೇರ್ಯ ಮಹೇಶ್ ಬಿರುಬಿಸಿಲಿಗೆ ನದಿಯಲ್ಲಿ ಕಡಿಮೆಯಾದ ನೀರಿನ ಹರಿವು; ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ  ಕೆ.ಆರ್.ನಗರ: ಬಿರುಬಿಸಿಲಿನ ಝಳಕ್ಕೆ ಭತ್ತದ…

3 hours ago

ಮದ್ದೂರಮ್ಮ ಉತ್ಸವ; ಕಳೆಗಟ್ಟಿದ ದನಗಳ ಜಾತ್ರೆ

ಎಂ.ಆರ್.ಚಕ್ರಪಾಣಿ ಜಾತ್ರೆಯಲ್ಲಿ ಹಳ್ಳಿಕಾರ್ ಎತ್ತುಗಳು, ಟಗರುಗಳ ಆಕರ್ಷಣೆ; ಸ್ಥಳವಕಾಶದ ಕೊರತೆಗೆ ರೈತರು ಬೇಸರ ಮದ್ದೂರು: ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಶನಿವಾರ…

3 hours ago