ಮಂಡ್ಯ

ರೈತರ ಹಿತ ಕಾಯುವುದು ಶತಸಿದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ

ಮಂಡ್ಯ : ನಾವು ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ. ಎಂಥದ್ದೇ ಪರಿಸ್ಥಿತಿ ಬಂದರೂ ರೈತರ ಹಿತ ಕಾಯಲು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದರು.

ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮತ್ತು ಹಲವು ಸಂಘಟನೆಗಳ ಒಕ್ಕೂಟ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪ್ರತಿಭಟನಾಕಾರರ ಮನವಿ ಪತ್ರ ಸ್ವೀಕರಿಸಿ ಅವರ ಬೇಡಿಕೆಗಳಿಗೆ ಸ್ಪಂದಿಸಿ ಮಾತನಾಡಿದರು.‌

ನಾವು ಈ ವರ್ಷ ಭೀಕರ ಬರಗಾಲ ಎದುರಿಸುತ್ತಿದ್ದೇವೆ. ಮಳೆ ಪೂರ್ತಿ ಕೈಕೊಟ್ಟಿದೆ. ಇದರಿಂದ ಜಲಾಶಯಗಳು ತುಂಬದೆ ನಾವು ಸಂಕಷ್ಟದ ವರ್ಷದಲ್ಲಿ ಇದ್ದೇವೆ. ನಾವು ತಮಿಳುನಾಡಿಗೆ 177.25 ಟಿಎಂಸಿ ನೀರು ಕೊಡಬೇಕು ಎನ್ನುವ ಆದೇಶ ಹೊರಬಿದ್ದಿದೆ. ಪ್ರತಿ ತಿಂಗಳು ಇಷ್ಟಿಷ್ಟು ನೀರು ಬಿಡಬೇಕು ಎನ್ನುವ ಆದೇಶ ಇದೆ. ನಾವು ಕಾವೇರಿ ಪ್ರಾಧಿಕಾರ ಮತ್ತು ಸಮಿತಿ ಎದುರು ನೀರಿಲ್ಲ, ಆದ್ದರಿಂದ ನೀರು ಬಿಡಲು ಸಾಧ್ಯವಿಲ್ಲ ಎಂದು ನಮ್ಮ ವಾದವನ್ನು ಬಲವಾಗಿ ಮಂಡಿಸಿದ್ದೇವೆ. ಆದರೂ ಮೊದಲು 5000 ಕ್ಯೂಸೆಕ್ಸ್ ನೀರು ಬಿಡಲು ಹೇಳಿದರು, ಬಳಿಕ 3000 ಕ್ಯೂಸೆಕ್ಸ್ ನೀರು ಬಿಡಲು ಆದೇಶ ಬಂತು. ಅದಕ್ಕೂ ನಾವು ಒಪ್ಪಲಿಲ್ಲ. ಈಗ ನೆನ್ನೆ ದಿನ 2600 ಕ್ಯೂಸೆಕ್ಸ್ ನೀರು ಬಿಡಲು ಆದೇಶವಾಗಿದೆ. ಆದರೆ ನಾವು ಕುಡಿಯುವ ನೀರಿಗೆ ಮತ್ತು ಬೆಳೆ ಉಳಿಸಿಕೊಳ್ಳಲು ಮೊದಲ ಆದ್ಯತೆ ನೀಡುತ್ತೇವೆ. ಮುಂಗಾರು ಬೆಳೆಯನ್ನು ಉಳಿಸಿಕೊಳ್ಳಲು ಶತಾಯಗತಾಯ ಪ್ರಯತ್ನಿಸುತ್ತೇವೆ. ನಾನೂ ರೈತ ಹೋರಾಟದಲ್ಲಿ ಬಂದಿರುವ ರೈತರ ಮಗ. ನಾವೂ ಅಚ್ಚುಕಟ್ಟೆ ಪ್ರದೇಶದಲ್ಲೇ ಇದ್ದೇವೆ. ಆದ್ದರಿಂದ ರೈತರ ಸಂಕಷ್ಟ ನನಗೆ ಚೆನ್ನಾಗಿ ಗೊತ್ತಿದೆ. ಆದ್ದರಿಂದ ನಿಮ್ಮ ಹಿತ ಕಾಯಲು ಹಿಂದೆ ಬೀಳುವುದಿಲ್ಲ. ಅಧಿಕಾರಕ್ಕಾಗಿ ರೈತರನ್ನು ಬಲಿ ಕೊಡುವುದಿಲ್ಲ. ನಾವು ಕೇವಲ ಅಧಿಕಾರಕ್ಕಾಗಿ ಅಂಟಿಕೊಂಡು ಕೂರುವವರಲ್ಲ ಎಂದು ಸ್ಪಷ್ಟವಾಗಿ ನುಡಿದರು.

ರೈತರ ಹಿತ ಕಾಯಲು ಗಂಭೀರವಾದ, ಪ್ರಾಯೋಗಿಕವಾದ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

lokesh

Recent Posts

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

52 mins ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

4 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

4 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

4 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

5 hours ago