ಮಂಡ್ಯ

ಕೆಶಿಫ್ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ಕೆ.ಆರ್.ಪೇಟೆ : ಭೂ ಸ್ವಾಧೀನಕ್ಕೆ ವೈಜ್ಞಾನಿಕ ಪರಿಹಾರ ನೀಡದೆ ಪೊಲೀಸರ ಸರ್ಪಗಾವಲಿನಲ್ಲಿ ಜಲಸೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭಿಸಿರುವ ಕೆಶಿಫ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೈತರು ಕಾಮಗಾರಿಗೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದ್ದಾರೆ

ಅಗ್ರಹಾರಬಾಚಹಳ್ಳಿ, ಬಿ.ಕೋಡಿಹಳ್ಳಿ, ಚಿಕ್ಕೋನಹಳ್ಳಿ ಹಾಗೂ ಕೆ.ಆರ್.ಪೇಟೆಯ ರೈತರು ಎತ್ತಿನಗಾಡಿ ಸಮೇತ ರಸ್ತೆಗಿಳಿದು ಕಾಮಗಾರಿಗೆ ಅಡ್ಡಿಪಡಿಸಿದರು.

ಅಗ್ರಹಾರಬಾಚಹಳ್ಳಿ ಬಳಿ ಹಾದು ಹೋಗಿರುವ ರಸ್ತೆಗೆ ಭೂಮಿ ನೀಡಿದ ರೈತರಿಗೆ ವೈಜ್ಞಾನಿಕ ಪರಿಹಾರ ನೀಡಬೇಕೆಂದು ರೈತರು ಒತ್ತಡ ಹಾಕುತ್ತಾ ಬಂದಿದ್ದರು, ಅಷ್ಟೇ ಅಲ್ಲದೆ ಪರಿಹಾರ ನೀಡದಿದ್ದರೆ ಕಾಮಗಾರಿಗೆ ಅವಕಾಶ ನೀಡುವುದಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಸಿದ್ದರು.

ಶಾಸಕ ಎಚ್ ಟಿ ಮಂಜು ಸಹ ರೈತರಿಗೆ ವೈಜ್ಞಾನಿಕ ಪರಿಹಾರ ನೀಡಿ ಕಾಮಗಾರಿ ಆರಂಭಿಸಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದರು. ಆದರೆ ಇದ್ಯಾವುದನ್ನು ಲೆಕ್ಕಿಸದೆ ಕೆಶಿಫ್ ಮತ್ತು ಕಂದಾಯ ಅಧಿಕಾರಿಗಳ ತಂಡ ಪೋಲೀಸ್ ಸರ್ಪಗಾವಲಿನಲ್ಲಿ‌ ಶನಿವಾರ ಮುಂಜಾನೆ ರಸ್ತೆ ಕಾಮಗಾರಿ ಆರಂಭಿಸಿದ್ದಾರೆ.

ವಿಚಾರ ತಿಳದ ನೂರಾರು ರೈತರು ಎತ್ತಿನಗಾಡಿಗಳೊಂದಿಗೆ ಕಾಮಗಾರಿಗೆ ಅಡ್ಡಿ ಪಡಿಸಿ ಪ್ರತಿಭಟನೆ ಆರಂಭಿಸಿ ಪೊಲೀಸರ ಜೊತೆ ವಾಗ್ವಾದ ನಡೆದಿದ್ದು, ಸ್ಥಳದಲ್ಲಿ ವಾತಾವರಣ ನಿರ್ಮಾಣವಾಗಿದೆ.

ಕೇವಲ ಹತ್ತಿಪ್ಪತ್ತು ಸಾವಿರ ರೂ ಗಳಿಗೆ ಬಡ ರೈತರಿಂದ ಭೂಮಿ ಬರೆಸಿಕೊಂಡಿರುವ ಕೆಶಿಫ್ ಅಧಿಕಾರಿಗಳು, ಕೋರ್ಟ್ ಗೆ ದಾವೆ ಹಾಕಿದ ಶ್ರೀಮಂತ ರೈತರಿಗೆ ಗುಂಟೆಗೆ 3 ಲಕ್ಷ ರೂ ಪರಿಹಾರ ನೀಡಿದ್ದಾರೆ ಆದರೆ ನಮಗೆ ವಂಚನೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ನಿರತ ರೈತರ ಮೇಲೆ ಬಲಪ್ರಯೋಗಿಸಲು ಪೊಲೀಸರು ಮುಂದಾಗಿದ್ದು,ಇದಕ್ಕಾಗಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ಸ್ಥಳಕ್ಕೆ ಕರೆಸಲಾಗಿದೆ.

ರೈತರನ್ನು ಬಂಧಿಸಿ ಕರೆದೊಯ್ಯಲು ಹತ್ತಾರು ವಾಹನ ಸ್ಥಳದಲ್ಲಿದ್ದು, ಮತ್ತೊಂದೆಡೆ ಲಾಠಿ ಪ್ರಹಾರಕ್ಕೆ ಸಿದ್ಧತೆ ನಡೆದಿದೆ.ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಅಧಿಕಾರಿ ಮತ್ತು ಪೊಲೀಸರ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

lokesh

Recent Posts

ರಾಜೀನಾಮೆ ಹಿಂಪಡೆದ ರಾಮಲಿಂಗಾರೆಡ್ಡಿ: ಸರ್ಕಾರಕ್ಕೆ ಎದುರಾಗಿದ್ದ ಕಂಟಕ ತಾತ್ಕಾಲಿಕ ನಿವಾರಣೆ

ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…

13 hours ago

ಛತ್ತೀಸ್‌ಗಢದಲ್ಲಿ ಎಬೋಲಾ ಭೀತಿ: ಮೂವರು ಆಫ್ರಿಕಾ ಪ್ರಜೆಗಳಿಗೆ 21 ದಿನ ಕ್ವಾರಂಟೈನ್‌

ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್‌ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್‌ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…

13 hours ago

ಬೊಮ್ಮನದೊಡ್ಡಿ ಬಳಿ ಚಿರತೆ ಸಂಚಾರ: ಗ್ರಾಮಸ್ಥರಲ್ಲಿ ಆತಂಕ

ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್‌ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…

13 hours ago

ಕೇರಳದಲ್ಲಿ ಭಾರೀ ಮಳೆ: ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್‌, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ…

14 hours ago

ಅಣ್ಣಾಮಲೈ ಬೆನ್ನಲ್ಲೇ ಮತ್ತೆರಡು ವಿಕೆಟ್‌ ಪತನ

ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್‌ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್‌ ಪತನಗೊಂಡಿದೆ. ರಾಜ್ಯ…

15 hours ago

ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್‌ ಪಡೆಯಲು ಒಪ್ಪಿದ್ದಾರೆ: ರಣದೀಪ್‌ ಸಿಂಗ್‌ ಸುರ್ಜೇವಾಲ

ಬೆಂಗಳೂರು: ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್‌ ಪಡೆದು ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌…

15 hours ago