ಮಂಡ್ಯ

ರೈತರ ಹಿತ ಕಾಯುವುದು ಶತಸಿದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ

ಮಂಡ್ಯ : ನಾವು ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ. ಎಂಥದ್ದೇ ಪರಿಸ್ಥಿತಿ ಬಂದರೂ ರೈತರ ಹಿತ ಕಾಯಲು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದರು.

ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮತ್ತು ಹಲವು ಸಂಘಟನೆಗಳ ಒಕ್ಕೂಟ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪ್ರತಿಭಟನಾಕಾರರ ಮನವಿ ಪತ್ರ ಸ್ವೀಕರಿಸಿ ಅವರ ಬೇಡಿಕೆಗಳಿಗೆ ಸ್ಪಂದಿಸಿ ಮಾತನಾಡಿದರು.‌

ನಾವು ಈ ವರ್ಷ ಭೀಕರ ಬರಗಾಲ ಎದುರಿಸುತ್ತಿದ್ದೇವೆ. ಮಳೆ ಪೂರ್ತಿ ಕೈಕೊಟ್ಟಿದೆ. ಇದರಿಂದ ಜಲಾಶಯಗಳು ತುಂಬದೆ ನಾವು ಸಂಕಷ್ಟದ ವರ್ಷದಲ್ಲಿ ಇದ್ದೇವೆ. ನಾವು ತಮಿಳುನಾಡಿಗೆ 177.25 ಟಿಎಂಸಿ ನೀರು ಕೊಡಬೇಕು ಎನ್ನುವ ಆದೇಶ ಹೊರಬಿದ್ದಿದೆ. ಪ್ರತಿ ತಿಂಗಳು ಇಷ್ಟಿಷ್ಟು ನೀರು ಬಿಡಬೇಕು ಎನ್ನುವ ಆದೇಶ ಇದೆ. ನಾವು ಕಾವೇರಿ ಪ್ರಾಧಿಕಾರ ಮತ್ತು ಸಮಿತಿ ಎದುರು ನೀರಿಲ್ಲ, ಆದ್ದರಿಂದ ನೀರು ಬಿಡಲು ಸಾಧ್ಯವಿಲ್ಲ ಎಂದು ನಮ್ಮ ವಾದವನ್ನು ಬಲವಾಗಿ ಮಂಡಿಸಿದ್ದೇವೆ. ಆದರೂ ಮೊದಲು 5000 ಕ್ಯೂಸೆಕ್ಸ್ ನೀರು ಬಿಡಲು ಹೇಳಿದರು, ಬಳಿಕ 3000 ಕ್ಯೂಸೆಕ್ಸ್ ನೀರು ಬಿಡಲು ಆದೇಶ ಬಂತು. ಅದಕ್ಕೂ ನಾವು ಒಪ್ಪಲಿಲ್ಲ. ಈಗ ನೆನ್ನೆ ದಿನ 2600 ಕ್ಯೂಸೆಕ್ಸ್ ನೀರು ಬಿಡಲು ಆದೇಶವಾಗಿದೆ. ಆದರೆ ನಾವು ಕುಡಿಯುವ ನೀರಿಗೆ ಮತ್ತು ಬೆಳೆ ಉಳಿಸಿಕೊಳ್ಳಲು ಮೊದಲ ಆದ್ಯತೆ ನೀಡುತ್ತೇವೆ. ಮುಂಗಾರು ಬೆಳೆಯನ್ನು ಉಳಿಸಿಕೊಳ್ಳಲು ಶತಾಯಗತಾಯ ಪ್ರಯತ್ನಿಸುತ್ತೇವೆ. ನಾನೂ ರೈತ ಹೋರಾಟದಲ್ಲಿ ಬಂದಿರುವ ರೈತರ ಮಗ. ನಾವೂ ಅಚ್ಚುಕಟ್ಟೆ ಪ್ರದೇಶದಲ್ಲೇ ಇದ್ದೇವೆ. ಆದ್ದರಿಂದ ರೈತರ ಸಂಕಷ್ಟ ನನಗೆ ಚೆನ್ನಾಗಿ ಗೊತ್ತಿದೆ. ಆದ್ದರಿಂದ ನಿಮ್ಮ ಹಿತ ಕಾಯಲು ಹಿಂದೆ ಬೀಳುವುದಿಲ್ಲ. ಅಧಿಕಾರಕ್ಕಾಗಿ ರೈತರನ್ನು ಬಲಿ ಕೊಡುವುದಿಲ್ಲ. ನಾವು ಕೇವಲ ಅಧಿಕಾರಕ್ಕಾಗಿ ಅಂಟಿಕೊಂಡು ಕೂರುವವರಲ್ಲ ಎಂದು ಸ್ಪಷ್ಟವಾಗಿ ನುಡಿದರು.

ರೈತರ ಹಿತ ಕಾಯಲು ಗಂಭೀರವಾದ, ಪ್ರಾಯೋಗಿಕವಾದ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

lokesh

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

14 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

14 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

14 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

14 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

14 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

14 hours ago